ಬೇಸಿಗೆ ಬೆಳೆಗಿಲ್ಲ ನೀರು


Team Udayavani, Nov 19, 2018, 1:10 PM IST

ray-2.jpg

ಗಂಗಾವತಿ: ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಿರುವ ಕಾರಣ ಸದ್ಯ ಬೆಳೆದು ನಿಂತ ಭತ್ತದ ಬೆಳೆಗೆ ಜನವರಿವರೆಗೂ ನೀರು ಹರಿಸಬೇಕು. ಬೇಸಿಗೆ ಹಂಗಾಮಿನ ಬೆಳೆಗೆ ನೀರು ಹರಿಸದೇ ಕುಡಿಯಲು ಮಾತ್ರ ನೀರು ಹರಿಸಲು ಮುನಿರಾಬಾದ್‌ನಲ್ಲಿ ಜರುಗಿದ ನೀರಾವರಿ ಸಲಹಾ ಸಮಿತಿ ಸಭೆಯು ರೈತರ ವಿರೋಧದ ಮಧ್ಯೆ ತೀರ್ಮಾನ ಕೈಗೊಂಡಿದೆ.

ರವಿವಾರ ನಡೆದ ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ರೈತರು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗವೂ ಜರುಗಿತು. ಈ ಭಾರಿ ಜಲಾನಯನ
ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಜಲಾಶಯದಲ್ಲಿ 125 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಸರಿಯಾಗಿ ನಿರ್ವಹಣೆ ಮಾಡದೇ ನೀರಿನ್ನು ಪೋಲು ಮಾಡಲಾಗಿದೆ.
ತೆಲಂಗಾಣ-ಆಂಧ್ರಪ್ರದೇಶಕ್ಕೆ ನದಿಯ ಮೂಲಕ ನೀರನ್ನು ಹರಿಸಲಾಗಿದ್ದು, ರಾಜ್ಯದ ರೈತರ ಹಿತ ಕಡೆಗಣಿಸಲಾಗಿದೆ.

ಜೂನ್‌-ಜುಲೈನಲ್ಲಿ ಐಸಿಸಿ ಸಭೆ ನಡೆಸಿ ಮುಂಚಿತವಾಗಿ ನೀರು ಹರಿಸಿದರೆ ಆಗಸ್ಟ್‌-ಸೆಪ್ಟಂಬರ್‌ನಲ್ಲಿ ಸುರಿದ ಮಳೆ ನೀರನ್ನು ಜಲಾಶಯದಲ್ಲಿ ಸಂಗ್ರಹಿಸಬಹುದಾಗಿತ್ತು. ಪೂರ್ಣ ಪ್ರಮಾಣದಲ್ಲಿ ಅಧಿಕಾರಿಗಳ ಮತ್ತು ಕಾಲುವೆ ಇಲ್ಲದೇ ಇರುವ ಕಾರಣ ಕಾಲವೆಯ ಮೂಲಕ ನದಿಗೆ ನೀರು ಪೋಲಾಗಿ ಹರಿದು ಆಂಧ್ರಪ್ರದೇಶ ಸೇರಿದೆ ಇದಕ್ಕೆ ಸರಕಾರದ ನಿರ್ಲಕ್ಷ ಕಾರಣವಾಗಿದೆ ಎಂದು ರೈತ ಮುಖಂಡರು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಐಸಿಸಿ ಅಧ್ಯಕ್ಷ ಸಚಿವ ವೆಂಕಟರಾವ್‌ ನಾಡಗೌಡ, ಕೊಪ್ಪಳ ಉಸ್ತುವಾರಿ ಸಚಿವ ಆರ್‌. ಶಂಕರ್‌, ಸಂಸದರಾದ ಕರಡಿ ಸಂಗಣ್ಣ, ವಿ.ಎಸ್‌. ಉಗ್ರಪ್ಪ, ಬಿ.ವಿ. ನಾಯಕ ಸೇರಿ ಅಚ್ಚುಕಟ್ಟು ವ್ಯಾಪ್ತಿ ಶಾಸಕರು, ಜನಪ್ರತಿನಿಧಿಗಳು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿದ್ದರು.

ಮಾಹಿತಿ ನೀಡದ ನಾಡಗೌಡ’ ತೀವ್ರ ಗೊಂದಲದಿಂದ ಕೂಡಿದ್ದ ಐಸಿಸಿ ಸಭೆಯಲ್ಲಿ ಆಡಳಿತಾರೂಢ ಜನಪ್ರತಿನಿಧಿ ಗಳು ಮತ್ತು ಬಿಜೆಪಿ ರೈತ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ನೀರು ಪೋಲಾಗಲು ನೇರವಾಗಿ ಸರಕಾರ ಕಾರಣ ಎಂದು ಬಿಜೆಪಿ ಮುಖಂಡರು ಮತ್ತು ರೈತರು ಆರೋಪಿಸಿದಾಗ ಐಸಿಸಿ ಅಧ್ಯಕ್ಷ ಸಚಿವ ವೆಂಕಟರಾವ್‌ ನಾಡಗೌಡ ಮತ್ತು ಬಿಜೆಪಿ ರೈತ ಹೋರಾಟಗಾರ ತಿಪ್ಪೇರುದ್ರಸ್ವಾಮಿ ನಡುವೆ ವಾಗ್ವಾದ ಜರುಗಿತು. ಬೆಳಗ್ಗೆ 11ಕ್ಕೆ ಆರಂಭವಾದ ಸಭೆ
ಸಂಜೆ 5 ಗಂಟೆಗೆ ಮುಕ್ತಾಯವಾಯಿತು. ಈ ಮಧ್ಯೆ ಸಭೆಯಿಂದ ಮಾಧ್ಯಮದವರನ್ನು ಹೊರಗಿಡಲಾಗಿತ್ತು.

ಸಭೆ ಮುಕ್ತಾಯದ ನಂತರ ಐಸಿಸಿ ಅಧ್ಯಕ್ಷರು ಸಭೆಯಲ್ಲಿ ನಡಾವಳಿಕೆಯನ್ನು ಪತ್ರಿಕಾ ಮಾಧ್ಯಮದವರಿಗೆ ತಿಳಿಸುವುದು ವಾಡಿಕೆ. ಸಚಿವ ನಾಡಗೌಡ ಮಾಧ್ಯಮದವರಿಗೆ ಮಾಹಿತಿ ನೀಡದೇ ಪಲಾಯನ ಮಾಡಿದರು. ಪತ್ರಿಕಾಮಾಧ್ಯಮದವರನ್ನು ಹೊರಗಿಟ್ಟರೂ ಸಭೆಯಲ್ಲಿ ಕೆಲವರು ಸಭೆ ದೃಶ್ಯಗಳನ್ನು ಫೇಸ್‌ಬುಕ್‌ನಲ್ಲಿ ನೇರ ಪ್ರಸಾರ ಮಾಡಿದ್ದು ಕಂಡು ಬಂತು.

ಜಲಾಶಯದ ನೀರು ಪೋಲಾಗಲು ನೇರವಾಗಿ ಸರಕಾರದ ನಿರ್ಲಕ್ಷÂ ಕಾರಣವಾಗಿದೆ. ಬೇಸಿಗೆ ಬೆಳೆಗೆ ನೀರು ಕೊಡದ ಸರಕಾರ ಅಚ್ಚುಕಟ್ಟು ಪ್ರದೇಶ ರೈತರಿಗೆ ಪ್ರತಿ ಐದು ಎಕರೆ 2 ಲಕ್ಷ ರೂ. ಪರಿಹಾರ ನೀಡಬೇಕು. ಪ್ರಕೃತಿ ಮಳೆ ನೀಡಿ ರೈತರಿಗೆ ಅನುಕೂಲ ಮಾಡಿದರೂ ಸಮಿಶ್ರ ಸರಕಾರದ ನಿರ್ಲಕ್ಷ Âದ ಫಲವಾಗಿ ರೈತರು ಈ ಭಾರಿಯೂ ಬರಗಾಲ ಅನುಭವಿಸುವ ಸ್ಥಿತಿಯುಂಟಾಗಿದೆ. ರೈತರನ್ನು ಸಂಘಟಸಿ ಸರಕಾರದ ವಿರುದ್ಧ ಹೋರಾಟ ರೂಪಿಸಲಾಗುತ್ತದೆ. ತಕ್ಕ ಪಾಠವನ್ನು ರೈತರು ಕಲಿಸಲಿದ್ದಾರೆ.
 ತಿಪ್ಪೇರುದ್ರಸ್ವಾಮಿ, ರೈತ ಮುಖಂಡ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.