ಸುಕ್ಷೇತ್ರ ಉಟಕನೂರು ಅಜ್ಜನ ಜಾತ್ರೆ ಇಂದು


Team Udayavani, Jan 28, 2019, 10:39 AM IST

ray-2.jpg

ಕವಿತಾಳ: ಸಮಿಪದ ಸುಕ್ಷೇತ್ರ ಉಟಕನೂರ ಶ್ರೀ ಮರಿಬಸವಲಿಂಗ ಶಿವಯೋಗಿಗಳ ಜಾತ್ರೆ ಬಂದರೆ ಸಾಕು ಸುತ್ತಲಿನ ಗ್ರಾಮದ ಭಕ್ತರಿಗೆ ಸಂಭ್ರಮವೋ, ಸಂಭ್ರಮ. ಎತ್ತಿನ ಗಾಡಿ, ಟಂಟಂ, ಜೀಪು, ಕಾರ್‌, ಬೈಕ್‌ ಸೇರಿ ಸಾರಿಗೆ ಬಸ್‌ಗಳಲ್ಲಿ ಭಕ್ತಸಾಗರವೇ ಹರಿದು ಬರಲಿದೆ.

ಜ.28ರಂದು ನಡೆಯುವ ಶ್ರೀ ಮರಿಬಸವಲಿಂಗ ಶಿವಯೋಗಿಗಳ 28ನೇ ಜಾತ್ರಾ ಮಹೋತ್ಸವವನ್ನು ಶ್ರದ್ಧಾ ಭಕ್ತಿ ಮತ್ತು ಸಂಭ್ರಮದಿಂದ ಆಚರಣೆಗೆ ಈಗಾಗಲೇ ಸಿದ್ಧತೆ ಮಾಡಲಾಗಿದೆ. ಶ್ರೀ ಮರಿಬಸವರಾಜ ದೇಶಿಕೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ವಿವಧ ಧಾರ್ಮಿಕ ಕಾರ್ಯಕ್ರಮಕ್ಕೆ ಜ.11ರಂದು ಚಾಲನೆ ನೀಡಲಾಗಿದೆ.

ಜಾತ್ರೆ ಪ್ರಯುಕ್ತ ಜ.28ರಂದು ಬೆಳಗ್ಗೆ 6 ಗಂಟೆಗೆ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಶಿವಯೋಗಿಗಳ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾ ಮಂಗಳಾರತಿ, ಪೂಜಾ ಕಾರ್ಯಕ್ರಮ ನಡೆಯಲಿವೆ. ಬೆಳಗ್ಗೆ 10 ಗಂಟೆಗೆ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಮಧ್ಯಾಹ್ನ 1 ಗಂಟೆಗೆ ಭಜನೆ, ಡೊಳ್ಳು, ನಂದಿಕೋಲು, ಬ್ಯಾಂಡ್‌ ಸೆಟ್, ವೀರಗಾಸೆ ನೃತ್ಯ, ಕಳಸ ಕನ್ನಡಿ ಕುಂಭೋತ್ಸವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಮರಿ ಬಸವಲಿಂಗ ದೇಶಿಕೇಂದ್ರ ಶಿವಯೋಗಿಗಳ ಭಾವಚಿತ್ರ ಮೆರವಣಿಗೆ ನಡೆಯುವುದು. ಸಂಜೆ 6ಕ್ಕೆ ಹೂವಿನ ರಥೋತ್ಸವ ನಡೆಯಲಿದೆ.

ಇತಿಹಾಸ: ಉಟಕನೂರಲ್ಲಿ ಈರಮ್ಮ ತಾಯಿ ಗರ್ಭದಿಂದ ಶಾಲಿವಾಹನ ಶಕೆ 1841 ಸಿದ್ಧಾರ್ಥಿ ನಾಮ ಸಂವತ್ಸರ ಪುಷ್ಯ ಶುದ್ಧ ಪಂಚಮಿ ಸೋಮವಾರದಂದು ಬಸವಲಿಂಗ ಶಿವಯೋಗಿ ಜನಿಸಿದರು. ಶ್ರೀಗಳು 1991ರ ಜ.7 ರಂದು ಲಿಂಗೈಕ್ಯರಾದರು. ಶ್ರೀಗಳು ಜೀವನ ಪೂರ್ತಿ ಹಲವು ಪವಾಡಗಳನ್ನು ಮಾಡಿ ಈ ಭಾಗದ ನಡೆದಾಡುವ ದೇವರೆಂದೇ ಖ್ಯಾತರಾಗಿದ್ದರು. ಇಂದಿಗೂ ಭಕ್ತರು ಅವರನ್ನು ಮನೆ-ಮನಗಳಲ್ಲಿ ಆರಾಧಿಸುತ್ತಾರೆ.

ಉಟಕನೂರು ಮಠವು ಬೆಳಗಾವಿ ಜಿಲ್ಲೆಯ ಅಂಕಲಗಿ ಮಠ ಶಾಖಾ ಮಠವಾಗಿದೆ. ಶ್ರೀ ಅಡವಿ ಸಿದ್ದೇಶ್ವರರು ಸುಮಾರು 770 ವರ್ಷಗಳವರೆಗೆ ಬದುಕಿದ್ದಾರೆ ಎಂಬ ಪ್ರತೀತಿ ಇದೆ. ಇವರ ಮಾರ್ಗದರ್ಶನದಲ್ಲಿ ಸಿಂಧನೂರು ತಾಲೂಕಿನ ಅಲಬನೂರು ಶ್ರೀ ಬಸವಲಿಂಗ ದೇಶಿಕೇಂದ್ರ ಶಿವಯೋಗಿಗಳು, ಶ್ರೀ ಅಂಕಲಗಿ ಶ್ರೀ ಅಡವಿಸಿದ್ಧೇಶ್ವರರು ಮೂಲಮಠ ಅಲಬನೂರು ಹಾಗೂ ಉಟಕನೂರು ಶ್ರೀಮಠವನ್ನು ಸ್ಥಾಪಿಸಿದ್ದಾರೆ.

ಭರದ ಸಿದ್ಧತೆ: ಜಾತ್ರಾ ಮಹೋತ್ಸವದಂಗವಾಗಿ ಶ್ರೀಮಠಕ್ಕೆ ಸುಣ್ಣ ಬಣ್ಣ ಹಚ್ಚಲಾಗಿದೆ. ಜಗಮಗಿಸುವ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ. ಜಾತ್ರೆಗೆ ಬರುವ ಭಕ್ತರಿಗಾಗಿ ಕುಡಿಯುವ ನೀರು, ರಸ್ತೆ ಸಂಪರ್ಕ, ವಿದ್ಯುತ್‌ ದೀಪದ ವ್ಯವಸ್ಥೆ, ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸುವಲ್ಲಿ ಶ್ರೀಮಠ ವ್ಯವಸ್ಥೆ ಕಲ್ಪಿಸಿದೆ.

ಗೌರವ ಸನ್ಮಾನ: ಜ.27ರಂದು ವೀರಯೋಧರಿಗೆ, ಕೃಷಿ ಸಾಧಕರಿಗೆ, ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಸಲ್ಲಿಸಿದವರಿಗೆ ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರಿಂದ ಉಪನ್ಯಾಸ ಕಾರ್ಯಕ್ರಮ, ವಿವಿಧ ಕಲಾ ತಂಡದಿಂದ ನೃತ್ಯ, ನಾಟಕ ಪ್ರದರ್ಶನ, ಸಂಗೀತ ಕಾರ್ಯಕ್ರಮ ಯಶಸ್ವಿಯಾಗಿ ನಡೆದವು.

ಒತ್ತಾಯ: ಶ್ರೀಮಠಕ್ಕೆ 300 ವರ್ಷಗಳ ಇತಿಹಾಸ ಇದೆ. ಶ್ರೀಮಠದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಹೆಚ್ಚಿನ ಆಸಕ್ತಿ ವಹಿಸಬೇಕಾಗಿದೆ. ಹಳ್ಳಕ್ಕೆ ಸೇತುವೆ ನಿರ್ಮಿಸುವ ಮೂಲಕ ಬಳಗಾನೂರು, ಮಸ್ಕಿ, ಬೆಳ್ಳಿಗನೂರು ಭಕ್ತರಿಗೆ ರಸ್ತೆ ಸಂಪರ್ಕ ಕಲ್ಪಿಸಬೇಕು ಎಂದು ‌ ಭಕ್ತ ಬಸನಗೌಡ ಹರ್ವಾಪುರ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.