ನಗರದ 40ನೇ ಉಪಕಾಲುವೆ ರಸ್ತೆ ಕೆಲಸ ಶೀಘ್ರ


Team Udayavani, Jan 24, 2022, 2:28 PM IST

18road

ಸಿಂಧನೂರು: ಬಹುನಿರೀಕ್ಷಿತ ಸಿಂಧನೂರು ನಗರದಲ್ಲಿನ 40ನೇ ಉಪಕಾಲುವೆ ಮಾರ್ಗದ ರಸ್ತೆ ಕಾಮಗಾರಿ ಕೈಗೊಳ್ಳುವುದು ನಿಶ್ಚಿತ. ಈಗಾಗಲೇ 2 ಕೋಟಿ ರೂ. ಟೆಂಡರ್‌ ಮುಕ್ತಾಯವಾಗಿದ್ದು, ತಾಂತ್ರಿಕ ಕಾರಣಕ್ಕೆ ವಿಳಂಬವಾಗಿದೆ ಎಂದು ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ನಿರ್ಮಿತಿ ಕೇಂದ್ರದವರಿಗೆ 40ನೇ ಉಪಕಾಲುವೆಯ ಸಿಸಿ ರಸ್ತೆ ಕಾಮಗಾರಿಗೆ 2 ಕೋಟಿ ರೂ. ವೆಚ್ಚದ ಕೆಲಸ ಹಂಚಿಕೆಯಾಗಿದೆ. 1 ಕೋಟಿ ರೂ. ವೆಚ್ಚದ ಕೆಲಸಕ್ಕೆ ಸಂಬಂಧಿಸಿ ತಾಂತ್ರಿಕ ಅಡಚಣೆ ಇದ್ದು, ಅದನ್ನು ಕೂಡ ಸರಿಪಡಿಸಲಾಗುವುದು ಎಂದರು.

ಅವರು ನಗರದ 18ನೇ ವಾರ್ಡ್‌ನಲ್ಲಿ 51 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ನಗರೋತ್ಥಾನ ಯೋಜನೆಯಡಿ ಸಿಂಧನೂರು ನಗರಕ್ಕೆ 30 ಕೋಟಿ ರೂ. ಅನುದಾನ ದೊರಕಿದೆ. ಆಯಾ ವಾರ್ಡಿನ ಸದಸ್ಯರ ನೇತೃತ್ವದಲ್ಲಿ ನಾನು ಮತ್ತು ನಗರಸಭೆ ಅಧ್ಯಕ್ಷರು ಅಗತ್ಯ ಇರುವ ರಸ್ತೆ ಕಾಮಗಾರಿಗಳ ಸರ್ವೇಗೆ ಮುಂದಾಗಿದ್ದೇವೆ. ಈಗಾಗಲೇ ನಗರದಲ್ಲಿ 14-15 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗಳು ಚಾಲ್ತಿಯಲ್ಲಿವೆ. ನಗರತ್ಥೋನ ಯೋಜನೆಯ ಅನುದಾನದಲ್ಲಿ ರಸ್ತೆಗಳನ್ನು ಕೈಗೊಂಡರೆ, ಬಹುತೇಕ ನಗರದಲ್ಲಿ ಶೇ.99ರಷ್ಟು ಕಾಮಗಾರಿ ಪೂರ್ಣಗೊಳ್ಳಲಿವೆ ಎಂದರು.

ಹಲವು ಕಾಮಗಾರಿಗೆ ಚಾಲನೆ

ಶಾಸಕ ವೆಂಕಟರಾವ್‌ ನಾಡಗೌಡರು ಬಳಿಕ ಹೊಸಳ್ಳಿ ಕ್ಯಾಂಪಿನಲ್ಲಿ 45 ಲಕ್ಷ ರೂ. ಅಂದಾಜು ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿ, ಶ್ರೀಪುರಂಜಂಕ್ಷನ್‌ನಲ್ಲಿ 25 ಲಕ್ಷ ರೂ. ವೆಚ್ಚದ ಕಾಮಗಾರಿ, ಮಲ್ಕಾಪುರದಲ್ಲಿ 30 ಲಕ್ಷ ರೂ. ವೆಚ್ಚದ ಕೆಲಸ, ಹುಡಾ ಗ್ರಾಮದಲ್ಲಿ 40 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿ, ಮುಕ್ಕುಂದಾ ಗ್ರಾಮದಲ್ಲಿ 26.82 ಲಕ್ಷ ರೂ. ಅಂದಾಜು ವೆಚ್ಚದ ಕಾಮಗಾರಿ, ಚನ್ನಳ್ಳಿ ಗ್ರಾಮದಲ್ಲಿ 35 ಲಕ್ಷ ರೂ. ಅಂದಾಜು ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕೆಲಸಕ್ಕೆ ಚಾಲನೆ ನೀಡಿದರು.

ಗಾಂಧಿನಗರ ವ್ಯಾಪ್ತಿಯ ಹಂಚಿನಾಳ ಕ್ಯಾಂಪಿನಲ್ಲೂ ಇದೇ ವೇಳೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುತ್ತಿರುವುದಾಗಿ ಹೇಳಿದರು. ಜೆಡಿಎಸ್‌ ಮುಖಂಡರಾದ ಬಿ.ಹರ್ಷ, ಧರ್ಮನಗೌಡ ಮಲ್ಕಾಪುರ, ಶಂಕರಗೌಡ ಎಲೆಕೂಡ್ಲಿಗಿ, ಹೊಸಳ್ಳಿ ಗ್ರಾಪಂ ಅಧ್ಯಕ್ಷ ನಾಗಲಿಂಗಪ್ಪ, ಭಾಷಾ ಟೈಲ್ಸ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.