ಬಿಳಿ ಬಂಗಾರ ನಂಬಿದ ರೈತರ ನಿರೀಕ್ಷೆ ಹುಸಿ; ಸಣ್ಣ ರೈತರು ಹೈರಾಣು

ಹೇಳಿ ಕೇಳಿ ವಾಣಿಜ್ಯ ಬೆಳೆಯಾಗಿರುವ ಹತ್ತಿ ಬೆಳೆದ ರೈತರ ಪಾಡು ಹೇಳತೀರದಾಗಿದೆ.

Team Udayavani, Nov 25, 2022, 10:23 AM IST

ಬಿಳಿ ಬಂಗಾರ ನಂಬಿದ ರೈತರ ನಿರೀಕ್ಷೆ ಹುಸಿ; ಸಣ್ಣ ರೈತರು ಹೈರಾಣು

ರಾಯಚೂರು: ಕೃಷಿ ಉತ್ಪನ್ನಗಳ ಬೆಲೆ ಕೂಡ ಷೇರು ಮಾರುಕಟ್ಟೆಗಿಂತ ಚಂಚಲವಾಗಿದೆ. ಕಳೆದ ಬಾರಿ ಬಂಪರ್‌ ಬೆಲೆಗೆ ಮಾರಾಟವಾಗಿದ್ದ ಹತ್ತಿಗೆ ಈ ಬಾರಿ ನಿರೀಕ್ಷಿತ ಬೆಲೆ ಸಿಗುತ್ತಿಲ್ಲ. ಮೊದಲ ಹಂತದ ಹತ್ತಿ ಮಾರುಕಟ್ಟೆ ಸೇರಿದ್ದು, ಈವರೆಗೂ 10 ಸಾವಿರ ರೂ. ಗಡಿ ದಾಟದಿರುವುದು ರೈತರಿಗೆ ನಿರಾಸೆ ಮೂಡಿಸಿದೆ.

ಒಂದೆರಡು ವರ್ಷಗಳ ಹಿಂದೆ ಈರುಳ್ಳಿ ವಿಚಾರದಲ್ಲಿ ಸೃಷ್ಟಿಯಾಗಿದ್ದ ಪರಿಸ್ಥಿತಿ ಈ ಬಾರಿ ಹತ್ತಿಗೆ ಬಂದೊದಗಿದೆ. ಅತಿವೃಷ್ಟಿಯಿಂದ ಸರಿಯಾದ ಇಳುವರಿ ಬಾರದಿದ್ದ ಕಾರಣಕ್ಕೆ ಈರುಳ್ಳಿ ಕ್ವಿಂಟಲ್‌ಗೆ 17 ಸಾವಿರ ರೂ.ಗೆ ಮಾರಾಟವಾಗಿತ್ತು. ಬರುವ ವರ್ಷ ಇದೇ ಉತ್ಸಾಹದಲ್ಲಿ ಈರುಳ್ಳಿ ಬೆಳೆದ ರೈತ ಬೆಲೆ ಸಿಗದೆ ನಷ್ಟ ಅನುಭವಿಸಿದ್ದ. ಈ ಬಾರಿ ಹತ್ತಿಗೂ ಅಂಥದ್ದೇ ಸನ್ನಿವೇಶ ಇದೆ. ಕಳೆದ ಬಾರಿ 14-15 ಸಾವಿರ ರೂ.ಗೆ ಕ್ವಿಂಟಲ್‌ ಮಾರಾಟವಾಗಿದ್ದ ಹತ್ತಿ ಈ ಬಾರಿ 8-9 ಸಾವಿರ ರೂ. ಆಸುಪಾಸು ಮಾರಾಟವಾಗುತ್ತಿದೆ. ಗುರುವಾರ ಮಾರುಕಟ್ಟೆಯಲ್ಲಿ ಕನಿಷ್ಟ ದರ 8500 ನಿಗದಿಯಾಗಿದ್ದರೆ, ಗರಿಷ್ಠ ದರ 9400 ರೂ. ಇತ್ತು. ಮಾದರಿ ಬೆಲೆ 9 ಸಾವಿರ ಇತ್ತು.

ಈ ಬಾರಿ ಹತ್ತಿ ಬೆಳೆಯುವ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು, ರೈತರು ಖರ್ಚು ಕೂಡ ಹೆಚ್ಚು ಮಾಡಿದ್ದರು. ಈ ಬಾರಿಯೂ ಕಳೆದ ಬಾರಿಯಂತೆ ಉತ್ತಮ ಬೆಲೆ ಸಿಗಬಹುದು ಎಂಬ ಲೆಕ್ಕಾಚಾರವಿತ್ತು. ಆದರೆ, ಈಗಿರುವ ಮಾರುಕಟ್ಟೆ ಪರಿಸ್ಥಿತಿ ನೋಡಿದರೆ ದರದಲ್ಲಿ ಭಾರೀ ವ್ಯತ್ಯಾಸ ಕಂಡು ಬರುವ ಸಾಧ್ಯತೆ ಕಡಿಮೆ ಎನ್ನುತ್ತಾರೆ ವರ್ತಕರು.

ಇಳುವರಿಯೂ ಕುಸಿತ: ಈ ಬಾರಿ ಅತಿವೃಷ್ಟಿಗೆ ಸಿಲುಕಿ ಹತ್ತಿ ಇಳುವರಿ ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ಎಕರೆಗೆ 8-10 ಕ್ವಿಂಟಲ್‌ ಇಳುವರಿ ಬರ ಬೇಕಿದ್ದು, ಈಗ 4-5 ಬಂದರೆ ಕಷ್ಟ ಎನ್ನುವಂ ತಾಗಿದೆ. ಆದರೆ, ಬಿತ್ತನೆ ಬೀಜದಿಂದ ಹಿಡಿದು, ಗೊಬ್ಬರ, ಕ್ರಿಮಿನಾಶಕ, ಕಳೆ ಕೀಳುವುದು, ಹತ್ತಿ ಬಿಡಿಸುವವರೆಗೆ ಪ್ರತಿ ಹೆಜ್ಜೆ ರೈತ ಸಾವಿರಾರು ಖರ್ಚು ಮಾಡಿಕೊಂಡಿದ್ದಾನೆ. ಎಕರೆಗೆ ಏನಿಲ್ಲವೆಂ ದರು 30-40 ಸಾವಿರ ರೂ. ಖರ್ಚು ಮಾಡಲಾಗಿದೆ.

ಖರೀದಿ ಕೇಂದ್ರ ಆರಂಭಿಸಲಿ: ಕಳೆದ ಬಾರಿ ಜಿಲ್ಲೆಯಲ್ಲಿ 1.40 ಲಕ್ಷ ಹೆಕ್ಟೇರ್‌ ಹತ್ತಿ ಬಿತ್ತನೆ ಮಾಡಿದ್ದ ರೈತರು, ಈ ಬಾರಿ 2 ಲಕ್ಷ ಹೆಕ್ಟೇರ್‌ಗಿಂತ ಹೆಚ್ಚು ಬಿತ್ತನೆ ಮಾಡಿದ್ದಾರೆ. ಆದರೆ, ಸತತ ಮಳೆಯಿಂದ ಹತ್ತಿ ಕಾಂಡ ಕೊಳೆತು ಇಳುವರಿ ಬರಲಿಲ್ಲ. ಆದರೂ ದರ ಹೋಲಿಕೆ ಮಾಡಿದರೆ ಕಳೆದ ಬಾರಿಗಿಂತ ಅತಿ ಕಡಿಮೆ ದರ ಸಿಗುತ್ತಿದೆ.ಈಗ ಅರ್ಧದಷ್ಟು ರೈತರು ಹತ್ತಿ ಮಾರಾಟ ಮಾಡಿದ್ದು, ಇನ್ನೂ ಕೆಲವೆಡೆ ಈಗ ಬಿಡಿಸಲು ಆರಂಭಿಸಲಾಗಿದೆ. ಹೀಗಾಗಿ ಸರ್ಕಾರವೇ ಖರೀದಿ
ಕೇಂದ್ರಗಳನ್ನು ಆರಂಭಿಸಿ 12-15 ಸಾವಿರ ರೂ. ದರ ನಿಗದಿ ಮಾಡಲಿ ಎಂಬುದು ರೈತರ ಒತ್ತಾಯವಾಗಿದೆ.

ಸಣ್ಣ ರೈತರು ಹೈರಾಣು
ಹೇಳಿ ಕೇಳಿ ವಾಣಿಜ್ಯ ಬೆಳೆಯಾಗಿರುವ ಹತ್ತಿ ಬೆಳೆದ ರೈತರ ಪಾಡು ಹೇಳತೀರದಾಗಿದೆ. ಹೆಜ್ಜೆ ಹೆಜ್ಜೆಗೂ ಖರ್ಚು ಮಾಡಬೇಕಿರುವ ಕಾರಣ ಸಣ್ಣ ರೈತರು ಹೈರಾಣವಾಗಿದ್ದಾರೆ. ಕನಿಷ್ಟ ನಾಲ್ಕೈದು ಬಾರಿ ಕ್ರಿಮಿನಾಶಕ ಸಿಂಪರಣೆ ಮಾಡಿದ್ದಾರೆ. ಈ ಬಾರಿ ಸತತ ಮಳೆಯಿಂದಾಗಿ ಸಿಂಪರಣೆ ಮಾಡಿದ್ದ ಕ್ರಿಮಿನಾಶಕವೆಲ್ಲ ತೊಳೆದು ಹೋಗಿದ್ದು, ಮತ್ತೂಮ್ಮೆ ಹೆಚ್ಚುವರಿಯಾಗಿ ಮಾಡಬೇಕಾಯಿತು. ಇನ್ನೂ ಕೂಲಿಕಾರ್ಮಿಕರು ಸಿಗದ ಕಾರಣಕ್ಕೆ ಆಂಧ್ರ, ತೆಲಂಗಾಣದಿಂದ ಕಾರ್ಮಿಕರನ್ನು ಕರೆದುಕೊಂಡು ಬಂದಿದ್ದಾರೆ. ಅವರಿಗೆ ಇರಲು ತಾತ್ಕಾಲಿಕ ಶೆಡ್‌ಗಳನ್ನು ಹಾಕಿ ಕೊಟ್ಟಿದ್ದಾರೆ. ಊಟ, ವಸತಿ ಜತೆಗೆ ಚಿಕಿತ್ಸೆ ಕೂಡ ನೀಡಬೇಕಿದೆ.

ಸಾಮಾನ್ಯವಾಗಿ ದರ ಹೆಚ್ಚಾಗಬೇಕು. ಆದರೆ, ಈವರೆಗೂ 10 ಸಾವಿರ ರೂ. ಗಡಿ ದಾಟಿಲ್ಲ. ಮಧ್ಯವರ್ತಿಗಳು ಏನೋ ಗೋಲ್‌ಮಾಲ್‌ ಮಾಡುತ್ತಿರುವ ಶಂಕೆ ಇದೆ. ಈಗಾಗಲೇ ಬಹುತೇಕ ರೈತರು ಮೊದಲ ಹಂತದ ಹತ್ತಿ ಮಾರಾಟ ಮಾಡಿದ್ದಾರೆ. ಸರ್ಕಾರ ಕೂಡಲೇ ಹತ್ತಿ ಖರೀದಿಗೆ ಕೇಂದ್ರಗಳನ್ನು ಆರಂಭಿಸಿ ಕ್ವಿಂಟಲ್‌ಗೆ 12-15 ರೂ. ದರ ನಿಗದಿ ಮಾಡಿ ಖರೀದಿಸಲು ಮುಂದಾದರೆ ಮುಕ್ತ ಮಾರುಕಟ್ಟೆಯಲ್ಲಿಯೂ ದರ ಹೆಚ್ಚಾಗುವ ಸಾಧ್ಯತೆಗಳಿವೆ.
ಲಕ್ಷ್ಮಣಗೌಡ ಕಡಗಂದೊಡ್ಡಿ,
ರೈತ ಸಂಘದ ಮುಖಂಡ

*ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.