ಕ್ರಿಕೆಟ್‌ ಕ್ರೀಡಾಂಗಣಕ್ಕೆ ಬೇಕಿದೆ ಕಾಯಕಲ್ಪ


Team Udayavani, Apr 5, 2022, 1:21 PM IST

9stadium

ರಾಯಚೂರು: ಸುಮಾರು ಎರಡು ದಶಕಗಳಿಂದ ನನೆಗುದಿಗೆ ಬಿದ್ದ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಈ ಬಾರಿಯಾದರೂ ಪೂರ್ಣಗೊಳ್ಳುವುದೇ ಎಂಬ ನಿರೀಕ್ಷೆ ಮೂಡಿದೆ. ಈಗಾಗಲೇ ಕೆಲವು ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿ ಮುಗಿಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಇಚ್ಛಾಶಕ್ತಿ ತೋರಬೇಕಿದೆ.

ರಾಯಚೂರು-ಮಂತ್ರಾಲಯ ರಸ್ತೆ ಮಧ್ಯದಲ್ಲಿ ಸುಮಾರು 12 ಎಕರೆ ಸ್ಥಳದಲ್ಲಿ ಈ ಕ್ರೀಡಾಂಗಣ ನಿರ್ಮಿಸಲಾಗುತ್ತಿದ್ದು, ನಗರದಿಂದ ಸುಮಾರು 10 ಕಿಮೀ ದೂರದಲ್ಲಿದೆ. ಎಂ.ಎಸ್‌.ಪಾಟೀಲ್‌ ಸಚಿವರಾಗಿದ್ದಾಗ 1999ನೇ ಇಸವಿಯಲ್ಲಿ ಇದಕ್ಕೆ ಅಡಿಗಲ್ಲು ಹಾಕಲಾಗಿತ್ತು. ಆದರೆ ಈವರೆಗೂ ಕ್ರೀಡಾಂಗಣ ಮಾತ್ರ ಪರಿಪೂರ್ಣತೆ ಕಂಡಿಲ್ಲ.

ಈಗಾಗಲೇ ಸುಮಾರು ಮೂರು ಕೋಟಿಗೂ ಅಧಿಕ ವೆಚ್ಚದಲ್ಲಿ ಕ್ರೀಡಾಂಗಣದ ಅನೇಕ ಕಾಮಗಾರಿ ಮಾಡಲಾಗಿದೆ. ಕ್ರೀಡಾಂಗಣ ಸುತ್ತಲೂ ಕಾಂಪೌಂಡ್‌ ನಿರ್ಮಿಸಲಾಗಿದೆ. ಅಂಡರ್‌ ಗ್ರೌಂಡ್‌ ವ್ಯವಸ್ಥೆ, ಸ್ಲಿಂಕರ್‌ ಅಳವಡಿಕೆ, ಮೂರು ಬೋರ್‌ವೆಲ್‌ ವ್ಯವಸ್ಥೆ ಸೇರಿದಂತೆ ಕೆಲವೊಂದು ಕಾಮಗಾರಿ ಮುಗಿದಿವೆ. ಆದರೆ ಪ್ರಮುಖ ಕೆಲಸಗಳೇ ಬಾಕಿ ಉಳಿದಿದ್ದು, ಕ್ರೀಡಾಕೂಟ ಆಯೋಜನೆಗೆ ಅಲಭ್ಯವಾಗಿದೆ.

ಇದೊಂದು ರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಕ್ರೀಡಾಂಗಣವಾಗಿದ್ದು, ಎಲ್ಲ ಸೌಲಭ್ಯಗಳನ್ನು ಸರಿಯಾಗಿ ಮಾಡಬೇಕಿದೆ. 2 ವರ್ಷದ ಹಿಂದೆ ಕರ್ನಾಟಕ ಕ್ರಿಕೆಟ್‌ ಸಂಸ್ಥೆ 2ಕೋಟಿ ರೂ. ಬಿಡುಗಡೆ ಮಾಡಿದೆ. ಆದರೆ ಕೋವಿಡ್‌ ಕಾರಣಕ್ಕೆ ಆ ಹಣ ಬಳಸಲಾಗಿಲ್ಲ. ಈಗ ಕಾಮಗಾರಿ ಪುನಾರಂಭದ ಚರ್ಚೆ ಶುರುವಾಗಿದ್ದು, ಮುಂದಿನ ವಾರದಲ್ಲಿ ಇಂಜಿನಿಯರ್‌ ತಂಡ ಭೇಟಿ ಮಾಡುವ ನಿರೀಕ್ಷೆ ಇದೆ.

ಒಂದೂವರೆ ಕೋಟಿ ರೂ. ಕೆಲಸ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಏಕರೂಪದ ಕ್ರೀಡಾಂಗಣ ನಿರ್ಮಿಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಮುಂದಾಗಿದೆ. ರಾಯಚೂರಿನಲ್ಲೂ ಎಲ್ಲ ಸೌಲಭ್ಯಗಳಿಂದ ಕೂಡಿದ ಕ್ರೀಡಾಂಗಣ ನಿರ್ಮಿಸಲಿ ಎಂಬುದು ಕ್ರೀಡಾಪಟುಗಳ ಒತ್ತಾಯವಾಗಿದೆ. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಸಂಸ್ಥೆ ಇನ್ನೂ ಒಂದೂವರೆ ಕೋಟಿ ರೂ.ಗಿಂತ ಅಧಿಕ ವ್ಯಯ ಮಾಡಲು ಸಿದ್ಧವಿದೆ ಎಂದು ತಿಳಿಸಿದೆ. ಅದರಲ್ಲಿ ಮುಖ್ಯವಾಗಿ ಹುಲ್ಲಿನ ನೆಲಹಾಸು, ಟೆರಫಿಕ್‌ ಗ್ರೌಂಡ್‌, ಏಕರೂಪದ ಪೆವಿಲಿಯನ್‌, ವಿಶ್ರಾಂತಿ ಕೊಠಡಿಗಳು, ಗ್ಯಾಲರಿ ಸೇರಿದಂತೆ ಇನ್ನಿತರೆ ಸೌಲಭ್ಯ ಕಲ್ಪಿಸಬೇಕಿದೆ.

1.75 ಕೋಟಿ ರೂ.ಲಭ್ಯ

ಜಿಲ್ಲಾ ಕ್ರಿಕೆಟ್‌ ಸಂಸ್ಥೆಯ ಎಫ್‌ಡಿ ಖಾತೆಯಲ್ಲಿ 1.75 ಕೋಟಿ ರೂ. ಲಭ್ಯವಿದೆ. ಈ ಹಿಂದೆ ನಗರದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿ ನಡೆದಾಗ ಅದರಿಂದ ಸಂಗ್ರಹಗೊಂಡ ಹಣಕ್ಕೆ ಬಡ್ಡಿ ಸೇರಿ 1.75 ರೂ. ಖಾತೆಯಲ್ಲಿದೆ. ಆದರೆ ಕ್ರೀಡಾಂಗಣ ನಿರ್ಮಾಣಕ್ಕೆ ಬೇಕಾದ ಹಣವನ್ನು ಬಿಸಿಸಿಐ ಸಹಯೋಗದಲ್ಲಿ ಕೆಎಸ್‌ಸಿಎ ನೀಡಲಿದ್ದು, ನಿಮ್ಮ ಹಣ ಬಳಸುವುದು ಬೇಡ ಎನ್ನುತ್ತಿದ್ದಾರೆ.

ಈಚೆಗೆ ಕೆಎಸ್‌ಸಿಎ ಕಾರ್ಯದರ್ಶಿಗಳನ್ನು ಭೇಟಿಯಾಗಿ ಕ್ರೀಡಾಂಗಣ ಕುರಿತು ಚರ್ಚಿಸಲಾಗಿದೆ. ಮುಂದಿನ ವಾರವೇ ಇಂಜಿನಿಯರ್‌ಗಳನ್ನು ಕಳುಹಿಸಿ ವರದಿ ಆದಷ್ಟು ಬೇಗ ಕಾಮಗಾರಿ ಆರಂಭಿಸುವ ವಿಚಾರ ವ್ಯಕ್ತಪಡಿಸಿದ್ದಾರೆ. ಅನುದಾನ ಎಷ್ಟು ಬೇಕಾದರೂ ನೀಡಲು ತಿಳಿಸಿದ್ದು, ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ವರ್ಷಾಂತ್ಯಕ್ಕೆ ಕೆಲಸ ಮುಗಿಸುವ ನಿರೀಕ್ಷೆಯಲ್ಲಿದ್ದೇವೆ. -ಶರಣರೆಡ್ಡಿ, ಮುಖ್ಯಸ್ಥ, ಕ್ರೀಡಾಂಗಣ ಸಮಿತಿ

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.