ಶಿಕ್ಷಕರ ವರ್ಗಾವಣೆಯಲ್ಲಿ ಕಟ್ಟುನಿಟ್ಟಿನ ಕ್ರಮ
Team Udayavani, Jan 27, 2018, 3:51 PM IST
ರಾಯಚೂರು: ಶಿಕ್ಷಕರ ನೇಮಕಾತಿ ಪ್ರಕಿಯೆ ಅಂತಿಮ ಅಂತದಲ್ಲಿದ್ದು, ಹೈ-ಕ ಭಾಗದಲ್ಲಿ ಕೆಲ ವಿಷಯಗಳಿಗೆ ನಿರೀಕ್ಷೆಯಷ್ಟು ಅರ್ಜಿ ಬಂದಿಲ್ಲ. ಉಳಿದ ಹುದ್ದೆಗಳ ನೇಮಕಕ್ಕೆ ಶೀಘ್ರದಲ್ಲೇ ಮರು ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವಿರ್ ಸೇಠ್ಠ್… ತಿಳಿಸಿದರು.
ನಗರದ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈ-ಕ ಭಾಗಕ್ಕೆ 4750 ಹುದ್ದೆಗಳನ್ನು ಮೀಸಲಿಡಲಾಗಿತ್ತು. ಆದರೆ, ಕೆಲ ಹುದ್ದೆಗಳಿಗೆ ನಿರೀಕ್ಷಿತ ಮಟ್ಟದ ಅರ್ಜಿಗಳು ಸಲ್ಲಿಕೆಯಾಗಿಲ್ಲ. ಒಂದು ತಿಂಳಗೊಳಗೆ ಶಿಕ್ಷಕರ ನೇಮಕ ಪ್ರಕ್ರಿಯೆ ಮುಗಿಸಲಾಗುವುದು ಎಂದು ತಿಳಿಸಿದರು. ಶಿಕ್ಷಕರ ವರ್ಗಾವಣೆ ವಿಚಾರದಲ್ಲಿ ಸರ್ಕಾರ
ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಈ ಮುಂಚೆ ಶೇ.15ರಷ್ಟಿದ್ದ ಅನುಪಾತ ಈಗ ಶೇ.20ಕ್ಕೆ ಹೆಚ್ಚಿಸಿದ್ದೇವೆ. ಆದರೆ, ದಂಪತಿ ವರ್ಗಾವಣೆ ವಿಚಾರದಲ್ಲಿ
ನಾವೇನು ಮಾಡಲು ಬರುವುದಿಲ್ಲ. ಸತಿ ಪತಿ ಇಬ್ಬರು ಸರ್ಕಾರಿ ಹುದ್ದೆಯಲ್ಲಿದ್ದರೂ ಕನಿಷ್ಠ ಐದು ವರ್ಷಗಳಾದರೂ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯ. ಈ ಬಗ್ಗೆ ನಾವು ಮೊದಲೇ ಮುಚ್ಚಳಿಕೆ ಬರೆಯಿಸಿಕೊಳ್ಳುತ್ತಿದ್ದೇವೆ.
ಇಂಥ ಸಮಸ್ಯೆಗಳ ನಿವಾರಣೆಗೇ ನಾವು ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುತ್ತಿರುವುದು ಎಂದು ತಿಳಿಸಿದರು. ಕೇಂದ್ರ ಸರ್ಕಾರ ಜಿಲ್ಲೆಗೆ ಐಐಐಟಿ ಮಂಜೂರು ಮಾಡಿರುವುದು ಸ್ವಾಗತಾರ್ಹ. ಅದಕ್ಕೆ ಬೇಕಾದ ಸ್ಥಳ ಹಾಗೂ ಸಹಕಾರ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ.
ಆದರೆ, ಜಿಲ್ಲೆಗೆ ಏಮ್ಸ್ ನೀಡುವಂತೆ ನಮ್ಮ ಸರ್ಕಾರ ಮಾಡಿದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಏಮ್ಸ್ ಸಂಸ್ಥೆಯನ್ನು ಮೊದಲು ಕಲಬುರಗಿಗೆ ನೀಡಬೇಕು ಎಂಬ ಒತ್ತಡಗಳಿದ್ದವು. ಆದರೆ, ನಂತರ ರಾಯಚೂರಿಗೆ ಕೊಡಿಸುವ ಬಗ್ಗೆ ನಿರ್ಧರಿಸಲಾಗಿತ್ತು ಎಂದು ವಿವರಿಸಿದರು.
ತುಂಗಭದ್ರಾ ಜಲಾಶಯದಿಂದ ತೆಲಂಗಾಣದ ಪಾಲಿನ ಎರಡು ಟಿಎಂಸಿ ಅಡಿ ನೀರು ಕೇಳಲಾಗಿತ್ತು. ಈಗ ಟಿಬಿ ಡ್ಯಾಂನಿಂದ ನೀರು ಪಡೆದು ಕೃಷ್ಣಾ ನದಿಯಿಂದ ನೀಡುವ ಭರಸವೆ ನೀಡಿದ್ದೇವೆ. ಅದಕ್ಕೆ ಸಕರಾತ್ಮಕ ಪ್ರತಿಕ್ರಿಯೆ ಬಂದಿದೆ. ಆದರೆ, ಆಂಧ್ರಪ್ರದೇಶದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದರು.
ಮುಜರಾಯಿ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುವ ವಿಚಾರವಾಗಿ ಫೆ.5ರಂದು ಮುಜರಾಯಿ ಖಾತೆ ಸಚಿವ ಹಾಗೂ ಕಮಿಶನರ್ ಸಭೆ ಕರೆಯಲಾಗಿದೆ ಎಂದು ಸಚಿವ ತನ್ವೀರ್ ಸೇಠ್ಠ್… ತಿಳಿಸಿದರು. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ನಡೆಸುವ ಶಾಲೆಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ. ಈ ಕುರಿತು ಸರ್ಕಾರದ ಮಟ್ಟದಲ್ಲಿ ನಿಯಮಾವಳಿಗೆ ತಿದ್ದುಪಡಿ ತಂದು ಕ್ರಮ ಕೈಗೊಳ್ಳಬೇಕು. ತಾಲೂಕಿನ ಶಕ್ತಿನಗರದಲ್ಲಿ ಕಳೆದ ಐದು ದಿನದಿಂದ ಶಿಕ್ಷಕರು ಹೋರಾಟ ನಡೆಸುತ್ತಿರುವ ವಿಚಾರ ಗಮನಕ್ಕಿದೆ. ಅಂಥ ಸಾಕಷ್ಟು ಶಾಲೆಗಳು ರಾಜ್ಯದಲ್ಲಿವೆ ಎಂದರು. ಶಿಕ್ಷಕರನ್ನು
ಕಾರ್ಮಿಕರೆಂದು ಪರಿಗಣಿಸಲು ಬರುವುದಿಲ್ಲ. ಹೀಗಾಗಿ ಅವರಿಗೆ ಕನಿಷ್ಠ ವೇತನ ಅನ್ವಯ ಆಗುವುದಿಲ್ಲ. ಬದಲಿಗೆ ನಿಯಮ ತಿದ್ದುಪಡಿ ಮಾಡಿ ವೇತನ ಹೆಚ್ಚಿಸುವ ಕ್ರಮ ಕೈಗೊಳ್ಳಲಾಗುವುದು.
ತನ್ವಿರ್ ಸೇಠ್ಠ್…, ಪ್ರೌಢ ಶಿಕ್ಷಣ ಖಾತೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ