ಪಶು ಚಿಕಿತ್ಸಾಲಯಗಳಲ್ಲಿ ಸಿಬ್ಬಂದಿ ಕೊರತೆ


Team Udayavani, Mar 9, 2019, 11:39 AM IST

ray-1.jpg

ಹಟ್ಟಿಚಿನ್ನದಗಣಿ: ಗುರುಗುಂಟಾ, ಗೆಜ್ಜಲಗಟ್ಟಾ, ಆನ್ವರಿಗಳಲ್ಲಿ 3 ಪಶು ಚಿಕಿತ್ಸಾಲಯಗಳಿದ್ದು, ಅಗತ್ಯ ಸಿಬ್ಬಂದಿ ಇಲ್ಲದೇ ಸೂಕ್ತ ಚಿಕಿತ್ಸೆ ದೊರೆಯದೇ ರಾಸುಗಳು ಮೃತಪಡುತ್ತಿವೆ.

ಒಂದು ಚಿಕಿತ್ಸಾಲಯಕ್ಕೆ 3 ಸಿಬ್ಬಂದಿ ನೇಮಕ ಮಾಡಲಾಗಿದೆ. ಆದರೆ ಒಂದು ಕೇಂದ್ರ ಸರಾಸರಿ ಸುಮಾರು 51 ಹಳ್ಳಿಗಳ ಜಾನುವಾರುಗಳಿಗೆ ಸೇವೆ ಒದಗಿಸಬೇಕಿದೆ. ಕೇಂದ್ರಕ್ಕೆ ಬಂದು ಹೋಗುವ ರಾಸುಗಳಿಗೆ ಚಿಕಿತ್ಸೆ ನೀಡುತ್ತ ಕುಳಿತರೆ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಸೇವೆ ಒದಗಿಸಲು ಆಗುತ್ತಿಲ್ಲ. ಹಳ್ಳಿಗಳಿಗೆ ಭೇಟಿ ನೀಡಿ ಚಿಕಿತ್ಸೆಗೆ ಹೋಗಬೇಕಾದರೆ ಕೇಂದ್ರಕ್ಕೆ ಬೀಗ ಜಡಿದೇ ಹೋಗುವ ಅನಿವಾರ್ಯತೆ ಇದೆ. ಗುರುಗುಂಟಾ ವ್ಯಾಪ್ತಿಯಲ್ಲಿ ಕನಿಷ್ಠ 6 ಪಶು ಚಿಕಿತ್ಸಾಲಯಗಳಿರಬೇಕು. ಆದರೆ ಇರುವ ಒಂದು ಕೇಂದ್ರದಲ್ಲಿರುವ ಮೂರು ಜನ ಸಿಬ್ಬಂದಿಯಿಂದ 70 ಹಳ್ಳಿ ಹಾಗೂ 180ಕ್ಕೂ ಹೆಚ್ಚು ದೊಡ್ಡಿಗಳ ಪಶುಗಳಿಗೆ ಸೇವೆ ಒದಗಿಸುವಲ್ಲಿ ಇಲಾಖೆ ಹಿಂದೆ ಬಿದ್ದಿದೆ. 

ಪುಂಡ ಪೋಕರಿಗಳ ಹಾವಳಿ: ಇನ್ನು ಗೆಜ್ಜಲಗಟ್ಟಾ ಪಶು ಚಿಕಿತ್ಸಾಲಯವಂತೂ ಗುಟ್ಕಾ, ಮದ್ಯಪಾನ ಕೇಂದ್ರವಾಗಿ ಮಾರ್ಪಟ್ಟಿದೆ. ಹಳ್ಳಿಗಳಿಗೆ ಚಿಕಿತ್ಸೆಗೆ ಸಿಬ್ಬಂದಿ ಹೋಗುವುದನ್ನೇ ಪುಂಡ ಪೋಕರಿಗಳು ಕಾದು ಕುಳಿತು, ನಂತರ ತಮ್ಮ ಚಟುವಟಿಕೆ ಆರಂಭಿಸುತ್ತಿದ್ದಾರೆ. ಪುಂಡರ ಹಾವಳಿಗೆ ಇಲಾಖೆ ಸುಮ್ಮನೆ ಕುಳಿತಿರುವುದು ವಿಪರ್ಯಾಸ.

ನಾವೇನು ಮಾಡೋಣ?: ಆನ್ವರಿ ಕೇಂದ್ರ ತೆಗೆಯುವುದೇ ಅಪರೂಪ. ಯಾವಾಗಲೂ ಮುಚ್ಚಿದಂತೆಯೇ ಇರುತ್ತದೆ. ಸಿಬ್ಬಂದಿ ವಿಚಾರಿಸಿದರೆ ಸಿಬ್ಬಂದಿ ಕೊರತೆಯಿದೆ. ನಾವು ಅಗತ್ಯ ಚಿಕಿತ್ಸೆ ನೀಡುತ್ತಿದ್ದೇವೆ. ಇರುವ 3 ಸಿಬ್ಬಂದಿ ಏನು ಮಾಡೋದು ಹೇಳಿ ಎಂದು ಪ್ರಶ್ನಿಸುತ್ತಾರೆ. ಇನ್ನು ಹಟ್ಟಿ ವಿಚಾರಕ್ಕೆ ಬಂದರೆ ಪಪಂ ಒಂದು ತಾಲೂಕಾಗುವ ಎಲ್ಲ ಅರ್ಹತೆ ಹೊಂದಿದ್ದು, ಜಿಲ್ಲೆಯಲ್ಲಿಯೇ ಜನಸಂಖ್ಯೆಯಲ್ಲಿ 4ನೇ ಸ್ಥಾನ ಹೊಂದಿದ ಪ್ರದೇಶದಲ್ಲಿ ಒಂದೇ ಒಂದು ಪಶು ಚಿಕಿತ್ಸಾ ಕೇಂದ್ರವಿಲ್ಲದಿರುವುದು ನೋವಿನ ಸಂಗತಿ. 

ಸಚಿವರ ನಡೆಗೆ ಬೇಸರ: ಪಶು ಸಂಗೋಪನಾ ಸಚಿವರು ಅಗತ್ಯ ಸಿಬ್ಬಂದಿ ನೇಮಕ ಮಾಡಿ ಅನುಕೂಲ ಕಲ್ಪಿಸುವುದು ಬಿಟ್ಟು, ಪಶು, ಮತ್ಸ್ಯಮೇಳ ಮಾಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪಶು ಸಂಗೋಪನಾ ಡಿಪ್ಲೋಮಾ ಪದವೀಧರರ ಸಂಘದ ರಾಜ್ಯಾಧ್ಯಕ್ಷ ಅಶ್ವಕ್‌ ಭಾಗವಾನ, ಜಿಲ್ಲಾಧ್ಯಕ್ಷ ಸೈಯದ್‌ ಖಾದ್ರಿ ಖಾರವಾಗಿ ಪ್ರಶ್ನಿಸುತ್ತಾರೆ.

ಡಿಪ್ಲೋಮಾ ಪದವೀಧರರ ಹುದ್ದೆಗಳ ಭರ್ತಿಗೆ ನಾವು ಪಶು ಸಚಿವರ ಆದಿಯಾಗಿ ಮುಖ್ಯಮಂತ್ರಿವರೆಗೆ ಮನವಿ ಸಲ್ಲಿಸಿದ್ದರೂ ಸ್ಪಂದಿಸಿಲ್ಲ. ಶೀಘ್ರ ಹುದ್ದೆ ಭರ್ತಿಗೆ ಒತ್ತಾಯಿಸಿ ನಮ್ಮ ಸಂಘಟನೆ ವತಿಯಿಂದ ಪಶು ಇಲಾಖೆ ಸಚಿವರ ಮನೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
   ಸೈಯದ್‌ ಖಾದ್ರಿ, ಪಶು ಸಂಗೋಪನಾ ಡಿಪ್ಲೋಮಾ ಪದವೀಧರ ಸಂಘದ ಜಿಲ್ಲಾಧ್ಯಕ್ಷ

ಖಾಲಿ ಹುದ್ದೆ ಭರ್ತಿ ಮಾಡಿಕೊಂಡರೆ ಸೇವೆ ಒದಗಿಸಬಹುದು. ಜಿಲ್ಲಾ ಉಪನಿರ್ದೇಶಕರು ಈ ಕುರಿತು ತೀರ್ಮಾನ ಕೈಗೊಳ್ಳಬೇಕಿದೆ. 
   ರಾಚಪ್ಪ, ಲಿಂಗಸುಗೂರು ಪಶು ಇಲಾಖೆ ಸಹಾಯಕ ನಿರ್ದೇಶಕ  

„ಅಮರೇಶ ನಾಯಕ

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.