ನಿರೀಕ್ಷಿತ ಯಶಸ್ಸು ಕಾಣಬೇಕಿದೆ ನೇತ್ರದಾನ


Team Udayavani, Nov 8, 2021, 12:06 PM IST

11eye

ರಾಯಚೂರು: ನಟ ಪುನೀತ್‌ ರಾಜ್‌ಕುಮಾರ್‌ ಸಾವಿನ ನಂತರ ರಾಜ್ಯದ ವಿವಿಧೆಡೆ ನೇತ್ರದಾನ ಅಭಿಯಾನ ಜೋರಾಗಿದೆ. ಆದರೆ ಈ ಅಭಿಯಾನಕ್ಕೆ ನಿರೀಕ್ಷಿತ ಮಟ್ಟದ ಯಶಸ್ಸು ಕಾಣಬೇಕಿದೆ.

ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ನವೋದಯ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಮಾತ್ರ ನೇತ್ರದಾನ ಪಡೆಯಲು ಅವಕಾಶ ಇದೆ. ಆದರೆ ನವೋದಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಹೆಚ್ಚು ಆಸಕ್ತಿ ತೋರಬೇಕಿದೆ. ಕೆಲ ದಾನಿಗಳು ರಿಮ್ಸ್‌ಗೆ ನೇತ್ರದಾನ ಮಾಡುತ್ತಾರೆ. ವ್ಯಕ್ತಿ ಮೃತಪಟ್ಟ 3-4 ಗಂಟೆಯೊಳಗೆ ಕಣ್ಣುಗಳನ್ನು ಪಡೆಯಬೇಕಿದೆ. ಹೀಗಾಗಿ ಮೃತರು ವಾಸಿಸುವ ಸ್ಥಳ ಸಮೀಪವಿದ್ದರೆ ಮಾತ್ರ ರಿಮ್ಸ್‌ ನೇತ್ರ ವಿಭಾಗದ ಸಿಬ್ಬಂದಿ ಹೋಗಿ ಸಂಗ್ರಹಿಸುತ್ತಾರೆ. ಇಲ್ಲವಾದರೆ ರಿಮ್ಸ್‌ನಲ್ಲಿ ದಾಖಲಾಗಿ ಮೃತಪಟ್ಟಾಗ ಕುಟುಂಬ ಸದಸ್ಯರು ಒಪ್ಪಿದರೆ ಅಲ್ಲಿಯೇ ಸಂಗ್ರಹಿಸಲಾಗುತ್ತದೆ.

ರಿಮ್ಸ್‌ನಲ್ಲಿ ಪ್ರತ್ಯೇಕ ನೇತ್ರ ಚಿಕಿತ್ಸಾ ವಿಭಾಗವಿದ್ದು, ದಾನಿಗಳು ಒಪ್ಪಿದರೆ ನಿಯಮಾನುಸಾರ ಕಣ್ಣುಗಳನ್ನು ಸಂಗ್ರಹಿಸಲಾಗುವುದು. ಆದರೆ ನಮ್ಮಲ್ಲಿ ನೇತ್ರ ಕಸಿ ವಿಭಾಗ ಇಲ್ಲ. ಅದಕ್ಕೆ ವಿಶೇಷ ಅನುಮತಿ ಪಡೆಯಬೇಕಿದೆ. ನಮ್ಮಲ್ಲಿ ಕೇವಲ ಏಳು ಜನ ವೈದ್ಯರಿರುವ ಕಾರಣ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಿಲ್ಲ. ನೇತ್ರ ಸಂಗ್ರಹಿಸಿದರೆ ಬೆಂಗಳೂರಿನ ನಾರಾಯಣ ನೇತ್ರಾಲಯಕ್ಕೆ ಕಳುಹಿಸಲಾಗುವುದು. ಕಣ್ಣುಗಳನ್ನು ಪಡೆಯಲು ಸಾಕಷ್ಟು ಪ್ರಕ್ರಿಯೆಗಳಿವೆ. -ಡಾ| ಸಿದ್ಧೇಶ ಕುಮಾರ್‌, ಎಚ್‌ಒಡಿ, ನೇತ್ರವಿಭಾಗ, ರಿಮ್ಸ್‌

ಪ್ರತಿಯೊಬ್ಬ ಮನುಷ್ಯನಿಗೆ ದಾನ ಮಾಡುವುದು ದೊಡ್ಡ ಗುಣ. ನಾವು ಇರುವಾಗ ಬೇರೆ ಬೇರೆ ಸ್ವರೂಪದ ದಾನಗಳು ಮಾಡುತ್ತೇವೆ. ಆದರೆ ಸತ್ತ ಮೇಲೆಯೂ ಇನ್ನೊಬ್ಬರ ಬಾಳಿಗೆ ಬೆಳಕಾಗುವುದೇ ಶ್ರೇಷ್ಠ ದಾನ. ಆದರೆ ಯಾರಿಗೂ ಈ ವಿಚಾರದಲ್ಲಿ ಒತ್ತಾಯ ಮಾಡಲು ಬರಲ್ಲ. ಬೇರೆಯವರಿಗೆ ಅನುಕೂಲ ಆಗುವುದಾದರೆ ಖಂಡಿತಾ ಇಂಥ ದಾನಗಳನ್ನು ಮಾಡಬೇಕು. -ಪಂ| ನರಸಿಂಹಲು ವಡವಾಟಿ, ಅಂತಾರಾಷ್ಟ್ರೀಯ ಕ್ಲಾರಿಯೋನೆಟ್‌ ವಾದಕ

ಇದನ್ನೂ ಓದಿ: ಥ್ರಿಲ್‌ ನೀಡಲು ರಮೇಶ್‌ ‘100’ ರೆಡಿ: ನ.19ಕ್ಕೆ ಚಿತ್ರ ರಿಲೀಸ್

ಅನ್ನದಾನ, ರಕ್ತದಾನದಂತೆ ನೇತ್ರದಾನವು ಶ್ರೇಷ್ಠ. ನಮ್ಮ ನಂತರ ಬೇರೆಯವರ ಬಾಳಿಗೆ ಬೆಳಕು ನೀಡುವ ಕೆಲಸ ಆಗಬೇಕು. ಜಗತ್ತಿನಲ್ಲಿ ಎಷ್ಟೋ ಜನರಿಗೆ ದೃಷ್ಟಿ ಇಲ್ಲದೇ ಅಂಧಕಾರದಲ್ಲಿ ಬದುಕುತ್ತಿದ್ದಾರೆ. ಅಂಥವರಿಗೆ ಈ ಸುಂದರ ಜಗತ್ತನ್ನು ನೋಡುವ ಅವಕಾಶ ಕಲ್ಪಿಸಿಕೊಟ್ಟಂತೆ ಆಗಲಿದೆ. ಈಗ ದಾನ ಮಾಡಿದರೂ ನಾವು ಸತ್ತ ನಂತರವೇ ಕಣ್ಣುಗಳನ್ನು ಪಡೆಯುವುದರಿಂದ ಯಾವುದೇ ತೊಂದರೆ ಇಲ್ಲ. ಯುವ ಸಮೂಹ ಯಾವುದೇ ಭಯವಿಲ್ಲದೇ ನೇತ್ರದಾನಕ್ಕೆ ಮುಂದಾಗಬೇಕು. -ಡಿಂಗ್ರಿ ನರೇಶ, ಸಿನಿಮಾ ನಟ, ರಾಯಚೂರು

-ಸಿದ್ದಯ್ಯಸ್ವಾಮಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.