ನಿತ್ಯ ಅಧ್ಯಯನ ಶೀಲರಾದಾಗ ಮಾತ್ರ ಯಶಸ್ಸು: ಹಿರೇಮಠ


Team Udayavani, Dec 6, 2021, 3:34 PM IST

24lawyer

ಮಾನ್ವಿ: ವಕೀಲರು ನಿತ್ಯ ಅಧ್ಯಯನಶೀಲರಾದಾಗ ಮಾತ್ರ ಪ್ರತಿದಿನ ಜಾರಿಯಾಗುವ ಹೊಸ ಕಾನೂನುಗಳನ್ನು ತಿಳಿಯಲು ಸಾಧ್ಯವಾಗುತ್ತದೆ ಎಂದು ಸಿವಿಲ್‌ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶರಾದ ವಿಜಯಕುಮಾರ.ಎಸ್‌. ಹಿರೇಮಠ ತಿಳಿಸಿದರು.

ಪಟ್ಟಣದ ಸಿವಿಲ್‌ ಮತ್ತು ಪ್ರಥಮ ದರ್ಜೆ ನ್ಯಾಯಾಲಯ ಆವರಣದಲ್ಲಿ ವಕೀಲರ ಸಂಘದ ವತಿಯಿಂದ ನಡೆದ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಕಾನೂನು ಕಾರ್ಯಾಗಾರ ಹಮ್ಮಿಕೊಳ್ಳುವ ಮೂಲಕ ಕಾನೂನಿನ ಜ್ಞಾನವನ್ನು ಕಿರಿಯ ವಕೀಲರಿಗೆ ತಿಳಿಸಿಕೊಡುವ ಮೂಲಕ ಕಕ್ಷಿದಾರರಿಗೆ ಕಾನೂನಿನ ನೆರವನ್ನು ಒದಗಿಸಲು ಸಾಧ್ಯವಾಗುತ್ತದೆ. ತಾಲೂಕಿನಲ್ಲಿ ನೂರಾರು ಕಾನೂನು ಅರಿವು-ನೆರವು ಕಾರ್ಯಕ್ರಮಗಳ ಮೂಲಕ ಸಾಮಾನ್ಯ ಜನರಿಗೆ ಕಾನೂನಿನ ಅರಿವನ್ನು ಮೂಡಿಸಲಾಗಿದೆ ಎಂದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಪಾಟೀಲ್‌ ಮಾತನಾಡಿ, ಸಮಾಜದ ಆರೋಗ್ಯ ಕಾಪಾಡುವವರು, ಸಮಾಜವನ್ನು ಕಟ್ಟುವವರು ವಕೀಲರು. ತಾವು ಬದುಕುವ ಪರಿಸರವನ್ನು ಉತ್ತಮವಾಗಿ ರೂಪಿಸಿಕೊಳ್ಳುವುದಕ್ಕೆ ವಕೀಲರಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬ ವಕೀಲರು ನೈತಿಕ ಮೌಲ್ಯಗಳನ್ನು ಪಾಲಿಸುತ್ತ ಎಲ್ಲರನ್ನು ಪಾಲಿಸುವಂತೆ ಮಾಡುವುದು ವಕೀಲರ ಪ್ರಮುಖ ಕರ್ತವ್ಯವಾಗಿದೆ ಎಂದು ತಿಳಿಸಿದರು.

ವಕೀಲ ವೃತ್ತಿಯಲ್ಲಿ 50 ವರ್ಷ ಪೂರೈಸಿದ ಹಿರಿಯ ನ್ಯಾಯವಾದಿ ಎ.ಬಿ. ಉಪ್ಪಳಮಠ್ ಅವರನ್ನು ಸನ್ಮಾನಿಸಲಾಯಿತು. ನಿವೃತ್ತ ಡಿ.ಜೆ.ಪಿ. ಪಾಟೀಲ್‌, ಮಹಾಂತಪ್ಪ ಅಮರೇಗೌಡ, ಹಿರಿಯ ವಕೀಲರಾದ ಮಲ್ಲನಗೌಡ ಬಿ.ಪಾಟೀಲ್‌, ಶರಣಬಸಪ್ಪ.ಕೆ., ದೊಡ್ಡಬಸಪ್ಪ.ಕೆ., ಮಲ್ಲಿಕಾರ್ಜುನ ಪಾಟೀಲ್‌, ವಕೀಲರ ಸಂಘದ ಮಾಜಿ ಅಧ್ಯಕ್ಷ ಶೇಖರಪ್ಪ ಪಾಟೀಲ್‌, ಬಿ.ಚನ್ನನಗೌಡ, ಗುಮ್ಮಾ ಬಸವರಾಜ, ಅಯ್ಯಪ್ಪ ನಾಯಕ, ಬಿ.ಕೆ. ಅಮರೇಶಪ್ಪ ಸೇರಿದಂತೆ ಇನ್ನಿತರರನ್ನು ವಕೀಲರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ವಕೀಲರ ದಿನಾಚರಣೆ ಅಂಗವಾಗಿ ವಕೀಲರಿಗಾಗಿ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಹಿಂದೂಸ್ಥಾನಿ ಸಂಗೀತಾ ಬಳಗದ ವತಿಯಿಂದ ಸಂಗೀತಾ ಕಾರ್ಯಕ್ರಮ ನಡೆಯಿತು. ಸಹಾಯಕ ಸರಕಾರಿ ಅಭಿಯೋಜಕರಾದ ಅರ್ಚನ ಯಾದವ್‌, ಕಾರ್ಯದರ್ಶಿ ರವಿಕುಮಾರ ಪಾಟೀಲ್‌, ಖಜಾಂಚಿ ಚಂದ್ರು ಮದ್ಲಾಪುರ, ಹಿರಿಯ ನ್ಯಾಯವಾದಿಗಳಾದ ಮಾಳಿಂಗರಾಯ, ಚಂದ್ರಕಲಾ, ಉರುಕುಂದ, ಯಲ್ಲಪ್ಪ ನಾಯಕ ಇದ್ದರು.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.