ಅಂತರ್ ರಾಜ್ಯಗಳಿಂದ 285 ಜನರ ಆಗಮನ
Team Udayavani, Jun 30, 2020, 10:32 AM IST
ರಾಯಚೂರು: ಬೇರೆ ರಾಜ್ಯಗಳಿಂದ ಜಿಲ್ಲೆಗೆ 285 ಜನ ಆಗಮಿಸಿದ್ದು, 48 ಜನರನ್ನು ಸಾಂಸ್ಥಿಕ ಕ್ವಾರಂಟೈನ್, 235 ಜನರಿಗೆ ಹೋಮ್ ಕ್ವಾರಂಟೈನ್ ಹಾಗೂ ಇಬ್ಬರನ್ನು ರೆಸಿಡೆನ್ಸಿಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ವಿವಿಧ ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ನಡೆಸಿ ಸಾಂಸ್ಥಿಕ ಕ್ವಾರಂಟೈನ್ ಅಥವಾ ಹೋಮ್ ಕ್ವಾರಂಟೈನ್ ಗೆ ಕಳುಹಿಸಲಾಗಿದೆ.
ಅಂತರ ರಾಜ್ಯ ಚೆಕ್ಪೋಸ್ಟ್ ಮತ್ತು ರೈಲ್ವೆ ಸ್ಟೇಷನ್ ಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಿದ್ದು, ಹೊರ ರಾಜ್ಯದಿಂದ ಬರುವವರಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಶಕ್ತಿನಗರ ಚೆಕ್ ಪೋಸ್ಟ್ ಮೂಲಕ 105, ಗಿಲ್ಲೆಸೂಗೂರು ಚೆಕ್ಪೋಸ್ಟ್ 20, ಕೊತ್ತದೊಡ್ಡಿ ಚೆಕ್ ಪೋಸ್ಟ್ 84, ಸಿಂಗನೋಡಿ ಚೆಕ್ಪೋಸ್ಟ್ 9, ಹೂವಿನ ಹೆಡಗಿ ಚೆಕ್ಪೋಸ್ಟ್ 7, ಉದ್ಯಾನ ಎಕ್ಸಪ್ರಸ್ ರೈಲು ಮೂಲಕ 33, ಹೈದರಾಬಾದ್-ತಿರುಪತಿ ರೈಲಿನಲ್ಲಿ 10, ತಿರುಪತಿ- ಹೈದರಾಬಾದ್ ರೈಲಿನಲ್ಲಿ 17 ಜನ ಆಗಮಿಸಿದ್ದಾರೆ. ಕ್ವಾರಂಟೈನ್ಗೆ ಒಳಪಟ್ಟವರ ಕೈ ಮೇಲೆ ಸೀಲ್ ಹಾಕಲಾಗಿದೆ.
ಸಾರ್ವಜನಿಕ ಪ್ರದೇಶದಲ್ಲಿ ಅಂಥವರು ಕಂಡುಬಂದಲ್ಲಿ ಮಾಹಿತಿ ನೀಡಲು ಕೋರಿದೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಸ್ಪಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ