ಎಡದಂಡೆ ಕಾಲುವೆ ಆಧುನೀಕರಣಕ್ಕೆ ಸರ್ವೇ


Team Udayavani, May 6, 2022, 2:31 PM IST

17canal

ಮಸ್ಕಿ: ತುಂಗಭದ್ರಾ ಎಡದಂಡೆ ಕಾಲುವೆಗೆ ನೀರಿನ ಹರಿವು ಸ್ಥಗಿತವಾಗಿದ್ದು, ನೀರಾವರಿ ಇಲಾಖೆ ಮಸ್ಕಿ ವ್ಯಾಪ್ತಿಗೊಳಪಟ್ಟ ಕಾಲುವೆಗಳ ಆಧುನೀಕರಣಕ್ಕೆ ಸರ್ವೇ ನಡೆಸಲಾಗುತ್ತಿದೆ.

ಕಳೆದ 2008ರಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಮತ್ತು ವಿತರಣಾ ಕಾಲುವೆಗಳ ಆಧುನೀಕರಣ ಹಂತ-ಹಂತವಾಗಿ ಸಾಗಿದೆ. ಮಸ್ಕಿ ವ್ಯಾಪ್ತಿಯಲ್ಲಿ ಮುಖ್ಯ ಮತ್ತು ವಿತರಣಾ ಕಾಲುವೆಗಳ ಆಧುನೀಕರಣ ಕಾಮಗಾರಿ ಬಹುತೇಕ ಪೂರ್ಣವಾಗಿದೆ. ಆದರೆ ಕೆಲವು ಕಡೆ ಬಿಟ್ಟು ಹೋದ ಪ್ರದೇಶಗಳನ್ನು ಮತ್ತು ರಿಪೇರಿಗೆ ಒಳಗಾಗದ ಭಾಗಗಳನ್ನು ಗುರುತು ಮಾಡಿ ಅಂತಹ ಸ್ಥಳಗಳಲ್ಲಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲು ಕರ್ನಾಟಕ ನೀರಾವರಿ ನಿಗಮದ ನೀರಾವರಿ ಇಲಾಖೆ ಅಧಿಕಾರಿಗಳ ಯೋಜನೆಯಾಗಿದೆ. ಇದಕ್ಕಾಗಿ ಮಸ್ಕಿ ನಂ.4 ವಿತರಣಾ ಕಾಲುವೆ ವ್ಯಾಪ್ತಿಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಕೆಲಸ ಆರಂಭಿಸಲು ಸಿದ್ಧತೆ ನಡೆದಿದ್ದು, ಇದಕ್ಕಾಗಿ ಡಿಪಿಆರ್‌ ತಯಾರಿಸಲು ಖಾಸಗಿ ಏಜೆನ್ಸಿಗೆ ಟೆಂಡರ್‌ ಹಂಚಿಕೆ ಪ್ರಕ್ರಿಯೆ ಶುರುವಾಗಿದೆ.

ಎಲ್ಲಿಂದ? ಎಲ್ಲಿಗೆ?: ಮಸ್ಕಿ ವ್ಯಾಪ್ತಿಗೆ ಸೇರಿದ ಮೈಲ್‌ 47ರಿಂದ ಮೈಲ್‌ 69ವರೆಗೂ ಬರುವ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ, ವಿತರಣಾ ಕಾಲುವೆಗಳನ್ನು ದುರಸ್ತಿ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಅಲ್ಲದೇ ಮಸ್ಕಿ ಕೇಂದ್ರ ಸ್ಥಾನದಲ್ಲಿರುವ ನೀರಾವರಿ ಇಲಾಖೆ ನಂ.4 ವಿತರಣಾ ಕಾಲುವೆಯ ಕಚೇರಿ ದುರಸ್ತಿ, ಕಚೇರಿ ಸುತ್ತಲೂ ಕಾಂಪೌಂಡ್‌ ನಿರ್ಮಾಣ, ನೀರಾವರಿ ಇಲಾಖೆಗೆ ಸೇರಿದ ವಸತಿ ಸಮುತ್ಛಯಗಳ ದುರಸ್ತಿ ಸೇರಿ ಇತರೆ ಕಾಮಗಾರಿ ಕೈಗೊಳ್ಳಲು ಸರ್ವೇ ನಡೆಸಿ ಸಮಗ್ರ ಡಿಪಿಆರ್‌ ತಯಾರಿಸಲು ಸೂಚನೆ ನೀಡಲಾಗಿದೆ.

15 ಲಕ್ಷ ರೂ. ಮೀಸಲು: ತುಂಗಭದ್ರಾ ಎಡದಂಡೆಯ ಮಸ್ಕಿ ವ್ಯಾಪ್ತಿಗೆ ಸೇರಿದ ಮುಖ್ಯ ಕಾಲುವೆ, ವಿತರಣಾ ಕಾಲುವೆ, ತೂಬುಗಳು ಸೇರಿ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗಕ್ಕೂ ಸರಾಗವಾಗಿ ನೀರು ಹರಿಯುವ ವ್ಯವಸ್ಥೆಗೆ ಬೇಕಿರುವ ಎಲ್ಲ ಕಾಮಗಾರಿ ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ. ಪ್ಲ್ಯಾನ್‌ ರೂಪಿಸುವುದಕ್ಕಾಗಿಯೇ ಸದ್ಯ 15 ಲಕ್ಷ ರೂ. ಹಣ ಮೀಸಲಿರಿಸಲಾಗಿದೆ. ಈ 15 ಲಕ್ಷ ರೂ. ಮೊತ್ತದಲ್ಲಿ ಡಿಪಿಆರ್‌ ತಯಾರಿಸಿ ಕೊಡಲು ಖಾಸಗಿ ಏಜೆನ್ಸಿಗೆ ಗುತ್ತಿಗೆ ನೀಡಲಾಗಿದೆ.

ಖಾಸಗಿ ಏಜೆನ್ಸಿಯ ಅಧಿಕಾರಿಗಳು ಸ್ಥಾನಿಕ ಪರಿಶೀಲನೆ ನಡೆಸಿ, ಆಧುನೀಕರಣಕ್ಕೆ ಅಗತ್ಯ ಇರುವ ಪ್ರದೇಶಗಳನ್ನು ಗುರುತು ಮಾಡಿ ಅದಕ್ಕೆ ತಗಲುವ ಹಣಕಾಸಿನ ಅಂದಾಜು ಅಂಕಿ-ಸಂಖ್ಯೆ, ಸಂಪೂರ್ಣ ಡಿಪಿಆರ್‌ ನೀಡುವುದಕ್ಕೆ ಗುತ್ತಿಗೆ ವಹಿಸಲಾಗಿದೆ.

ಸಮಸ್ಯೆ ಪರಿಹಾರವಾಗುವುದೇ?

ಕೋಟ್ಯಂತರ ರೂ. ಖರ್ಚು ಮಾಡಿ ತುಂಗಭದ್ರಾ ಎಡದಂಡೆ ಮುಖ್ಯ ಮತ್ತು ವಿತರಣಾ ಕಾಲುವೆಗಳ ಆಧುನೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೂ ಇನ್ನು ಅಚ್ಚುಕಟ್ಟು ಪ್ರದೇಶದ ಕೆಳಭಾಗದ ರೈತರ ಜಮೀನುಗಳಿಗೆ ಇದುವರೆಗೂ ನೀರು ತಲುಪುತ್ತಿಲ್ಲ ಎನ್ನುವ ಕೂಗು ಇದೆ. ಈಗ ಅಂತಹ ಪ್ರದೇಶಗಳನ್ನು ಗುರುತು ಮಾಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ಬಾರಿಯಾದರೂ ಶಾಶ್ವತ ಪರಿಹಾರ ದಕ್ಕುವುದೇ ಕಾದು ನೋಡಬೇಕಿದೆ.

ತುಂಗಭದ್ರಾ ಎಡದಂಡೆ ಮುಖ್ಯ ಮತ್ತು ವಿತರಣಾ ಕಾಲುವೆಗಳಲ್ಲಿ ಅಗತ್ಯ ಇರುವ ಕಡೆ ಆಧುನೀಕರಣ ಕಾಮಗಾರಿ ಕೈಗೊಳ್ಳಲು ಈಗ ಪ್ಲ್ಯಾನ್‌ ಮಾಡಲಾಗುತ್ತಿದೆ. ಇದಕ್ಕಾಗಿ ಡಿಪಿಆರ್‌ ತಯಾರಿಸಲು ಖಾಸಗಿ ಏಜೆನ್ಸಿಗೆ ವಹಿಸಲಾಗುತ್ತಿದೆ. -ದಾವೂದ್‌, ಎಇಇ, ನೀರಾವರಿ ಇಲಾಖೆ, ಮಸ್ಕಿ

-­ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.