ಸ್ಟ್ರಾಂಗ್‌ ರೂಂ ಸೇರಿದ ಮತಯಂತ್ರ-ಭದ್ರತೆ

ಬಾಬು ಅಡ್ಡಂಕಿ ಜತೆ ಅನೇಕ ಅಧಿಕಾರಿಗಳು ವಿವಿಧ ಪಕ್ಷಗಳ ಮುಖಂಡರು ಭೇಟಿ ನೀಡಿ ಪರಿಶೀಲಿಸಿದರು.

Team Udayavani, Apr 19, 2021, 6:48 PM IST

Poll

ರಾಯಚೂರು: ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಬಳಿಕ ಎಲ್ಲ ಮತಯಂತ್ರಗಳನ್ನು ನಗರದ ಎಸ್‌ಆರ್‌ಪಿಎಸ್‌ ಕಾಲೇಜಿನಲ್ಲಿ ಸ್ಥಾಪಿಸಿದ ಸ್ಟ್ರಾಂಗ್‌ ರೂಂನಲ್ಲಿರಿಸಿ ಸೀಲ್‌ ಹಾಕಲಾಯಿತು. ಮೂರು ಹಂತದ ಭದ್ರತೆ ಜತೆಗೆ ನಿರಂತರ 24/7 ಸಿಸಿ ಕ್ಯಾಮರಾ ಕಣ್ಗಾವಲು ಒದಗಿಸಲಾಗಿದೆ.

305 ಮತಗಟ್ಟೆಗಳಿಂದ ಮತದಾನ ಕಾರ್ಯಕ್ಕೆ ನಿಯೋಜಿಸಿದ್ದ ಸಿಬ್ಬಂದಿ, ಶನಿವಾರ ರಾತ್ರಿ ವೇಳೆಗೆ ಹಿಂದಿರುಗಿದರು. ಮಸ್ಕಿಯ ದೇವನಾಂಪ್ರಿಯ ಅಶೋಕ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ ಮಸ್ಟರಿಂಗ್‌ ಕಾರ್ಯ ಕೈಗೊಳ್ಳಲಾಯಿತು. ಅದೇ ಕಾಲೇಜಿನಲ್ಲಿ ಸಿದ್ಧಪಡಿಸಿದ್ದ ಸ್ಟ್ರಾಂಗ್‌ ರೂಂನಲ್ಲಿ ಮತಪೆಟ್ಟಿಗಳನ್ನು ಬಿಗಿ ಭದ್ರತೆಯ ನಡುವೆ ಇರಿಸಲಾಗಿತ್ತು.

ನಂತರ ಮತ ಎಣಿಕೆ ನಡೆಯಲಿರುವ ರಾಯಚೂರಿನ ಎಸ್‌ಆರ್‌ಪಿಎಸ್‌ ಪದವಿ ಪೂರ್ವ ಕಾಲೇಜಿಗೆ ಶನಿವಾರ ರಾತ್ರಿಯೇ ಬಿಗಿ ಬಂದೋಬಸ್ತ್ ನಡುವೆ ಮತಯಂತ್ರಗಳನ್ನು ತಂದು ಇರಿಸಲಾಯಿತು. ರವಿವಾರ ಬೆಳಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ  ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ್‌, ಚುನಾವಣಾ ವೀಕ್ಷಕರಾದ ಶ್ರೀಧರ ಬಾಬು ಅಡ್ಡಂಕಿ ಜತೆ ಅನೇಕ ಅಧಿಕಾರಿಗಳು ವಿವಿಧ ಪಕ್ಷಗಳ ಮುಖಂಡರು ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ್‌, ಮತದಾನ ಮುಗಿದ ಬಳಿಕ 305 ಮತಗಟ್ಟೆಗಳಲ್ಲಿನ ಇವಿಎಂ ಯಂತ್ರಗಳನ್ನು ಹಾಗೂ ಕಾನೂನು ಬದ್ದ ಲಕೋಟೆಗಳನ್ನು ಎಸ್‌ಆರ್‌ಪಿಎಸ್‌ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿಸಿರುವ ಸ್ಟ್ರಾಂಗ್‌ ರೂಂಗೆ ರಾತ್ರಿಯೇ ತರಲಾಗಿದೆ. ಚುನಾವಣಾ ವೀಕ್ಷಕರು, ಅಭ್ಯರ್ಥಿಗಳು, ಏಜೆಂಟರು, ಚುನಾವಣಾಧಿಕಾರಿಯ ಸಮ್ಮುಖದಲ್ಲಿ ಸ್ಟ್ರಾಂಗ್‌ ರೂಂನಲ್ಲಿ ಮಾಡಿಕೊಳ್ಳಲಾದ ಎಲ್ಲ ಸಿದ್ಧತೆಗಳನ್ನು ತೋರಿಸಲಾಗಿದೆ, ಮತಯಂತ್ರಗಳ ಕಾವಲಿಗೆ ಬಿಗಿ ಭದ್ರತೆ ಅಂದರೆ ಮೂರು ರೀತಿಯ ಭದ್ರತೆ ಒದಗಿಸಲಾಗಿದೆ ಎಂದರು.

ಒಳಗೆ ಕೇಂದ್ರೀಯ ಮೀಸಲು ಪಡೆ, ನಂತರ ಕೆಎಸ್‌ಆರ್‌ಪಿ ಹಾಗೂ ಹೊರಗೆ ಪೊಲೀಸರು ಸೇರಿದಂತೆ ಮೂರು ವಲಯದಲ್ಲಿ ಭದ್ರತೆ ಒದಗಿಸಲಾಗಿದೆ. ಮತಯಂತ್ರಗಳನ್ನು ಸುರಕ್ಷಿತವಾಗಿವೆ. 24 ಗಂಟೆ ವೀಡಿಯೋ ರೆಕಾರ್ಡಿಂಗ್‌ ಮಾಡಲಾಗುತ್ತಿದೆ. ಸ್ಥಳದಲ್ಲಿಯೇ ಅಗ್ನಿ ಶಾಮಕ ಪಡೆಯನ್ನು ಇರಿಸಲಾಗಿದೆ. ಸುರಕ್ಷತಾ ದೃಷ್ಟಿಯಿಂದ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಎಸ್‌ಪಿ ಪ್ರಕಾಶ್‌ ನಿಕ್ಕಂ, ಎಡಿಸಿ ದುರಗೇಶ್‌, ಸಹಾಯಕ ಆಯುಕ್ತರಾದ ರಾಜಶೇಖರ ಡಂಬಳ, ಸಂತೋಷ್‌ ಕಾಮಗೌಡ, ತಹಶೀಲ್ದಾರ್‌ ಡಾ| ಹಂಪಣ್ಣ ಸಜ್ಜನ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದ್ದರು.

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.