ಅಜ್ಜನ ಜಾತ್ರೆಗೆ ಭಕ್ತ ಮಹಾ ಸಾಗರ


Team Udayavani, Jan 4, 2018, 3:53 PM IST

ray-1.jpg

ಕೊಪ್ಪಳ: ಕೊಪ್ಪಳದಲ್ಲಿ ಬುಧವಾರ ಸಂಜೆ ಸೂರ್ಯನು ಇಳಿಜಾರಿನತ್ತ ಸಾಗುವ ಹೊತ್ತಿಗೆ ಹೊತ್ತಿಗೆ ಗವಿಸಿದ್ದೇಶ್ವರ ಮಹಾ ರಥೋತ್ಸವ ಲಕ್ಷ ಲಕ್ಷ ಭಕ್ತ ಸಾಗರದ ಮಧ್ಯೆ ಸಾಂಗವಾಗಿ ಸಾಗಿತು. ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ರಥೋತ್ಸವಕ್ಕೆ ಚಾಲನೆ ನೀಡಿ ಲಕ್ಷಾಂತರ ಭಕ್ತ ಸಾಗರ ನೋಡಿ ಮೂಕ ವಿಸ್ಮಿತರಾಗಿ ಅಜ್ಜನ ಮಹಾ ಮಹಿಮೆ ಬಗ್ಗೆ ಕೊಂಡಾಡಿದರು.

ಬಳಿಕ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಿಂದ ಗವಿಸಿದ್ದೇಶ್ವರ ಮಹಾ ಸ್ವಾಮೀಜಿ ಅವರು ನನ್ನನ್ನು ಗವಿಸಿದ್ದೇಶ್ವರ ಜಾತ್ರೆಗೆ ಆಹ್ವಾನ ನೀಡುತ್ತಿದ್ದರು. ಆದರೆ ಇಂದು ಆ ಘಳಿಗೆ ಕೂಡಿಬಂದಿದೆ. ಇದು ಸ್ವರ್ಗದಲ್ಲಿ ನಡೆಯುವಂತ ಮಹೋತ್ಸವ ಎಂದೆನಿಸುತ್ತದೆ. ನನ್ನ 80 ವರ್ಷದ ಜೀವನದಲ್ಲಿಯೇ ಇಂತಹ ಲಕ್ಷಾಂತರ ಭಕ್ತ ಸಾಗರದ ಮಧ್ಯೆ ಸಾಗುವ ರಥೋತ್ಸವವನ್ನು ನೋಡಿಲ್ಲ ಇದು ನನ್ನ ಪುಣ್ಯವೇ ಸರಿ ಎಂದರು.

ಸಂಸ್ಥಾನ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಮಾತನಾಡಿ ಕತ್ತಲೆಯನ್ನು ಕೋಣೆಯಲ್ಲಿ ಕೂಡಿಟ್ಟರೆ ಹೋಗಲ್ಲ. ಕಟ್ಟಿಗೆಯಿಂದ ಹೊಡೆದೋಡಿಸಿದರೂ ಹೋಗಲ್ಲ. ಆದರೆ ಒಂದು ದೀಪ ಬೆಳಗುವ ಮೂಲಕ ಎಂತಹ ಕತ್ತಲೆಯನ್ನಾದರೂ ಓಡಿಸಬಹುದು. ಮನುಷ್ಯನ ಬದುಕಿನಲ್ಲಿ ಕತ್ತಲೆಯನ್ನೂ ದೂರವಾಗಿಸಿ, ಜೀವನ ಬೆಳಗಿಸುವ ಕೆಲಸ ಮಾಡಬೇಕು. ಜಗತ್ತಿನಲ್ಲಿ ಒಳ್ಳೆಯದು ಹಾಗೂ ಕೆಟ್ಟದ್ದು ಎರಡೂ ಇವೆ. ಕೆಟ್ಟದ್ದನ್ನೇ ದೂಷಿಸುತ್ತಾ ಕುಳಿತರೆ ಯಾವುದೇ ಬೆಳವಣಿಗೆ ಕಾಣಲ್ಲ. ಬದಲಿಗೆ ಒಳ್ಳೆಯ ಮಾತನ್ನಾಡುವ ಮೂಲಕ ಒಳ್ಳೆಯ ಕೆಲಸ ಮಾಡುವ ಮೂಲಕ ಜಗತ್ತನ್ನು ಉದ್ದಾರ ಮಾಡಬಹುದಾಗಿದೆ. ನಮ್ಮ ಜೀವನದಲ್ಲಿ ಉತ್ತಮ
ವಿಚಾರ ಅಳವಡಿಸಿಕೊಳ್ಳಬೇಕು ಎಂದರು.

ನಮ್ಮ ಜೀವನ ಪವಿತ್ರವಾಗಲು ಕಾಶಿಗೆ ಹೋಗಿ ಗಂಗೆಯಲ್ಲಿ ಸ್ನಾನ ಮಾಡಿದರೆ ನಮ್ಮ ದೇಹದ ಮೈಲಿಗೆ ಹೋಗುವುದೇ
ವಿನಃ ನಮ್ಮ ಮನಸ್ಸಿನ ಮೈಲಿಗೆ ಹೋಗುವುದಿಲ್ಲ. ನಮ್ಮ ಜೀವನ ಪವಿತ್ರವಾಗಲು ಇನ್ನೊಬ್ಬರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಬೇಕು ಹಾಗೂ ಇನ್ನೊಬ್ಬರ ಮನೆ ಮುರಿದು ಮೋಸ ಮಾಡುವ ಕೆಲಸವನ್ನು ಕೈ ಬಿಟ್ಟರೆ ನಮ್ಮ ಜೀವನ ಸಾರ್ಥಕವಾಗಲಿದೆ ಎಂದು ನುಡಿದರು.

ಲಕ್ಷಾಂತರ ಭಕ್ತರ ಉದ್ಘೋಷ
ಪ್ರತಿ ವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಅಜ್ಜನ ಜಾತ್ರೆಯ ಮಹಾರಥೋತ್ಸವ ಕಣ್ತುಂಬಿಕೊಳ್ಳಲು ಆಗಮಿಸಿದ್ದರು. ಸಂಜೆ ಯಾಗುತ್ತಿದ್ದಂತೆ ಶ್ರೀ ಗವಿಸಿದ್ಧೇಶ್ವರ ಮಹಾರಾಜ್‌ ಕೀ ಜೈ ಎನ್ನುವ ಉದ್ಘೋಷದೊಂದಿಗೆ ತೇರನ್ನು ಪಾದಗಟ್ಟೆಯವರೆಗೆ ಭಕ್ತಿ ಭಾವದಿಂದ ಎಳೆದರು.

ಗವಿಸಿದ್ಧೇಶ್ವರ ಪ್ರೌಢಶಾಲೆ, ವಸತಿ ಗೃಹ, ಕಾಲೇಜಿನ ಆವರಣದಲ್ಲಿ ಮಹಿಳೆಯರು, ಮಕ್ಕಳು ಜಮಾಯಿಸಿದ್ದರು. ಸುತ್ತಮುತ್ತಲಿನ ಕಟ್ಟಡಗಳ ಮೇಲೂ ಜನಜಂಗುಳಿ ಇತ್ತು. ತೇರು ಪಾದಗಟ್ಟೆ ಯವರೆಗೆ ಹೊರಡುತ್ತಿದ್ದಂತೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಮುಂಜಾಗ್ರತಾ ಕ್ರಮವಾಗಿ ಮಠದ ಸುತ್ತಮುತ್ತ 1 ಕಿ.ಮೀ.ವರೆಗೆ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.