ಮಳಿಗೆಗಳ ಟೆಂಡರ್‌ ವಿಳಂಬ


Team Udayavani, Feb 4, 2020, 12:56 PM IST

rc-tdy-1

ದೇವದುರ್ಗ: ಇಲ್ಲಿನ ಎಪಿಎಂಸಿಯಲ್ಲಿ ನಿರ್ಮಿಸಿದ ಮಳಿಗೆಗಳ ಟೆಂಡರ್‌ ಪ್ರಕ್ರಿಯೆ ವಿಳಂಬದಿಂದಾಗಿ ಮಳಿಗೆಗಳು ನಿರುಪಯುಕ್ತವಾಗಿವೆ. ಇನ್ನೊಂದೆಡೆ ಇಲ್ಲಿ ಕೃಷಿ ಉತ್ಪನ್ನಗಳ ವಹಿವಾಟು ನಡೆಯದಿದ್ದರೂ ಮಳಿಗೆಗಳನ್ನು ನಿರ್ಮಿಸಿ ಸರ್ಕಾರದ ಅನುದಾನ ಪೋಲು ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಪ್ರತಿ ವರ್ಷ ದೇವದುರ್ಗ ಎಪಿಎಂಸಿಯಲ್ಲಿ ಕೃಷಿ ಉತ್ಪನ್ನ ವಹಿವಾಟು ನಡೆಸಿಕೊಂಡು ಬರಲಾಗುವುದು ಎಂದು ಹೇಳುತ್ತಲೇ ಇಲ್ಲಿನ ಎಪಿಎಂಸಿಯನ್ನು ರಾಯಚೂರು ಎಪಿಎಂಸಿಗೆ ವಿಲೀನ ಮಾಡುತ್ತ ಬರಲಾಗಿದೆ. ಹೀಗಾಗಿ ದೇವದುರ್ಗ ಎಪಿಎಂಸಿಯಲ್ಲಿ ಯಾವುದೇ ಕೃಷಿ ಉತ್ಪನ್ನಗಳ ವಹಿವಾಟು ನಡೆಯುತ್ತಿಲ್ಲ. ಸುತ್ತಮುತ್ತಲಿನ ರೈತರು ಕೃಷಿ ಉತ್ಪನ್ನಗಳನ್ನು ರಾಯಚೂರು ಇಲ್ಲವೇ ಇತರೆಜಿಲ್ಲೆಗಳ ಎಪಿಎಂಸಿಗೆ ತೆಗೆದುಕೊಂಡು ಹೋಗಿ ಮಾರುತ್ತಿದ್ದಾರೆ.

19 ಮಳಿಗೆ: ದೇವದುರ್ಗ ಎಪಿಎಂಸಿಯಲ್ಲಿ ಸುಮಾರು 10-15 ವರ್ಷಗಳ ಹಿಂದೆ ನಿರ್ಮಿಸಿದ 9 ಮಳಿಗೆಗಳು ಶಿಥಿಲಗೊಂಡಿದ್ದು, ಎರಡು ವರ್ಷದ ಹಿಂದೆ ದುರಸ್ತಿ ಮಾಡಲಾಗಿದೆ. ವರ್ಷದ ಹಿಂದೆ ಮತ್ತೇ 10 ಹೊಸ ಮಳಿಗೆ ನಿರ್ಮಿಸಲಾಗಿದೆ. ಆದರೆ ಇವುಗಳನ್ನು ಟೆಂಡರ್‌ ಕರೆದು ಹಂಚಿಕೆ ಮಾಡುವ ಕಾರ್ಯ ಆಗಿಲ್ಲ.

ಸರ್ಕಾರಕ್ಕೆ ಪ್ರಸ್ತಾವನೆ: ಎಪಿಎಂಸಿಯಲ್ಲಿ ನಿರ್ಮಿಸಿದ ಮಳಿಗೆಗಳನ್ನು ಟೆಂಡರ್‌ ಕರೆದು ಹಂಚಿಕೆ ಮಾಡಬೇಕಿದೆ.ಒಂದು ಮಳಿಗೆಗೆ ಜಿಎಸ್‌ಟಿ ಸೇರಿ 6,700 ರೂ. ಬಾಡಿಗೆ ನಿಗದಿಪಡಿಸಿ ಟೆಂಡರ್‌ ಪ್ರಕ್ರಿಯೆ ನಡೆಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೆ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ.

ರಾಜಕೀಯ ಒತ್ತಡ: ಎಪಿಎಂಸಿಯಲ್ಲಿ ನಿರ್ಮಿಸಿದ ಮಳಿಗೆಗಳಲ್ಲಿ ತಮಗೆ ಮೂರ್‍ನಾಲ್ಕು ಮಳಿಗೆ ಬೇಕೆಂದು ರಾಜಕೀಯ ಪಕ್ಷಗಳ ಮುಖಂಡರು ಎಪಿಎಂಸಿ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆನ್ನಲಾಗಿದೆ. ಇಲ್ಲಿ ಕೃಷಿ ಉತ್ಪನ್ನ ವಹಿವಾಟು ನಡೆಯದಿದ್ದರೂ ಇವುಗಳನ್ನು ಬಾಡಿಗೆ ಪಡೆದು ಇತರೆ ವ್ಯಾಪಾರಸ್ಥರಿಗೆ ಹೆಚ್ಚಿನ ದರಕ್ಕೆ ಬಾಡಿಗೆ ನೀಡಿ ಆದಾಯ ಮಾಡಿಕೊಳ್ಳುವ ಉದ್ದೇಶ ಇವರದ್ದಾಗಿದೆ ಎನ್ನಲಾಗಿದೆ.

ಕೃಷಿ ಉತ್ಪನ್ನ ವಹಿವಾಟು ಇಲ್ಲ: ದೇವದುರ್ಗ ಎಪಿಎಂಸಿಯಲ್ಲಿ ಕೃಷಿ ಉತ್ಪನ್ನ ವಹಿವಾಟು ನಡೆಯದ್ದರಿಂದ ಸುತ್ತಲಿನ ಗ್ರಾಮಗಳ ರೈತರು ಕೃಷಿ ಉತ್ಪನ್ನ ಮಾರಾಟಕ್ಕೆ ಹೈದರಾಬಾದ್‌, ಹುಬ್ಬಳಿ, ರಾಯಚೂರು ಸೇರಿ ಇತರೆ ಜಿಲ್ಲೆಗೆ ಹೋಗಬೇಕಾಗಿದೆ.

ತುಕ್ಕು ಹಿಡಿಯುತ್ತಿದೆ ತೂಕದ ಯಂತ್ರ: ದೇವದುರ್ಗ ಎಪಿಎಂಸಿಯಲ್ಲಿ ಪ್ರತಿ ಶನಿವಾರ ಜಾನುವಾರು ಸಂತೆ ನಡೆಯುತ್ತದೆ. ಕುರಿ, ಆಡು, ಮೇಕೆ ತೂಕಕ್ಕಾಗಿ 60 ಲಕ್ಷ ಅನುದಾನದಲ್ಲಿ ತೂಕದ ಯಂತ್ರ ಸ್ಥಾಪಿಸಲಾಗಿದೆ. ಆದರೆ ಇದು ಬಳಕೆ ಆಗದೇ, ನಿರ್ವಹಣೆ ಇಲ್ಲದೇ ತುಕ್ಕು ಹಿಡಿಯುತ್ತಿದೆ.

ಪಾಳುಬಿದ್ದ ಕಲ್ಯಾಣ ಮಂಟಪ: ಎಪಿಎಂಸಿ ಆವರಣದಲ್ಲಿ ಸಾವಿತ್ರಮ್ಮ ಎ. ವೆಂಕಟೇಶ ನಾಯಕ ಕಲ್ಯಾಣ ಮಂಟಪ ನಿರ್ಮಿಸಲಾಗಿದೆ. ಆದರೆ ನಿರ್ವಹಣೆ ಇಲ್ಲದೇ ಪಾಳು ಬಿದ್ದಿದೆ. ಆರಂಭದ ಕೆಲ ವರ್ಷ ಮದುವೆ ಇನ್ನಿತರ ಕಾರ್ಯಗಳಿಗೆ ಬಾಡಿಗೆ ನೀಡಲಾಗಿತ್ತು. ಇದೀಗ ನಿರ್ವಹಣೆ ಇಲ್ಲದೇ ಹಾಳಾಗಿದ್ದು, ಸುತ್ತಲೂ ಜಾಲಿಗಿಡಗಳು ಬೆಳೆದಿವೆ. ಇನ್ನು ಮಳಿಗೆಗಳು ನಿರುಪಯುಕ್ತವಾಗಿದ್ದರಿಂದ ಕಿಡಿಗೇಡಿಗಳ ಅನೈತಿಕ ಚಟುವಟಿಕೆಗೆ ತಾಣವಾಗಿ ಮಾರ್ಪಟ್ಟಿವೆ. ಕಿಡಿಗೇಡಿಗಳು ಇಲ್ಲಿ ಮದ್ಯ ಸೇವಿಸುತ್ತಿದ್ದಾರೆ. ಆದ್ದರಿಂದ ಎಪಿಎಂಸಿಯಲ್ಲಿ ಕೃಷಿ ಉತ್ಪನ್ನ ವಹಿವಾಟು ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘದ ಅಧ್ಯಕ್ಷ ಮಲ್ಲಯ್ಯ ಕಟ್ಟಿಮನಿ ಆಗ್ರಹಿಸಿದ್ದಾರೆ.

ಎಪಿಎಂಸಿ ಮಳಿಗೆಗಳ ಟೆಂಡರ್‌ ಪ್ರಕ್ರಿಯೆ ಆರಂಭಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಜಿಎಸ್‌ಟಿ ಸೇರಿ ಒಂದು ಮಳಿಗೆಗೆ 6,700 ರೂ. ಬಾಡಿಗೆ ನಿಗದಿಪಡಿಸಲಾಗಿದೆ. ಎಪಿಎಂಸಿ ಆವರಣದಲ್ಲಿ ಡಾಂಬರ್‌ ರಸ್ತೆ, ಚರಂಡಿ ಕಾಮಗಾರಿ ಆರಂಭವಾಗಿದೆ. ತಿಮ್ಮಪ್ಪ ನಾಯಕ, ಎಪಿಎಂಸಿ ಮೇಲ್ವಿಚಾರಕ

 

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.