ಮೊದಲ ಸಾಹಿತ್ಯ ಸಮ್ಮೇಳನ ಮಸ್ಕಿಯ ಹಿರಿಮೆ
Team Udayavani, Feb 7, 2021, 12:46 PM IST
ಮಸ್ಕಿ: ಮಸ್ಕಿ ತಾಲೂಕು ಕೇಂದ್ರದಲ್ಲಿ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಫೆ.14ರಂದು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಘನಮಠದಯ್ಯ ಸಾಲಿಮಠ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾರ್ಯಕಾರಿ ಸಮಿತಿಯಲ್ಲಿ ಸಮ್ಮೇಳನದ ಅಧ್ಯಕ್ಷರ ಆಯ್ಕೆಗಾಗಿ 8 ಜನರ ಹೆಸರುಗಳು ಪ್ರಸ್ತಾಪವಾದವು. ಅವುಗಳನ್ನು ಚರ್ಚಿಸಿ ಬಳಗಾನೂರಿನ ವೇ.ಮೂ. ಶರಭಯ್ಯ ಸ್ವಾಮಿ ಗಣಚಾರ ಅವರನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷರು ಪ್ರಕಟಿಸಿದರು.
ಇದು ಮಸ್ಕಿಯಲ್ಲಿ ಹಮ್ಮಿಕೊಳ್ಳುತ್ತಿರುವ ಮೊದಲ ಸಾಹಿತ್ಯ ಸಮ್ಮೇಳನವಾಗಿದ್ದರಿಂದ ಎಲ್ಲರೂ ಕೈ ಜೋಡಿಸಬೇಕು. ಇದು ಮಸ್ಕಿಯ ಹಿರಿಮೆಯೂ ಆಗಿದ್ದು, ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನುಡಿ ತೇರು ಎಳೆಯಲು ಸಹಕಾರ ನೀಡಬೇಕು ಎಂದು ಕೋರಿದರು. ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಮಸ್ಕಿ, ಸಾಹಿತಿ ಗುಂಡುರಾವ್ ದೇಸಾಯಿ, ಲಾಂಚನ ತಯಾರಿಸಿದ ಕಲಾವಿದ ಸುಗೂರಯ್ಯ ಹಿರೇಮಠ, ಕಸಾಪ ಪದಾ ಧಿಕಾರಿಗಳಾದ ರಂಗಯ್ಯ ಶಟ್ಟಿ, ಅಮರೇಶ ಬ್ಯಾಳಿ, ಹನುಮಂತ ನಾಯಕ, ಮಲ್ಲಿಕಾರ್ಜುನ, ಶ್ರೀಧರ ಬಳ್ಳೋಳ್ಳಿ ಇದ್ದರು.
ಇದನ್ನೂ ಓದಿ:15 ಕೋ.ರೂ. ವೆಚ್ಚದ ಧರ್ಮಸ್ಥಳ ಚತುಷ್ಪಥ ರಸ್ತೆ ಲೋಕಾರ್ಪಣೆಗೊಳಿಸಿದ ಡಿಸಿಎಂ ಕಾರಜೋಳ
ಲಾಂಛನ ಬಿಡುಗಡೆ
ಮಸ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಚನವನ್ನು ಕಸಾಪ ಗೌರವ ಅಧ್ಯಕ್ಷರು ಹಾಗೂ ಗಚ್ಚಿನ ಹಿರೇಮಠದ ಪೀಠಾ ಧಿಪತಿ ರುದ್ರಮುನಿ ಶಿವಾಚಾರ್ಯರು ಶನಿವಾರ ಬಿಡುಗಡೆ ಮಾಡಿದರು. ತಾಯಿ ಭುವನೇಶ್ವರಿ ಭಾವಚಿತ್ರದ ಜತೆಗೆ ತಾಲೂಕಿನ ಕೃಷಿಜ್ಞಾನ ಪ್ರದೀಪಿಕೆ ರಚಿಸಿದ ಸಂತೆಕೆಲ್ಲೂರಿನ ಘನಮಠ ಶಿವಯೋಗಿ, ಪ್ರಖ್ಯಾತ ಮಸ್ಕಿ ಮಲ್ಲಿಕಾರ್ಜುನ ದೇವರ ರಥ, ಕೋಮು ಸೌಹಾರ್ದದ ಸಂಕೇತ ಹಸಮಕಲ್ಲಿನ ಖಾನ್ ಸಾಹೇಬ ದರ್ಗಾ, ಅಶೋಕನ ಶಾಸನ, ಮೂರು ಮುಖದ ಹಂಸಪಕ್ಷಿ, ಮಸ್ಕಿ ಜಲಾಶಯ, ಭತದ ಗದ್ದೆಯ ಚಿತ್ರಗಳನ್ನೊಳಗೊಂಡ ಲಾಂಚನ ಗಮನ ಸೆಳೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ