ಸಂವಿಧಾನ ನೀಡಿರುವ ಶ್ರೇಷ್ಠ ಹಕ್ಕು ಮತದಾನ
2011ರ ಜ.25ರಿಂದ ದೇಶದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ.
Team Udayavani, Jan 26, 2021, 6:27 PM IST
ರಾಯಚೂರು: ಭಾರತ ಸಂವಿಧಾನ ದೇಶದ ಪ್ರಜೆಗಳಿಗೆ ನೀಡಿರುವ ಶ್ರೇಷ್ಠ ಹಕ್ಕುಗಳಲ್ಲಿ ಮತದಾನವೂ ಒಂದು. ಅದನ್ನು ನಿರ್ಭೀತಿ, ನಿಷ್ಪಕ್ಷಪಾತವಾಗಿ ಚಲಾಯಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶರಾದ ಮಲ್ಲಿಕಾರ್ಜುನ ಗೌಡ ಹೇಳಿದರು. ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಎಲ್ಲರೂ ತಪ್ಪದೇ ತಮ್ಮ ಹಕ್ಕು ಚಲಾಯಿಸಬೇಕು. ಅದಕ್ಕಾಗಿ 18 ವರ್ಷ ತುಂಬಿದ ಯುವಕರು ಮತದಾರರ ಪಟ್ಟಿಯಲ್ಲಿ ತಪ್ಪದೇ ಹೆಸರು ನೋಂದಾಯಿಸಬೇಕು. 2011ರ ಜ.25ರಿಂದ ದೇಶದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ. ಮತದಾನದ ದಿನದಂದು ರಜೆ ಇದ್ದಾಗ್ಯೂ ಮತದಾನದಿಂದ ಹಿಂದೆ ಸರಿಯುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಡಿಸಿ ಆರ್. ವೆಂಕಟೇಶ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಚುನಾವಣೆಗಳಲ್ಲಿ ಶೇಕಡಾವಾರು ಪ್ರಮಾಣದಲ್ಲಿ ಮತದಾನ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ತಪ್ಪದೇ ಮತದಾನದ ಹಬ್ಬದಲ್ಲಿ ಪಾಲ್ಗೊಳ್ಳಬೇಕು. ಆಗಲೇ ಸಮರ್ಥ ನಾಯಕರು ಹೊರಬರಲು ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಚುನಾವಣೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಅಧಿ ಕಾರಿಗಳನ್ನು ಸನ್ಮಾನಿಸಲಾಯಿತು. ಈ ವೇಳೆ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಎಡಿಸಿ ದುರಗೇಶ, ಎಸಿ ಸಂತೋಷ ಕಾಮಗೌಡ, ತಹಶೀಲ್ದಾರ್ ಡಾ| ಹಂಪಣ್ಣ ಸಜ್ಜನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’
MUST WATCH
ಹೊಸ ಸೇರ್ಪಡೆ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ