ಉತ್ತರ ಪ್ರದೇಶ ಘಟನೆಗೆ ತೀವ್ರ ಖಂಡನೆ-ತಹಶೀಲ್ದಾರ್ಗೆ ಮನವಿ
Team Udayavani, Jun 16, 2022, 3:30 PM IST
ಮಾನ್ವಿ: ಉತ್ತರ ಪ್ರದೇಶದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಬಂಧಿಸಿರುವ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವೆಲ್ಫೆಧೀರ್ ಪಾರ್ಟಿ ಜಿಲ್ಲಾಧ್ಯಕ್ಷ ಫರೀದ್ ಉಮರಿ ಒತ್ತಾಯಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವೆಲ್ಫೆಧೀರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಉಪ ತಹಶೀಲ್ದಾರ್ ವಿರುಪಣ್ಣರವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಒಂದು ಪಕ್ಷದ ವಕ್ತಾರರು ಮತ್ತು ಮಾಧ್ಯಮ ಮುಖ್ಯಸ್ಥರು ಧರ್ಮನಿಂದನೆ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ನಂತರವೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ವೆಲ್ಫೆಧೀರ್ ಪಾರ್ಟಿ ರಾಷ್ಟ್ರೀಯ ನಾಯಕರ ಮೇಲಿನ ದಾಳಿ ಬಗ್ಗೆ ತನಿಖೆ ನಡೆಸಿ ಜಾವೇದ್ ಮೊಹಮ್ಮದ್ ಮತ್ತು ಅವರ ಕುಟುಂಬಕ್ಕೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದರು.
ಈ ವೇಳೆ ತಾಲೂಕು ಅಧ್ಯಕ್ಷ ಶೇಕ್ ಬಾಬಾ ಹುಸೇನ್, ನಾಸೀರ್ ಅಲಿ, ಮುಖಂಡರಾದ ಸಯ್ಯದ್ ಯೂಸುಫ್ ಸಾಹೇಬ್, ಮೊಹಮ್ಮದ್ ಇಸಾಕ್, ಮಹಬೂಬ್ ಫ್ರೂಟ್, ಶಫುìದ್ದೀನ್, ದುಬೈ ರಾಜು, ಹನುಮಂತಪ್ಪ, ಬಾಗಲಕೊಟ ರಫಿ, ಇಬ್ರಾಹಿಂ ಸಾಬ್, ಅಬ್ದುಲ್ ಹಮೀದ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ