ಹಿಂದೆಂದೂ ಕಾಣದ ಚಳಿಗೆ ಜನ ಗಡಗಡ


Team Udayavani, Dec 20, 2018, 1:47 PM IST

ray-1.jpg

ದೇವದುರ್ಗ/ಜಾಲಹಳ್ಳಿ: ವಾಯುಭಾರ ಕುಸಿತದಿಂದ ಸೀಮಾಂಧ್ರದಲ್ಲಿ ಪಿತಾಯಿ ಚಂಡ ಮಾರುತದ ಅಬ್ಬರದಿಂದಾಗಿ ಕಳೆದ ಎರಡು ದಿನಗಳಿಂದ ದೇವದುರ್ಗ ತಾಲೂಕಿನಾದ್ಯಂತ ಚಳಿ ಹೆಚ್ಚಾಗಿದ್ದು, ಜನ ಗಡಗಡ ನಡುಗುವಂತಾಗಿದೆ. ಕಳೆದ ಎರಡು ದಿನಗಳಿಂದ ಚಳಿ ಹಾಗೂ ತಂಗಾಳಿ ತೀವ್ರತೆ ಹೆಚ್ಚಿದೆ. ಮಧ್ಯಾಹ್ನ 1 ಗಂಟೆಯಾದರೂ ಕೊರೆವ ಚಳಿ ಕಡಿಮೆ ಆಗುತ್ತಿಲ್ಲ. ಬೆಳಗ್ಗೆ ಮತ್ತು ರಾತ್ರಿ ಕೊರೆವ ಚಳಿಗೆ ಜನ ಮನೆಯಿಂದ ಹೊರಗೆ ಬರಲು ಕೂಡ ಹಿಂದೇಟು ಹಾಕುವಂತಾಗಿದೆ. ಜನರಿಲ್ಲದೇ ಮಾರುಕಟ್ಟೆಗಳು ಬಿಕೋ ಎನ್ನುತ್ತಿದ್ದು ವ್ಯಾಪಾರ ವಹಿವಾಟಿಗೆ ಹಿನ್ನಡೆ ಆಗಿದೆ.

ಚಳಿ ತೀವ್ರತೆಗೆ ಹೆದರಿದ ಮನೆ ಬಾಗಿಲು, ಕಿಟಕಿ ಮುಚ್ಚಿಕೊಂಡು ಒಳಗೆ ಸೇರಿದರೆ, ಶಾಲಾ-ಕಾಲೇಜುಗಳಲ್ಲಿ ತರಗತಿ ಕೋಣೆಗಳ ಬಾಗಿಲು, ಕಿಟಕಿಗಳನ್ನು ಮುಚ್ಚಿಕೊಂಡು ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಕೆಲಸಕ್ಕೆ ಹೊರಗಡೆ
ತೆರಳಬೇಕಾದ ಅನಿವಾರ್ಯತೆ ಇದ್ದ ಜನರು ಬೆಚ್ಚಗಿರಲು ಸ್ವೆಟರ್‌, ಶಾಲು, ಜಾಕೇಟ್‌, ಕಾಲು ಚೀಲ, ಕೈಗವುಸು, ಟೋಪಿ, ಕಿವಿ ಮುಚ್ಚುವ ಬಟ್ಟೆ ಸೇರಿದಂತೆ ದಪ್ಪನೆ ಬಟ್ಟೆಗಳನ್ನು ಹಾಕಿಕೊಂಡು ತೆರಳುತ್ತಿದ್ದಾರೆ.
 
ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಹಾಗೂ ತಣ್ಣನೆಯ ಗಾಳಿಗೆ ವೃದ್ಧರು, ಮಕ್ಕಳಿಗೆ ಶೀತ ಸಂಬಂಧಿತ ಕಾಯಿಲೆಗಳು ಕಾಡುತ್ತಿವೆ. ಬೆಳಗ್ಗೆ ವಾಯು ವಿಹಾರಿಗಳು, ಪೇಪರ್‌ ಹಾಕುವ ಹುಡುಗರು, ಸ್ವತ್ಛತಾ ಕಾರ್ಯ ಕೈಗೊಳ್ಳುವ ಗ್ರಾಪಂ ಸಿಬ್ಬಂದಿ, ಹಾಲು ಹಾಕುವವರು ಚಳಿಗೆ ನಲುಗಿ ಬೆಚ್ಚನೆ ಉಡುಪುಗಳ ಮೊರೆ ಹೋಗಿದ್ದಾರೆ. ಬೆಚ್ಚನೆ ಉಡುಪುಗಳು ಇಲ್ಲದಿರುವವರು ನಡುಗುತ್ತಲೆ ದಿನದ ಕಾಯಕ ಮಾಡುತ್ತಿದ್ದಾರೆ. ಇನ್ನು ಕೆಲವೆಡೆ ಜನ ಗುಂಪುಗುಂಪಾಗಿ ಸೇರಿ ಬೆಂಕಿ ಹಚ್ಚಿ ಕಾಯಿಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಚಳಿಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ನೆಗಡಿ, ಕೆಮ್ಮು, ಶೀತ, ಜ್ವರ ಬರುವ ಸಾಧ್ಯತೆಗಳಿವೆ.

ಕಾಲಿನ ಹಿಮ್ಮಡಿ, ತುಟಿ ಒಡೆಯುವ ಸಾಧ್ಯತೆಗಳು ಇದ್ದು. ಅದರಲ್ಲಿ ಚಿಕ್ಕಮಕ್ಕಳು ಹಾಗೂ ವೃದ್ಧರಲ್ಲಿ ವಾತಾವರಣ ಬದಲಾವಣೆಯಿಂದ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಗಳು ಇವೆ. ಆದ್ದರಿಂದ ಬೆಚ್ಚಗಿನ ಬೆಟ್ಟೆಗಳನ್ನು ಧರಿಸುವದು, ಕಾಯಿಸಿ ಆರಿಸಿದ ನೀರು ಕುಡಿಯುವುದು, ಶುಚಿಯಾದ ಹಾಗೂ ಬಿಸಿಯಾದ ಆಹಾರ ಸೇವಿಸಬೇಕೆಂದು
ವೈದ್ಯರು ಹೇಳುತ್ತಾರೆ. 

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.