ವಿದ್ಯಾರ್ಥಿಗಳ ಬಿಸಿಯೂಟಕ್ಕೆ ಕಳಪೆ ಬೇಳೆ


Team Udayavani, Feb 18, 2022, 5:48 PM IST

22toordal

ಸಿಂಧನೂರು: ಹುಳು ಮಿಶ್ರಿತ ತೊಗರಿ ಬೇಳೆಯನ್ನು ಪೂರೈಕೆ ಮಾಡಿದ ಹಿನ್ನೆಲೆಯಲ್ಲಿ ಆಯಾ ಶಾಲಾ ಮುಖ್ಯಸ್ಥರೇ ವಾಪಸ್‌ ಮಾಡಲಾರಂಭಿಸಿದ್ದಾರೆ.

ತಾಲೂಕಿನಲ್ಲಿ ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಬೇಕಾಗುವ ಬೇಳೆಯಲ್ಲೂ ನಡೆದ ವ್ಯವಹಾರ ಇಂತಹ ಬೆಳವಣಿಗೆಗೆ ಕಾರಣವಾಗಿದೆ.

ಆಯಾ ಶಾಲೆಗಳಿಗೆ ಆಹಾರ ನಾಗರಿಕ ಸರಬರಾಜು ನಿಗಮದಿಂದ ಪೂರೈಕೆಯಾಗಿದ್ದ ಬೇಳೆ ಗುಣಮಟ್ಟ ಸರಿಯಿಲ್ಲವೆಂದು ವಾಪಸ್‌ ಕಳಿಸಲಾಗಿದೆ. ಅದನ್ನು ಸ್ವೀಕರಿಸಿ, ಬೇರೆ ಬೇಳೆಯನ್ನು ಆಹಾರ ನಿಗಮದವರು ವರ್ಗಾಯಿಸಿ ಕೊಡಲಾರಂಭಿಸಿದ್ದಾರೆ.

ತಾಲೂಕಿನ 348 ಸರಕಾರಿ ಶಾಲೆಗಳಿಗೆ ಬಿಸಿಯೂಟಕ್ಕಾಗಿ 310 ಕ್ವಿಂಟಲ್‌ ತೊಗರಿ ಬೇಳೆಗೆ ಬೇಡಿಕೆಯಿದೆ. 54,084 ವಿದ್ಯಾರ್ಥಿಗಳು ಅಕ್ಷರ ದಾಸೋಹ ಯೋಜನೆ ಪ್ರಯೋಜನ ಪಡೆಯುತ್ತಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳಿಗೆ ಕಲಬುರಗಿ ಶಿವಶಕ್ತಿ ಏಜೆನ್ಸಿಯವರ ಮೂಲಕ ತೊಗರಿ ಬೇಳೆಯನ್ನು ಪೂರೈಕೆ ಮಾಡಲಾಗಿದೆ. ಈ ಬೇಳೆಯನ್ನು ನೋಡುತ್ತಿದ್ದಂತೆ ತಾಲೂಕಿನ ಗೊಬ್ಬರಕಲ್‌, ಜವಳಗೇರಾ, ಸಿಂಗಾಪುರ ಶಾಲೆಯ ಸಿಬ್ಬಂದಿ, ಬಿಸಿಯೂಟಕ್ಕೆ ಬಳಸಲು ಸೂಕ್ತವಾಗಿಲ್ಲವೆಂದು ವಾಪಸ್‌ ಮಾಡಿದ್ದಾರೆ.

ಬದಲಾಯಿಸುತ್ತಿರುವ ಸಿಬ್ಬಂದಿ

ಅಕ್ಷರ ದಾಸೋಹ ಯೋಜನೆಗೆ ಸಂಬಂಧಿಸಿ ಹಂಚಿಕೆಯಾದ ತೊಗರಿ ಬೇಳೆಯ ಪೈಕಿ 140 ಚೀಲಗಳನ್ನು ತೆಗೆದು ಇರಿಸಲಾಗಿದೆ. 70 ಕ್ವಿಂಟಲ್‌ನ್ನು ಟೆಂಡರ್‌ ಪಡೆದುಕೊಂಡಿರುವ ಸಂಸ್ಥೆಗೆ ವಾಪಸ್‌ ಕಳುಹಿಸಲಾಗಿದೆ. ಶಾಲಾ ಸಿಬ್ಬಂದಿ ಇದನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ ಸಮಸ್ಯೆ ಬೆಳಕಿಗೆ ಬಂದಿದೆ. ಈಗಾಗಲೇ ಶಾಲೆಗಳಿಗೆ ತಲುಪಿರುವ ದಾಸ್ತಾನು ವಾಪಸ್‌ ನೀಡುತ್ತಿರುವುದರಿಂದ ಸಮಸ್ಯೆ ಬಿಗಡಾಯಿಸಿದೆ. 1,400 ಕ್ವಿಂಟಲ್‌ ಬೇಳೆಯನ್ನು ಕೊಟ್ಟಿರುವ ಸಂಸ್ಥೆಗೆ ಇದರಿಂದ ಬಿಸಿ ತಟ್ಟಲಾರಂಭಿಸಿದೆ.

ಮಾರುಕಟ್ಟೆ ದರ ವ್ಯತ್ಯಾಸ

ಮುಕ್ತ ಮಾರುಕಟ್ಟೆಯಲ್ಲಿ ಗ್ರಾಹಕರು ಖರೀದಿ ಮಾಡುತ್ತಿರುವ ತೊಗರಿ ಬೇಳೆಯ ಬೆಲೆ ಪ್ರತಿ ಕೆಜಿಗೆ 95-110 ರೂ. ದರವಿದೆ. ಆದರೆ, ಸರಕಾರದ ಅಕ್ಷರ ದಾಸೋಹ ಯೋಜನೆಗೆ ಪೂರೈಕೆ ಮಾಡುವ ಏಜೇನ್ಸಿಯವರು 84.50 ರೂ.ಗೆ ಸರಬರಾಜು ಮಾಡುತ್ತಿದ್ದಾರೆ. ಈ ಮಧ್ಯೆ ಉಳಿಕೆ ಮಾರ್ಗ ಅನುಸರಿಸಿದ ಪರಿಣಾಮ ಕಳಪೆ ಬೇಳೆ ಶಾಲೆಗಳಿಗೆ ತಲುಪಿವೆ.

ಆಹಾರ ನಿಗಮದ ಉಗ್ರಾಣದಲ್ಲಿ ಗೋಧಿ ಪಕ್ಕದಲ್ಲಿ ಬೇಳೆ ಇಟ್ಟಿರುವುದ ರಿಂದ ಹುಳು ಬಂದಿವೆ. ನಾನು ಭೇಟಿಗೆ ಹೋದಾಗ ಎಲ್ಲ ಕಡೆ ದೂರುಗಳಿಲ್ಲ. ಸಮಸ್ಯೆ ಇದ್ದ ಕಡೆಗಳಲ್ಲಿ ಆಹಾರ ನಿಗಮ ವ್ಯವಸ್ಥಾಪಕರು ತಕ್ಷಣವೇ ಬದಲಾವಣೆ ಮಾಡಿ ಕೊಟ್ಟಿದ್ದಾರೆ. -ಶರಣಪ್ಪ, ಸಹಾಯಕ ನಿರ್ದೇಶಕ, ಅಕ್ಷರ ದಾಸೋಹ ಯೋಜನೆ, ಸಿಂಧನೂರು

-ಯಮನಪ್ಪ ಪವಾರ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.