ಜಾನುವಾರು ಜಾತ್ರೆಯಲ್ಲಿ ಸೌಲಭ್ಯ ಮರೀಚಿಕ


Team Udayavani, Dec 1, 2018, 1:18 PM IST

ray-3.jpg

ದೇವದುರ್ಗ: ಪಟ್ಟಣದ ಕಪಿಲ ಸಿದ್ದರಾಮೇಶ್ವರ ಜಾತ್ರೆ ಪ್ರಯುಕ್ತ ಜಾನುವಾರುಗಳ ಜಾತ್ರೆಗೆ ಸೌಲಭ್ಯ ಮರೀಚಿಕೆಯಾಗಿದೆ. ಕುಡಿಯುವ ನೀರು, ವಿದ್ಯುತ್‌ ಸೇರಿ ಇತರೆ ಸೌಲಭ್ಯಗಳ ಕೊರತೆಯಿಂದ ಜಾತ್ರೆಗೆ ಆಗಮಿಸಿರುವ ನೂರಾರು ರೈತರು ಚಳಿಯಲ್ಲಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮುದ್ದೇಬಿಹಾಳ, ಸುರುಪುರ, ಕೊಡೇಕಲ್‌, ಶಹಾಪುರ, ಕೋಳ್ಳರು ಸೇರಿ ದೇವದುರ್ಗ ತಾಲೂಕಿನ ಸುತ್ತಲೂ ಗ್ರಾಮಗಳಿಂದ ಜಾನುವಾರುಗಳು ಮಾರಾಟ ಮಾಡಲು ಆಗಮಿಸಿದ ರೈತರಿಗೆ ಸೌಲಭ್ಯ ಕಲ್ಪಿಸಬೇಕಾದ ಇಲ್ಲಿಯ ಪುರಸಭೆ ಆಡಳಿತ ವರ್ಗ ಕಣ್ಣು ಮುಚ್ಚಿ ಕುಳಿತಿದೆ ಎಂದು ಆರೋಪ ಕೇಳಿ ಬಂದಿದೆ. ಕಪಿಲ ಸಿದ್ದರಾಮೇಶ್ವರ ಜಾತ್ರೆ ಪ್ರಯುಕ್ತ ಜಾನುವಾರುಗಳ ವಹಿವಾಟು ಪಟ್ಟಣದ ಸಾರ್ವಜನಿಕ ಕ್ಲಬ್‌, ಪೊಲೀಸ್‌ ಠಾಣೆ ಎದುರು, ದುರುಗಮ್ಮ ದೇವಸ್ಥಾನ, ಜಾಮೀಯ ಮಸೀದಿಗೆ ಹೋಗುವ ರಸ್ತೆ ಸೇರಿ ಪ್ರಮುಖ ಬೀದಿಯಲ್ಲಿ ವಹಿವಾಟು ನಡೆಯುತ್ತದೆ.

ಎಲ್ಲೆಂದರಲ್ಲಿ ಜಾನುವಾರುಗಳ ಜಾತ್ರೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಸತತ ಬರ ಆವರಿಸಿದ್ದರಿಂದ ರೈತರು ಚಿಂತೆಯಲ್ಲಿದ್ದಾರೆ. ಇಂಥ ಸಂಕಷ್ಟದ ಸ್ಥಿತಿಯಲ್ಲಿ ಜಾನುವಾರಗಳನ್ನು ಖರೀದಿಸಲು ರೈತರು ಬರುತ್ತಿಲ್ಲ. ಹೀಗಾಗಿ ಮಾರಾಟಕ್ಕೆ ಬಂದಿರುವ ಜಾನುವಾರು ಮಾಲೀಕರಿಗೆ ಚಿಂತೆ ಎದುರಾಗಿದೆ. ಎರಡು ದಿನಗಳಿಂದ ನಡೆಯುತ್ತಿರುವ ಜಾನುವಾರುಗಳ ಜಾತ್ರೆ ಮಂದಗತಿಯಲ್ಲಿ ಸಾಗಿದೆ. 

ಮೇವಿಗೆ ಪರದಾಟ: ತಾಲೂಕಿನಲ್ಲಿ ಸತತ ಬರದ ಛಾಯೆ ಎದುರಾದ ಹಿನ್ನೆಲೆಯಲ್ಲಿ ಬೆಳೆಗಳು ಕೈಗೆ ಬಂದಿಲ್ಲ. ಹೀಗಾಗಿ ಮೇವಿಗಾಗಿ ರೈತರು ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಮುದ್ದೇಬಿಹಾಳ, ಶಹಾಪುರ, ಸುರುಪುರ ಸೇರಿ ಇತರೆ ತಾಲೂಕಿನಿಂದ ಆಗಮಿಸಿದ ರೈತರು ಕೈಯಲ್ಲಿ ಹಣ ಹಿಡಿದುಕೊಂಡು ಅಲೆದರೂ ಮೇವು ಸಿಗದೇ ಅನೇಕ ತೊಂದರೆ ಪಡುವಂತಾಗಿದೆ.

ಎಲ್ಲೆಂದರಲ್ಲಿ ಊಟ: ಪಟ್ಟಣದ ಸಾರ್ವಜನಿಕ ಕ್ಲಬ್‌, ಪೊಲೀಸ್‌ ಠಾಣೆ, ನ್ಯಾಯಾಧೀಶರ ಮನೆ ಎದುರು ನಡೆಯುತ್ತಿರುವ ಜಾನುವಾರಗಳ ಜಾತ್ರೆಯಲ್ಲಿ ಮಾರಾಟ ಮಾಡಲು ಆಗಮಿಸಿದ ರೈತರು ಊಟ ಮಾಡಲು ಸೂಕ್ತ ಸ್ಥಳದ ಅಭಾವದ ಹಿನ್ನೆಲೆ ರೈತರು ಎಲ್ಲೆಂದರಲ್ಲಿ ಕುಳಿತು ಊಟ ಮಾಡಬೇಕಾದ ಅನಿವಾರ್ಯತೆ ಬಂದಿದೆ. ಜಾನುವಾರುಗಳ ಜಾತ್ರೆಗೆ ಆಗಮಿಸುವ ರೈತರಿಗೆ ಪುರಸಭೆ ಆಡಳಿತ ವರ್ಗ ಅನುಕೂಲ ಕಲ್ಪಿಸಲು ಹಿಂದೇಟು ಹಾಕಿದ್ದರಿಂದ ಅವ್ಯವಸ್ಥೆ ಆಗರ ಮಧ್ಯೆ ಊಟ ಮಾಡಬೇಕಾಗಿದೆ ಎಂದು ರೈತ ಹನುಮಂತ ಆಗ್ರಹಿಸಿದರು

ಜಾನುವಾರಗಳ ಜಾತ್ರೆಗೆ ಬಂದ ರೈತರಿಗೆ ಕುಡಿಯುವ ನೀರು, ವಿದ್ಯುತ್‌ ಸೌಲಭ್ಯ ಕಲ್ಪಿಸುವಂತೆ ಸಂಬಂಧಿಸಿದ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಪರಿಶೀಲಿಸಿ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇನೆ. 
ಫೇರೋಜ್‌ ಖಾನ್‌, ಪುರಸಭೆ ಮುಖ್ಯಾಧಿಕಾರಿ

„ನಾಗರಾಜ ತೇಲ್ಕರ

ಟಾಪ್ ನ್ಯೂಸ್

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.