ರಾಜ್ಯ ಅಭಿವೃದ್ಧಿಗೆ ಜೆಡಿಎಸ್‌ ಬೆಂಬಲಿಸಿ: ಕುಮಾರಸ್ವಾಮಿ


Team Udayavani, May 5, 2018, 3:23 PM IST

ray.jpg

ದೇವದುರ್ಗ: ಬಡವರು, ಹಿಂದುಳಿದವರು, ಶೋಷಿತರು, ದಲಿತರ ಅಭಿವೃದ್ಧಿ ಮತ್ತು ರಾಜ್ಯದ ಸರ್ವಾಂಗೀಣ ಪ್ರಗತಿಗಾಗಿ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಜೆಡಿಎಸ್‌ ಅಭ್ಯರ್ಥಿಗಳಿಗೆ ಗೆಲ್ಲಿಸುವ ಮೂಲಕ ಜೆಡಿಎಸ್‌ ಅಧಿಕಾರಕ್ಕೆ ತರಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ವಿನಂತಿಸಿದರು.

ಪಟ್ಟಣದ ಬಸವ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜೆಡಿಎಸ್‌ ವಿಕಾಸ ಪರ್ವ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯದ ಅಭಿವೃದ್ಧಿಗಾಗಿ ವಿನೂತನ ದೃಷ್ಟಿಕೋನದೊಂದಿಗೆ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದೇನೆ. ನಿಮ್ಮಿಂದ ಪಡೆದ ತೆರಿಗೆ ಹಣದಲ್ಲೇ ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡುವೆ ಎಂದರು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಮತ್ತು ರಾಜ್ಯ ಕಾಂಗ್ರೆಸ್‌ ಸರಕಾರಗಳು ರೈತ ವಿರೋಧಿಗಳಾಗಿವೆ. 12 ವರ್ಷಗಳ ಹಿಂದೆ ನಮ್ಮ ಸರಕಾರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ, ಜಾರಿಗೆ ತಂದ ಯೋಜನೆಗಳನ್ನು ನೀವೆಲ್ಲಾ ನೋಡಿದ್ದಿರಿ. ರೈತರ ಬಾಳು ಹಸನಾಗಲು, ಎಲ್ಲರಿಗೂ ಉದ್ಯೋಗ, ಸಮಬಾಳು, ಸಂಪೂರ್ಣ ನೀರಾವರಿ ಸೇರಿ ರಾಜ್ಯ ಮತ್ತು ಜನರ ಸರ್ವಾಂಗೀಣ ಅಭಿವೃದ್ಧಿಗೆ ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ನನ್ನನ್ನು ಪರೀಕ್ಷಿಸಲಾದರೂ ಒಮ್ಮೆ ಜೆಡಿಎಸ್‌ಗೆ ಬಹುಮತದ ಅಧಿಕಾರ ನೀಡಿ ಎಂದು ವಿನಂತಿಸಿದರು. 

ಸತತ ಬರ, ನಿರಂತರ ಬೆಳೆ ಹಾನಿಯಿಂದ ರೈತ ಸಮುದಾಯ ತತ್ತರಿಸಿ ಹೋಗಿದೆ. 58 ಸಾವಿರ ಕೋಟಿ ಮೌಲ್ಯದ ಬೆಳೆ ಹಾನಿಯಾಗಿ ರೈತರು ಸಾಲಕ್ಕೆ ಗುರಿಯಾಗಿದ್ದಾರೆ. ರೈತರ ಸಾಲ ಮನ್ನಾ ಮಾಡಿ ಎಂದರೆ ಕೇಂದ್ರದ ಬಿಜೆಪಿ ಸರ್ಕಾರ ರೈತರ ಸಾಲ ಮನ್ನಾ ಮಾಡಿದರೆ ಆರ್ಥಿಕ ಸ್ಥಿತಿ ಹದಗೆಡುತ್ತದೆ ಎನ್ನುತ್ತಾರೆ.

ಆದರೆ ಯಾರಿಗೂ ಗೊತ್ತಾದ ಹಾಗೆ ಕೈಗಾರಿಕೋದ್ಯಮಿಗಳ 2.41 ಲಕ್ಷ ಕೋಟಿ ಸಾಲ ಮಾನ್ನ ಮಾಡಿದ್ದಾರೆ. ಇನ್ನು ರಾಜ್ಯ
ಸರಕಾರ ಅತ್ತು-ಕರೆದ ನಂತರ ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಿದ್ದಾಗಿ ಘೋಷಿಸಿದೆ. ಆದರೆ ಒಂದು ವರ್ಷ ಕಳೆದರೂ ಸಾಲದ ಮೊತ್ತವನ್ನು ಸರಕಾರ ಮರುಪಾವತಿಸಿಲ್ಲ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ವಿರುದ್ಧ ಹರಿಹಾಯ್ದರು. ಜೆಡಿಎಸ್‌ ಸರಕಾರದ ಅವಧಿಯಲ್ಲಿ ರೈತರ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿ, 20 ದಿನಗಳ ಒಳಗೆ ರೈತರ ಮನೆಗೆ ರಸೀದಿ ಕಳುಹಿಸಿರುವುದನ್ನು ಸಿದ್ದರಾಮಯ್ಯ ಮರೆತಿದ್ದಾರೆ. ಜೆಡಿಎಸ್‌ ಅ ಧಿಕಾರಕ್ಕೆ ಬಂದರೆ 24 ಗಂಟೆಗಳ
ಒಳಗೆ ರಾಷ್ಟ್ರೀಯ ಬ್ಯಾಂಕ್‌ ಮತ್ತು ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳ ರೈತರ ಸಾಲ ಮತ್ತು ಸ್ತ್ರೀಶಕ್ತಿ ಗುಂಪಿನ ಸಾಲ ಮನ್ನಾ ಮಾಡುವ ಗುರಿ ಹೊಂದಿದೆ ಎಂದು ಹೇಳಿದರು.

ಇನ್ನೂ ಒಂದು ವಾರ ಕಾಲಾವಕಾಶವಿದೆ. ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಅಭ್ಯರ್ಥಿ ಪರ ಮತಯಾಚಿಸಬೇಕು. ಈ ಕ್ಷೇತ್ರದಲ್ಲಿ ಅಭ್ಯರ್ಥಿ ವೆಂಕಟೇಶ ಪೂಜಾರಿಯನ್ನು ಬಹುಮತದಿಂದ ಆಯ್ಕೆಗೊಳಿಸಿ ಜೆಡಿಎಸ್‌ ಸರಕಾರ ಅಸ್ತಿತ್ವಕ್ಕೆ ತರುವ ಹೊಣೆ ಕಾರ್ಯಕರ್ತರ ಮೇಲಿದೆ ಎಂದರು. 

ಮಾಜಿ ಶಾಸಕ ವೆಂಕಟರಾವ್‌ ನಾಡಗೌಡ, ವಿಧಾನ ಪರಿಷತ್‌ ಸದಸ್ಯರಾದ ಶರವಣ, ಕಾಂತರಾಜ್‌, ಪದವೀಧರ ಕ್ಷೇತ್ರದ ಅಭ್ಯರ್ಥಿ ಬಸವರೆಡ್ಡಿ, ಮುಖಂಡರಾದ ಶಿವರಾಜ ಪಾಟೀಲ ಗೊರೇಬಾಳ, ಉತ್ತಮ್ಮ ಬಸವರಾಜ, ಯುಸೂಫ್‌ ಖಾನ್‌, ಚಂದ್ರಶೇಖರ ಪಾಟೀಲ, ಜಾಗೀರ ಜಾಡಲದಿನ್ನಿ, ಬಾಪುಗೌಡ ಪಾಟೀಲ್‌ ಚಿಕ್ಕಹೊನ್ನಕುಣಿ, ಅಮೀನರೆಡ್ಡಿ ಪಾಟೀಲ, ವಿರೂಪಾಕ್ಷಿ ಬಳೆ, ಭೀಮರಾಯ ಹದ್ದಿನಾಳ, ಬಿಎಸ್‌ಪಿಯ ವೆಂಕನಗೌಡ ಇತರರು ಉಪಸ್ಥಿತರಿದ್ದರು. 

 ದೇವದುರ್ಗ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವೆಂಕಟೇಶ ಪೂಜಾರಿ ಮಾತನಾಡಿ, ಬಿಜೆಪಿ ಅಭ್ಯರ್ಥಿ, ಶಾಸಕ ಕೆ.ಶಿವನಗೌಡ ನಾಯಕ ಬಹು ದೊಡ್ಡ ಸುಳ್ಳುಗಾರ. ಅಧಿಕಾರ, ಹಣ ಮದದಿಂದ ಮತಗಳನ್ನು ಖರೀದಿಸುತ್ತೇನೆ ಎಂದು ಬೀಗುತ್ತಿದ್ದಾನೆ. ಈತನ ಸುಳ್ಳಿನ ಕಂತೆಗೆ ಬೇಸತ್ತು ಮುಷ್ಟೂರು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಮತದಾರರು ವಾಪಾಸು ಕಳಿಸಿದ್ದಾರೆ. ರಾತ್ರೋ ರಾತ್ರಿ ಯಾರಿಗೂ ಗೊತ್ತಾಗದಂತೆ ಪ್ರಚಾರ ಮಾಡಲು ಹೋಗಿ ಮತ ಖರೀದಿಗೆ ಹಣ ಹಂಚುತ್ತಿದ್ದಾನೆ. ನೀರು ಕೊಡಪ್ಪಾ ಎಂದರೆ ಪ್ರತಿ ಗ್ರಾಮಕ್ಕೆ ಬೀಯರ್‌, ಬ್ರ್ಯಾಂಡಿ ವಿತರಿಸುತ್ತಾನೆ. ಇಂಥವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದರು.

ಈಗಾಗಲೇ ಎರಡು ಬಾರಿ ನಮ್ಮನ್ನು ಸೋಲಿಸಿರುವಿರಿ. ಮೂರನೇ ಬಾರಿಗೆ ಶಿಕ್ಷೆ ಕೊಡಬೇಡಿ. ಒಂದು ಒಳ್ಳೆಯ ನಿರ್ಧಾರ ಮಾಡಬೇಕಾಗಿದೆ. ನೀರಾವರಿ ವಿಷಯ ಬಂದಾಗ ಎಚ್‌.ಡಿ.ದೇವೇಗೌಡ ಮತ್ತು ನನ್ನನ್ನು ನೆನಪಿಸುತ್ತೀರಿ. ಮೂರ್ತಿ ಮಾಡುವ ವಿಚಾರ ಮಾಡುತ್ತಿರಿ. ಆದರೆ ಮತ ಹಾಕುವಾಗ ಮಾತ್ರ ಜೆಡಿಎಸ್‌ ಪಕ್ಷವನ್ನು ಏಕೆ? ಮರೆಯುತ್ತಿರಿ ಎಂಬುದೇ ತಿಳಿಯದಾಗಿದೆ.  
ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.