ಬೆಟದೂರು ತಾಂಡಾಕ್ಕೆ ಆರೋಗ್ಯ ಇಲಾಖೆ ಭೇಟಿ
Team Udayavani, Apr 12, 2017, 12:40 PM IST
ರಾಯಚೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಾನ್ವಿ ತಾಲೂಕು ಬೆಟ್ಟದೂರು ತಾಂಡಾ ನಿವಾಸಿಗಳ ಆರೋಗ್ಯ ವಿಚಾರಣೆಗೆ ಆರೋಗ್ಯ ಇಲಾಖೆ ದೌಡಾಯಿಸಿದೆ.
ತಾಂಡಾದಲ್ಲಿ ಅಶುದ್ಧ ಕುಡಿಯುವ ನೀರಿನಿಂದಾಗಿ ಬಹುತೇಕ ನಿವಾಸಿಗಳು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಕುರಿತು ಉದಯವಾಣಿ ಏ.8ರ ಸಂಚಿಕೆಯಲ್ಲಿ “ಬೆಟ್ಟದೂರು ತಾಂಡಾದಲ್ಲಿ ಶೇ.90 ಜನರಿಗೆ ಕಿಡ್ನಿ ಸ್ಟೋನ್’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ವರದಿಯಿಂದ ಎಚ್ಚೆತ್ತ ಇಲಾಖೆ, ತಾಂಡಾಕ್ಕೆ ಭೇಟಿ ನೀಡಿ ಜನರ ಆರೋಗ್ಯ ಪರೀಕ್ಷಿಸಿದೆ.ಮೂರು ತಂಡಗಳಿಂದ ತಾಂಡಾದ 300ಕ್ಕೂ ಅಧಿಕ ನಿವಾಸಿಗಳ ಆರೋಗ್ಯ ಪರೀಕ್ಷಿಸಲಾಗಿದೆ. ಕಿಡ್ನಿ, ಕೀಲುನೋವು ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುವವರಿಂದ ಮಾಹಿತಿ ಪಡೆಯಲಾಗಿದೆ.
ಇದು ಮೇಲ್ನೋಟಕ್ಕೆ ನೀರಿನಿಂದಾದ ಸಮಸ್ಯೆ ಎಂಬುದು ಖಚಿತವಾಗುತ್ತಿದೆ. ಹೀಗಾಗಿ ಶುದಟಛಿ ಕುಡಿವ ನೀರಿನ ಘಟಕ ಅಳವಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು. ಅಲ್ಲಿವರೆಗೆ ಬೇರೆ ಕಡೆಯಿಂದ ನೀರು ಪಡೆದು ಸೇವಿಸುವಂತೆ ಗ್ರಾಮಸ್ಥರಿಗೆ ಸೂಚಿಸಿದ್ದಾರೆ.
ಬೆಟ್ಟದೂರು ತಾಂಡಾದ ಸಮಸ್ಯೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ತೆರಳಿ ನಿವಾಸಿಗಳ ತಪಾಸಣೆ ನಡೆಸಲಾಗಿದೆ. ನೀರಿನಲ್ಲಿ ಫ್ಲೋರೈಡ್, ಕ್ಯಾಲ್ಸಿಯಂ ಅಂಶ ಹೆಚ್ಚಾಗಿರುವ ಸಾಧ್ಯತೆಗಳಿವೆ. ಕೊಳವೆ ಬಾವಿಗಳ ನೀರಿನ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ. 48 ಗಂಟೆಗಳಲ್ಲಿ ವರದಿ ಬರಲಿದ್ದು, ಸಮಸ್ಯೆಗೆ ನಿಖರ ಕಾರಣ ಗೊತ್ತಾಗಲಿದೆ. ತಾಂಡಾಕ್ಕೆ ಶುದಟಛಿ ನೀರು ಪೂರೈಕೆ ಅಗತ್ಯವಾಗಿದೆ.
– ನಾರಾಯಣಪ್ಪ, ಜಿಲ್ಲಾ ಆರೋಗ್ಯಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?