ಭಗವದ್ಗೀತೆ ಬರೀ ಗ್ರಂಥವಲ್ಲ, ಜೀವನಶೈಲಿ

ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

Team Udayavani, Dec 13, 2021, 6:11 PM IST

ಭಗವದ್ಗೀತೆ ಬರೀ ಗ್ರಂಥವಲ್ಲ, ಜೀವನಶೈಲಿ

ರಾಯಚೂರು: ಭಗವದ್ಗೀತೆ ಎನ್ನುವುದು ಕೇವಲ ಒಂದು ಗ್ರಂಥವಾಗಿರದೆ ನಾವು ಜೀವನದಲ್ಲಿ ಹೇಗೆ ಇರಬೇಕು ಎಂಬುದನ್ನು ಸಾರುವ ಕ್ರಮ ಶಿಕ್ಷಣವಾಗಿದೆ. ಅದನ್ನು ಪಾಲಿಸಿದರೆ ಜೀವನದ ಬಾಗಶಃ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂದು ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ತಿಳಿಸಿದರು.

ನಗರದ ಗಾಜಗಾರಪೇಟೆಯಲ್ಲಿನ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ ಕರ್ನಾಟಕದಿಂದ ರವಿವಾರ ಆಯೋಜಿಸಿದ್ದ ಭಗವದ್ಗೀತೆಯ 3ನೇ ಅಧ್ಯಾಯ ಸಮರ್ಪಣೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. 2007ರಿಂದ ಭಗವದ್ಗೀತಾ ಅಭಿಯಾನ ಆರಂಭಿಸಿದ್ದು, ವ್ಯಕ್ತಿತ್ವ ವಿಕಸನ, ನೈತಿಕತೆ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವುದೇ ಅಭಿಯಾನದ ಮುಖ್ಯ ಉ¨ªೇಶವಾಗಿದೆ. ಮನುಷ್ಯನ ಮನೋಭಾವ ಸಂಕುಚಿತಗೊಂಡಿದೆ. ಅದನ್ನು ವಿಶಾಲಗೊಳಿಸಬೇಕು ಎಂದರು.

ಬದಲಾದ ಜೀವನಶೈಲಿ ಜನರಿಗೆ ಮಾರಕವಾಗುತ್ತಿದೆ. ಆತ್ಮಹತ್ಯೆ, ಹೃದಯಾಘಾತ, ಮಧುಮೇಹ, ರಕ್ತದೊತ್ತಡದಂಥ ಕಾಯಿಲೆಗಳು ಹೆಚ್ಚಾಗಿವೆ. ಯೋಗ, ಆಯುರ್ವೇದ ಹುಟ್ಟಿದ ದೇಶದಲ್ಲಿ ಇಂಥ ವಾತಾವರಣ ನಿರ್ಮಾಣಗೊಂಡಿರುವುದು ವಿಪರ್ಯಾಸ ಎಂದರು.  ಶಾಸಕ ಡಾ| ಶಿವರಾಜ ಪಾಟೀಲ್‌ ಮಾತನಾಡಿ, ಭಗವದ್ಗೀತೆಯಲ್ಲಿ ಉತ್ತಮ ಸಂದೇಶಗಳಿದ್ದು, ಅದರಂತೆ ನಡೆದರೆ ಕಷ್ಟಗಳು ಬರುವುದಿಲ್ಲ ಎಂದು ಅಭಿಪ್ರಾಯ ಪಟ್ಟರು.

ಮಾಜಿ ಎಂಎಲ್‌ಸಿ ಎನ್‌. ಶಂಕ್ರಪ್ಪ ಮಾತನಾಡಿ, ಭಗವದ್ಗೀತೆ ವ್ಯಕ್ತಿತ್ವ ವಿಕಸನದೊಂದಿಗೆ ಜೀವನದಲ್ಲಿ ಜಿಗುಪ್ಸೆ ಹೊಂದದಂತೆ ಪ್ರೇರಣೆ ನೀಡಿ ಭಾವನಾತ್ಮಕವಾಗಿ ಪರಿವರ್ತನೆ ಮೂಡಿಸುತ್ತದೆ. ಭಗವದ್ಗೀತೆ ಎಲ್ಲರೂ ಅಧ್ಯಯನ ಮಾಡಬೇಕು. ಭಗವದ್ಗೀತೆಯಲ್ಲಿ ಹೇಳಿದ ಮಾತುಗಳು ಮನುಕುಲಕ್ಕೆ ಹೇಳಿದ ಮಾತುಗಳು, ಇದು ಇವು ಕೇವಲ ಹಿಂದೂ ಧರ್ಮಕ್ಕೆ ಎಂದು ಎಲ್ಲೂ ಹೇಳಿಲ್ಲ ಎಂದರು.

ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಹಿಳೆಯರು ಮಕ್ಕಳು ಭಗವದ್ಗೀತೆಯ ಮೂರನೇ ಅಧ್ಯಾಯದ 33 ಶ್ಲೋಕಗಳನ್ನು ಪಠಿಸಿದರು. ಮಕ್ಕಳು ಕೃಷ್ಣಾರ್ಜುನ ವೇಷಧರಿಸಿ ಗಮನ ಸೆಳೆದರು. ಈ ಸಂದರ್ಭದಲ್ಲಿ ಶಿರಸಿಯ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನದ ಉಪಾಧ್ಯಕ್ಷ ನಾರಾಯಣ ಭಟ್ಟ ಬಳ್ಳಿ, ನಗರಸಭೆ ಸದಸ್ಯ ಈ. ಶಶಿರಾಜ್‌, ಮಾಜಿ ಸದಸ್ಯ ಹರೀಶ್‌ ನಾಡಗೌಡ, ಆರ್‌ಡಿಎ ಅಧ್ಯಕ್ಷ ವೈ. ಗೋಪಾಲರೆಡ್ಡಿ, ಮಾಜಿ ಅಧ್ಯಕ್ಷ ಬಿ. ಗೋವಿಂದ, ಮುಖಂಡ ರವೀಂದ್ರ ಜಲ್ದಾರ್‌, ಶ್ರೀ ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿ ಅಧ್ಯಕ್ಷ ಡಾ| ಆನಂದ ತೀರ್ಥ ಫಡ್ನಿàಸ್‌, ಕಾರ್ಯಾಧ್ಯಕ್ಷ
ಗುರುರಾಜಾಚಾರ್‌ ತಾಳಿಕೋಟೆ ಸೇರಿದಂತೆ ಇತರರು ಇದ್ದರು.

ಇಂದು ಜೀವನಶೈಲಿ, ನೈತಿಕತೆ ಕೆಟ್ಟಿದೆ. ಅದನ್ನು ಮರುಸ್ಥಾಪಿಸಬೇಕಿದೆ. ಜನರಲ್ಲಿ ಮೋಸ, ವಂಚನೆ, ಅಪರಾಧ ಧೋರಣೆ ಹೆಚ್ಚುತ್ತಿದೆ. ಮಕ್ಕಳಲ್ಲಿ ನೈತಿಕತೆ, ಸಾಮಾಜಿಕ ಸಾಮರಸ್ಯ ಬೆಳೆಸಬೇಕಿದೆ. ಅದು ಅಧ್ಯಾತ್ಮದಿಂದ ಸಾಧ್ಯವಾಗಲಿದೆ. ಇಂದು ಶಿಕ್ಷಿತರೇ ಭಯೋತ್ಪಾದಕರು, ಆತಂಕವಾದಿಗಳಾಗಿರುವುದು ಕಳವಳಕಾರಿ. ಸಂಸ್ಕಾರದ ಕೊರತೆಯಿಂದ ಅವರು ತಪ್ಪು ಹಾದಿ ಹಿಡಿಯುತ್ತಿದ್ದಾರೆ. ಹೀಗಾಗಿ ಸಂಸ್ಕಾರ ಬಹಳ ಮುಖ್ಯ.
ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಶ್ರೀ ಸೋಂದಾ ಸ್ವರ್ಣವಲ್ಲಿ ಮಠ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.