ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ದಲ್ಲಾಳಿಗಳ ಆಟ-ಜನರಿಗೆ ಪ್ರಾಣಸಂಕಟ


Team Udayavani, Apr 13, 2018, 5:54 PM IST

ray-2.jpg

ಮಾನ್ವಿ: ಪಟ್ಟಣದ ಉಪ ನೋಂದಣಾಧಿಕಾರಿ ಕಚೇರಿ ಅವ್ಯವಸ್ಥೆ ಆಗರವಾಗಿದ್ದು, ದಲ್ಲಾಳಿಗಳು, ಖಾಸಗಿ ವ್ಯಕ್ತಿಗಳು ಆಡಿದ್ದೇ ಆಟವಾಗಿದ್ದು, ಇದರಿಂದ ವಿವಿಧ ಕೆಲಸ-ಕಾರ್ಯಗಳಿಗೆ ಆಗಮಿಸುವ ಜನರ ಕೆಲಸಗಳು ಸಕಾಲಕ್ಕೆ ಆಗದೇ ಪರದಾಡುವಂತಾಗಿದೆ.

ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಯಾವುದೇ ವ್ಯವಸ್ಥೆ ಸರಿಯಾಗಿಲ್ಲ. ಕಚೇರಿಯಲ್ಲಿ ಸಾರ್ವಜನಿಕರ ಮಾಹಿತಿಗೆ ಯಾವುದೇ ಫಲಕಗಳನ್ನು ಹಾಕಿಲ್ಲ. ಇರುವ ಫಲಕವನ್ನೂ ಕೂಡ ಕೋಣೆಯೊಂದರ ಮೂಲೆಯಲ್ಲಿಡಲಾಗಿದೆ. ದೊರೆಯುವ ಸೇವೆಗಳಿಗೆ ಅನುಗುಣವಾಗಿ ಪ್ರತ್ಯೇಕ ಕೌಂಟರ್‌ಗಳನ್ನು ತೆರೆದಿಲ್ಲ. ಸಾರ್ವಜನಿಕರು ನೋಂದಣಿಗೆ ನೀಡಿದ ದಾಖಲೆಪತ್ರಗಳನ್ನು ವ್ಯವಸ್ಥಿತವಾಗಿ ಸಂಗ್ರಹಿಸಿಡದೇ ಕೋಣೆ ಯೊಂದರಲ್ಲಿ ಎಲ್ಲೆಂದರಲ್ಲಿಡಲಾಗಿದೆ. ದಾಖಲೆಗಳ ರೂಮ್‌ನಲ್ಲಿ ಸಿಬ್ಬಂದಿ ಹೊರತುಪಡಿಸಿ ಖಾಸಗಿ ವ್ಯಕ್ತಿಗಳಿಗೆ ಪ್ರವೇಶ ನಿಷಿದ್ಧವಿದ್ದರೂ ದಲ್ಲಾಳಿಗಳು, ಪ್ರಭಾವಿ ಖಾಸಗಿ ವ್ಯಕ್ತಿಗಳು ತೆರಳುತ್ತಾರೆ. ಅವ್ಯವಸ್ಥೆಯ ಬಗ್ಗೆ ಮಾಹಿತಿ ಇದ್ದರೂ ಮೇಲಾಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ದಲ್ಲಾಳಿಗಳ ಹಾವಳಿ: ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಮಿತಿ ಮೀರಿದೆ. ನೋಂದಣಿ ಕಾರ್ಯಕ್ಕೆ ನಿಗದಿತ ಶುಲ್ಕಕ್ಕಿಂತ ಹೆಚ್ಚು ವಸೂಲಿ ಮಾಡಲಾಗುತ್ತಿದೆ. 50 ರೂ.ನಿಂದ 250 ರೂ. ಶುಲ್ಕವಿರುವ ಸೇವೆಗಳಿಗೆ 500ರಿಂದ 2000 ರೂ.ವರೆಗೆ ಖರ್ಚು ಮಾಡಬೇಕಾಗುತ್ತಿದೆ. ನೇರವಾಗಿ ಸಾರ್ವಜನಿಕರು ಹೋದರೆ ಕೆಲಸ ಬೇಗ ಆಗುವುದಿಲ್ಲ. ಬಡವರು, ಅನಕ್ಷರಸ್ಥರು ಹಾಗು ರೈತರು ಹೋದರೆ ಕಚೇರಿಯಲ್ಲಿ ಎಲ್ಲೆಲ್ಲಿ ಏನು ನಡೆಯುತ್ತದೆ ಎನ್ನುವುದೇ ಅರ್ಥವಾಗುವುದಿಲ್ಲ. ಮಧ್ಯವರ್ತಿಗಳ ಮೂಲಕ ತೆರಳಿದರೆ ಒಂದೇ ದಿನದಲ್ಲಿ ಕೆಲಸವಾಗುತ್ತದೆ. ಇದಕ್ಕಾಗಿ ದಲ್ಲಾಳಿಗಳಿಗೆ ಸಾವಿರಾರು ರೂ. ನೀಡಬೇಕು ಎಂಬ ಆರೋಪ ಕೇಳಿಬರುತ್ತಿವೆ. 

ಸೌಲಭ್ಯಗಳಿಲ್ಲ: ಕಚೇರಿಗೆ ಆಗಮಿಸುವ ಸಾರ್ವಜನಿಕರ ಬಳಕೆಗೆ ಶೌಚಾಲಯ ವ್ಯವಸ್ಥೆ ಇಲ್ಲ. ಮಹಿಳೆಯರು, ಪುರುಷರು ಮೂತ್ರ ವಿಸರ್ಜನೆಗೆ ಸುತ್ತಮುತ್ತಲಿನ ಜಾಲಿಗಿಡಗಳ ಮರೆಯನ್ನೆ ಅವಲಂಬಿಸಬೇಕಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ಸರಿಯಾದ ಪಾರ್ಕಿಂಗ್‌ ವ್ಯವಸ್ಥೆ ಮಾಡಿಲ್ಲ. 

ಸಿಸಿ ಕ್ಯಾಮೆರಾಗಳಿಲ್ಲ: ಕಚೇರಿಯಲ್ಲಿ ಸಿಸಿ ಕ್ಯಾಮೆರಾಗಳನ್ನು ಅವಳಡಿಸಿಲ್ಲ. ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಕಚೇರಿ ಅಧಿಕಾರಿಗಳೇ ಹಿಂದೇಟು ಹಾಕುತ್ತಿದ್ದಾರೆ. ಕಚೇರಿಯಲ್ಲಿ ಅನಧಿಕೃತ ವ್ಯಕ್ತಿಗಳು ಕಚೇರಿ ಸಿಬ್ಬಂದಿಯಂತೆ ಓಡಾಡಿಕೊಂಡು ರೈತರಿಗೆ, ಅನಕ್ಷರಸ್ಥರಿಗೆ ಮೋಸ ಮಾಡುತ್ತಿದ್ದಾರೆ. ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದರೆ ಖಾಸಗಿ ವ್ಯಕ್ತಿಗಳ ಬಣ್ಣ ಬಯಲಾಗುತ್ತದೆ. ದಲ್ಲಾಳಿಗಳ ಮೇಲೆ ನಿಗಾ ವಹಿಸಬೇಕು, 2008ರಿಂದ ಮಾನ್ವಿಯಲ್ಲಿರುವ ಉಪ ನೋಂದಣಾಧಿಕಾರಿ ಶಕೀಲ್‌ ಅಹ್ಮದ್‌ ಅವರನ್ನು ವರ್ಗಾವಣೆ ಮಾಡ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. 

ಒಟ್ಟಾರೆಯಾಗಿ ಉಪ ನೋಂದಣಾಧಿಕಾರಿ ಕಚೇರಿ ಅವ್ಯವಸ್ಥೆ ಮಿತಿ ಮೀರಿದೆ. ದಲ್ಲಾಳಿಗಳ ಹಾಗೂ ಅನಧಿಕೃತ ವ್ಯಕ್ತಿಗಳ ದರಬಾರ್‌ ಹೆಚ್ಚಾಗಿದೆ. ಸರಿಯಾದ ಸೌಲಭ್ಯಗಳಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ. ಇನ್ನಾದರೂ ಸಂಬಂಧಿಸಿದ ಮೇಲಧಿಕಾರಿಗಳು ಇತ್ತ ಗಮನ ಹರಿಸಿ ಅವ್ಯವಸ್ಥೆ ಮತ್ತು ಅವ್ಯವಹಾರಕ್ಕೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪಟ್ಟಣದ ಉಪ ನೋಂದಣಾಧಿಕಾರಿ ಶಕೀಲ್‌ ಅಹಮ್ಮದ್‌ ಆಗಮಿಸಿ ಈಗಾಗಲೇ 9 ವರ್ಷ ಕಳೆದಿದ್ದು, ವರ್ಗಾವಣೆ ನಿಯಮ ಉಲ್ಲಂಘನೆ ಮಾಡಲಾಗಿದೆ. ಚುನಾವಣೆ ನಿಮಿತ್ತ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆಡಿದ್ದರೂ, ಇವರನ್ನು ಮಾಡಿಲ್ಲ. ಅಲ್ಲದೆ ಉಪ ನೋಂದಣಾಧಿಕಾರಿ ಕಚೇರಿ ಅವ್ಯವಸ್ಥೆಯನ್ನು ಮೇಲಾಧಿಕಾರಿಗಳು ಸರಿಪಡಿಸಬೇಕು. ದಲ್ಲಾಳಿಗಳಿಗೆ ಕಡಿವಾಣ ಹಾಕಬೇಕು.
 ಬಸವರಾಜ ನಕ್ಕುಂದಿ. ದಲಿತ ಮುಖಂಡರು ಮಾನ್ವಿ

ಮಾನ್ವಿ ಉಪ ನೋಂದಣಿ ಅಧಿಕಾರಿ ಕಚೇರಿ ಅವ್ಯವಸ್ಥೆ ಕುರಿತು ಆರೋಪಗಳು ಕೇಳಿಬರುತ್ತಿರುವುದು ನಿಜ. ಯಾರಾದರೂ ದಾಖಲೆಗಳೊಂದಿಗೆ ಸೂಕ್ತ ದೂರು ನೀಡಿದಲ್ಲಿ ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ಶಿಫಾರಸು ಮಾಡುತ್ತೇನೆ.
 ಎಂ.ಜಿಂಗದ್‌, ಜಿಲ್ಲಾ ನೋಂದಣಿ ಅಧಿಕಾರಿ ರಾಯಚೂರು.

ದಲ್ಲಾಳಿಗಳು ಅಧಿಕ ಹಣ ಪಡೆಯುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ದೂರು ಬಂದಲ್ಲಿ ಖಂಡಿತವಾಗಿ ಕ್ರಮ ಕೈಗೊಳ್ಳುತ್ತೇನೆ. ವರ್ಗಾವಣೆಯಾದರೆ ಯಾವುದೇ ತಾಲೂಕಿಗೆ ಹೋಗಲು ಸಿದ್ದ.
 ಶಕೀಲ್‌ ಅಹಮ್ಮದ್‌, ಉಪನೋಂದಣಾಧಿಕಾರಿ ಮಾನ್ವಿ 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.