ಶಾಲೆಗೆ ಬೀಗ ಹಾಕಿ ಪ್ರತಿಭಟನೆ
Team Udayavani, Jul 7, 2022, 4:08 PM IST
ಮಸ್ಕಿ: ಉಸ್ಕಿಹಾಳ ಗ್ರಾಮದಲ್ಲಿ ಸರಕಾರಿ ಶಾಲೆಗೆ ಖಾಯಂ ಶಿಕ್ಷಿಕರ ನೇಮಕಕ್ಕೆ ಒತ್ತಾಯಿಸಿ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಶಾಲೆಯಲ್ಲಿ ಕಾಯಂ ಶಿಕ್ಷಕರಿಲ್ಲ. ಇದುವರೆಗೆ ಎರವಲು ಮೇಲೆ ಒಬ್ಬರು, ಅತಿಥಿ ಶಿಕ್ಷಕರಾಗಿ ಇನ್ನೊಬ್ಬರಿದ್ದರು. ಆದರೆ, ಅವರು ಕೂಡ ಈಗ ಬೇರೆ ಕಡೆ ಹೋಗಿದ್ದು, ಶಾಲೆಯಲ್ಲಿ ಶಿಕ್ಷಕರೇ ಇಲ್ಲದೇ ಬಾಗಿಲು ಮುಚ್ಚುವ ಪರಿಸ್ಥಿತಿ ಬಂದಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಗ್ರಾಮದ ಶಾಲೆಯಲ್ಲಿ 60 ವಿದ್ಯಾರ್ಥಿಗಳಿದ್ದು, ಶಿಕ್ಷಕರೇ ಇಲ್ಲದೇ ಯಾರ ಬಳಿ ವ್ಯಾಸಂಗ ಮಾಡಬೇಕು ಎಂದು ಪ್ರಶ್ನಿಸಿದರು. ಈ ಕೂಡಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಶಾಲೆಗೆ ಕನಿಷ್ಠ ಇಬ್ಬರು ಶಿಕ್ಷಕರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.
ಎಸ್ಡಿಎಂಸಿ ಅಧ್ಯಕ್ಷ ಮಾರುತಿ, ಗ್ರಾಪಂ ಮಾಜಿ ಅಧ್ಯಕ್ಷ ಮೌನೇಶ ನಾಯಕ, ಗ್ರಾಮಸ್ಥರಾದ ಕನಕರಾಯ, ರಂಗನಗೌಡ, ರಮೇಶ, ಈರಪ್ಪ, ಮಾನಪ್ಪ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…
Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ
Sindhanur; ಒಂದೇ ದಿನ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ
MUST WATCH
ಹೊಸ ಸೇರ್ಪಡೆ
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Rachana inder: ಮರ್ಡರ್ ಮಿಸ್ಟರಿ 4 ಎನ್ 6