ಶವಸಂಸ್ಕಾರ ಕಂಡು ಬೆಚ್ಚಿಬಿದ್ದ ವಿದ್ಯಾರ್ಥಿಗಳು


Team Udayavani, Mar 15, 2022, 6:15 PM IST

26students

ಮಸ್ಕಿ: ಪಟ್ಟಣದ ಹೊರವಲಯದಲ್ಲಿನ ನಿರ್ಜನ ಪ್ರದೇಶ, ಸುತ್ತಲೂ ಜಾಲಿಮರಗಿಡ, ಸಾಲದ್ದಕ್ಕೆ ಪಕ್ಕದಲ್ಲಿಯೇ ಸ್ಮಶಾನ, ನಿತ್ಯ ಶವದಹನದ ಚಿತ್ರಣ!.

ಲಿಂಗಸುಗೂರು ಮಾರ್ಗದಲ್ಲಿರುವ ಸರ್ಕಾರಿ ಮೆಟ್ರಿಕ್‌ ಪೂರ್ವ (ಬಿಸಿಎಂ) ಬಾಲಕರ ವಸತಿ ನಿಲಯದ ಸುತ್ತಲಿನ ಪರಿಸ್ಥಿತಿ ಇದು. ಇಂತಹ ಚಿತ್ರಣಕ್ಕೆ ಬೆದರಿದ ವಸತಿ ನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್‌ ಸಾಹವಾಸವೇ ಬೇಡವೆಂದು ಊರು ಸೇರಿದ್ದಾರೆ.

ಕಳೆದ ಕೆಲವು ತಿಂಗಳಿಂದ ವಸತಿ ನಿಲಯದಲ್ಲಿ ಇಂತಹ ಭಯದ ವಾತಾವರಣ ಏರ್ಪಟ್ಟಿದ್ದು, ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮಾತ್ರ ಇತ್ತ ಮುಖ ಮಾಡಿಲ್ಲ. ಹೀಗಾಗಿ ವಸತಿ ನಿಲಯವೇ ಬಿಕೋ ಎನ್ನುತ್ತಿದ್ದು ಇದ್ದ ಕೆಲವೇ ವಿದ್ಯಾರ್ಥಿಗಳು ಜೀವಭಯದಲ್ಲಿ ಕಾಲ ಕಳೆಯುತ್ತಿದ್ದಾರೆ.

ಏನಿದು ಪರಿಸ್ಥಿತಿ?

ಮೆಟ್ರಿಕ್‌ ಪೂರ್ವ ವಸತಿ ನಿಲಯಕ್ಕೆ ಎಲ್ಲೂ ಜಾಗ ಲಭ್ಯವಿಲ್ಲದ ಕಾರಣ ಲಿಂಗಸುಗೂರು ರಸ್ತೆಯಲ್ಲಿ ಹಾಸ್ಟೆಲ್‌ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆದರೆ ಇತ್ತೀಚೆಗೆ ಇದರ ಪಕ್ಕದಲ್ಲಿಯೇ ಸ್ಮಶಾನಕ್ಕೆ ಜಾಗೆ ನೀಡಲಾಗಿದ್ದು, ಶವ ಸಂಸ್ಕಾರ, ಶವ ದಹನಕ್ಕೆ ಮಂಟಪ ಕೂಡ ನಿರ್ಮಾಣ ಮಾಡಲಾಗಿದೆ. ಪರಿಣಾಮ ಇಲ್ಲಿನ ವಿದ್ಯಾರ್ಥಿಗಳಿಗೆ ತೀವ್ರ ಕಳವಳ ಉಂಟು ಮಾಡಿದೆ. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿಗಳಾಗಿದ್ದರಿಂದ ಸಹಜವಾಗಿಯೇ ಭಯ ಹೆಚ್ಚಾಗಿದ್ದು, ವಸತಿ ನಿಲಯದ ಸಮರ್ಪಕ ನಿರ್ವಹಣೆ ಕೊರತೆ, ಅಧಿಕಾರಿಗಳ ಅನುಪಸ್ಥಿತಿಯೂ ವಿದ್ಯಾರ್ಥಿಗಳಲ್ಲಿ ಭಯ ಹೆಚ್ಚುವಂತೆ ಮಾಡಿದೆ.

ಶವ ದಹನ ಕ್ರಿಯೆ ಮಾಡುವ ವೇಳೆ ಹೊಗೆ ಉಂಟಾಗಿ ವಸತಿ ನಿಲಯ ಒಳಗೆ ತುಂಬಿಕೊಳ್ಳುತ್ತಿದೆ. ಹೊಗೆ ತಡೆಯಲು ವಸತಿ ನಿಲಯ ಪಕ್ಕದಲ್ಲಿ ಗೋಡೆ ಕಟ್ಟಿದ್ದರೂ ಪ್ರಯೋಜನವಾಗಿಲ್ಲ. ವಸತಿ ನಿಲಯದ ಕೋಣೆಗಳಿಗೆ ಹೊಗೆ ಆವರಿಸಿಕೊಳ್ಳುತ್ತಿದ್ದು, ವಿದ್ಯಾರ್ಥಿಗಳಿಗೆ ವಸತಿ ನಿಲಯ ವಾಸ “ವನವಾಸ’ ಆಗಿದೆ. ಭೂತ ಬಂಗಲೆಯಂತಾಗಿರುವ ಹಾಸ್ಟೆಲ್‌ ಸ್ಥಿತಿ ಕಂಡು ವಿದ್ಯಾರ್ಥಿಗಳು ಜ್ವರಪೀಡಿತರಾಗುತ್ತಿದ್ದಾರೆ. ನೆರವಿಗಾಗಿ ಕನಿಷ್ಟ ರಾತ್ರಿ ಕಾವಲುಗಾರರನ್ನು ಇಲ್ಲಿ ನೇಮಿಸಿಲ್ಲ. ಹೀಗಾಗಿ ಹಾಸ್ಟೆಲ್‌ ಸಹವಾಸ ಬೇಡ ಎಂದು ನಾನಾ ಹಳ್ಳಿಗಳ ವಿದ್ಯಾರ್ಥಿಗಳು ವಸತಿ ನಿಲಯಕ್ಕೆ ಗುಡ್‌ ಬೈ ಹೇಳಿದ್ದಾರೆ. ವಸತಿ ನಿಲಯದ ಒಟ್ಟು 50 ವಿದ್ಯಾರ್ಥಿಗಳ ಪೈಕಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂತಹ ಚಿತ್ರಣಕ್ಕೆ ಬೇಸತ್ತು ಮನೆಗೆ ಹೋಗಿದ್ದಾರೆ.

ಸೌಲಭ್ಯಗಳೂ ಇಲ್ಲ

ವಸತಿ ನಿಲಯದಲ್ಲಿ ಸ್ನಾನಗೃಹ, ಶೌಚಾಲಯಗಳ ಸೌಲಭ್ಯವೂ ಇಲ್ಲ. ವಸತಿ ನಿಲಯ ಆವರಣದಲ್ಲಿಯೇ ಬಯಲು ಪ್ರದೇಶದಲ್ಲಿ ಸ್ನಾನ ಮಾಡಿದರೆ, ಬಹಿರ್ದೆಸೆಗಾಗಿ ಬಯಲು ಪ್ರದೇಶವನ್ನೇ ವಿದ್ಯಾರ್ಥಿಗಳು ಅವಲಂಬಿಸಿದ್ದಾರೆ. ಸುತ್ತಲೂ ಜಾಲಿಗಿಡ, ಸ್ಮಶಾನವಿದ್ದರಿಂದ ಒಂದು-ಎರಡಕ್ಕೂ ವಿದ್ಯಾರ್ಥಿಗಳು ಹೆದರುವ ಸಮಸ್ಯೆ ಉಂಟಾಗಿದೆ. ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿದರೂ ಮಸ್ಕಿ ಪಟ್ಟಣದಲ್ಲಿನ ವಸತಿ ನಿಲಯದ ಚಿತ್ರಣ ಮಾತ್ರ ಭೂತ-ಪ್ರೇತಗಳ ಅವಾಸ ಸ್ಥಾನವಾಗಿದೆ. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಇತ್ತ ತಿರುಗಿ ನೋಡಿ ಹಾಸ್ಟೆಲ್‌ ವಿದ್ಯಾರ್ಥಿಗಳ ಸಮಸ್ಯೆಗೆ ಇತಿಶ್ರೀ ಹಾಡಬೇಕಿದೆ.

ವಸತಿ ನಿಲಯ ಪಕ್ಕದಲ್ಲಿ ಸ್ಮಶಾನ ಭೂಮಿ ಇರುವ ಕಾರಣ ರಾತ್ರಿ ಕಾವಲುಗಾರರನ್ನು ನೇಮಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಸತಿ ನಿಲಯ ಬೇರೆ ಕಡೆ ಶಿಫ್ಟ್‌ ಮಾಡಬೇಕು ಎಂದು ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. -ಹೊನ್ನಪ್ಪ, ವಸತಿ ನಿಲಯ ಮೇಲ್ವಿಚಾರಕ, ಮಸ್ಕಿ

ವಸತಿ ನಿಲಯದ ಸುತ್ತಮುತ್ತಲಿನ ಪರಿಸ್ಥಿತಿ ಸರಿಯಾಗಿಲ್ಲ. ರಾತ್ರಿ ಹೊತ್ತು ಓದು-ಬರೆಯಲಿರಲಿ, ಒಂದು-ಎರಡಕ್ಕೂ ಹೆದರಿಕೆಯಾಗುತ್ತಿದೆ. ಹೀಗಾಗಿ ಇದನ್ನು ಸ್ಥಳಾಂತರ ಮಾಡಿ ಅನುಕೂಲ ಮಾಡಿಕೊಡಬೇಕು. -ಹೆಸರು ಹೇಳಲಿಚ್ಛಿಸದ ಹಾಸ್ಟೆಲ್‌ ವಿದ್ಯಾರ್ಥಿ

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.