ದಲಿತ ಯುವಕನ ಮೇಲೆ ಹಲ್ಲೆಗೆ ಖಂಡನೆ
Team Udayavani, Mar 29, 2019, 5:12 PM IST
ಮಾನ್ವಿ: ತಾಲೂಕಿನ ಸಂಗಾಪುರು ಗ್ರಾಮದಲ್ಲಿ ಅಸ್ಪೃಶ್ಯತೆ ವಿರೋಧಿಸಿದ ದಲಿತ ಯುವಕನ ಮೇಲೆ ಸವರ್ಣೀಯರು ನಡೆಸಿದ ದೌರ್ಜನ್ಯ ಖಂಡಿಸಿ ಮತ್ತು ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ತಾಲೂಕಿನ ಸಂಗಾಪುರು ಗ್ರಾಮದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪೃಶ್ಯರಿಗೆ ಪ್ರವೇಶ ನಿರಾಕರಿಸಿರುವುದು ಸಂವಿಧಾನ ಬಾಹೀರವಾಗಿದೆ. ದಲಿತರ ಕಾಲೋನಿಗೆ ಕುಡಿಯುವ ನೀರು ಒದಗಿಸುವ ಸಲುವಾಗಿ ಗ್ರಾಮಕ್ಕೆ ಹೋಗಿದ್ದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳನ್ನು ಗ್ರಾಮದ 200-300 ಜನ ಸವರ್ಣೀಯರ ಗುಂಪು ಸೇರಿ ದಲಿತರ ಕೇರಿಗೆ ನೀರು ಒದಗಿಸಬೇಡಿ ಇದರಿಂದ ನಮಗೆ ತೊಂದರೆಯಾಗುತ್ತದೆ ಎಂದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಈ ವೇಳೆಯಲ್ಲಿ ದಲಿತ ಯುವಕರು ನಮಗೆ ಕುಡಿಯಲು ನೀರಿಲ್ಲ. ಇದಕ್ಕೆ ಯಾಕೆ ಅಡ್ಡಿಪಡಿಸುತ್ತಿದ್ದಿರಿ ಎಂದು ಪ್ರಶ್ನಿಸಿದ್ದಕ್ಕೆ ದಲಿತ ಯುವಕರನ್ನು ಸವರ್ಣೀಯರು ಸಾರ್ವಜನಿಕವಾಗಿ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಕೂಡಲೇ ಜಿಲ್ಲಾಡಳಿತ ಸಂಗಾಪುರು ಗ್ರಾಮಕ್ಕೆ ಭೇಟಿ ನೀಡಿ ಸೂಕ್ತ ಕಾನೂನು ಕ್ರಮ ತೆಗೆದುಕೊಂಡು ಗ್ರಾಮದಲ್ಲಿ ಶಾಂತಿ ಕಾಪಾಡಬೇಕು. ಜೀವ ಭಯದಲ್ಲಿರುವ ಅಸ್ಪೃಶ್ಯ ದಲಿತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ದಲಿತ ಮುಖಂಡರಾದ ರವೀಂದ್ರ ಜಾನೇಕಲ್, ಪ್ರಭುರಾಜ ಕೊಡ್ಲಿ, ಬಸವರಾಜ ನಕ್ಕುಂದಿ, ಅಬ್ರಾಹಂ ಹೊನ್ನಟಿಗಿ, ಯಲ್ಲಪ್ಪ ಬಾದರದಿನ್ನಿ ವಕೀಲರು, ಶಿವಗೇನಿ ಕಪಗಲ್, ಸದಾನಂದ ಪನ್ನೂರು, ಆಕಾಶ ಮ್ಯಾತ್ರಿ, ಲಾರೆನ್ಸ್ ಮಾನ್ವಿ, ವೀರೇಶ ಹರವಿ, ಮರಿಸ್ವಾಮಿ ಅಮರಾವತಿ, ವಸಂತ ಕೊಟೆಕಲ್, ನರಸಿಂಹ ಈಟೇಕಾರ್, ಹನುಮಂತರಾಯ ಸುಂಕೇಶ್ವರ, ಮುತ್ತಣ್ಣ ಚಾಗಭಾವಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ