ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅಮೂಲ್ಯ


Team Udayavani, Feb 4, 2019, 10:43 AM IST

ray-1.jpg

ಸಿಂಧನೂರು: ನಾಡಿನ ಅನೇಕ ಮಠ, ಮಂದಿರಗಳಲ್ಲಿ ಇಂದಿಗೂ ಶಿಲ್ಪ ಕಲೆಗಳು ಉಳಿದಿರುವುದಕ್ಕೆ ಹಾಗೂ ನಾಡಿನ ಸಂಸ್ಕೃತಿ ಬೆಳೆಯುವುದಕ್ಕೆ ಅಮರಶಿಲ್ಪಿ ಜಕಣಾಚಾರಿ ಮೂಲ ಕಾರಣಕರ್ತರಾಗಿದ್ದಾರೆ. ಕಲೆ-ಸಂಸ್ಕೃತಿಗೆ ಅವರ ಕೊಡುಗೆ ಅಪಾರವಾಗಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು

ಜಿಲ್ಲಾ ವಿಶ್ವಕರ್ಮ ಸಮಾಜದಿಂದ ನಗರದ ಕನಕ ಸಮುದಾಯ ಮಂಗಲ ಭವನದಲ್ಲಿ ರವಿವಾರ ನಡೆದ ಜಿಲ್ಲಾಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಹಾಗೂ ಶಿಲ್ಪಿಗಳಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಾದಾಮಿ, ಐಹೊಳೆ ಇನ್ನಿತರ ಪ್ರಸಿದ್ಧ ಸ್ಥಳಗಳಲ್ಲಿನ ಶಿಲ್ಪಕಲೆಗಳು ಪ್ರವಾಸಿಗರನ್ನು ಸೆಳೆಯುತ್ತಿವೆ. ಬಹುತೇಕ ಐತಿಹಾಸಿಕ ದೇವಾಲಯಗಳಲ್ಲಿನ ಕಲಾಕೃತಿಗಳ ಕರ್ತೃ ಅಮರಶಿಲ್ಪಿ ಜಕಣಾಚಾರಿ ಎಂಬುದು ವಿಶೇಷ ಎಂದರು.

ವಿಶ್ವಕರ್ಮ ಸಮಾಜ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ವೃತ್ತಿಯ ಜತೆಗೆ ಇತರೆ ಕಲೆಗಳಲ್ಲೂ ಸಮಾಜ ಮುಂದೆ ಬರಬೇಕು. ಯುವಜನತೆ ಉನ್ನತ ಶಿಕ್ಷಣ ಪಡೆದು ವಿವಿಧ ಇಲಾಖೆಗಳ ಅಧಿಕಾರಿಗಳಾಗಿ ಸಮಾಜದ ಕೀರ್ತಿ ಹೆಚ್ಚಿಸಬೇಕು ಎಂದ ಅವರು, ನಗರದಲ್ಲಿ ಸಮಾಜದ ಜಾಗೆ ಇದ್ದರೆ ವಿಶ್ವಕರ್ಮ ಭವನ ನಿರ್ಮಿಸಿಕೊಡಲು ಸಿದ್ಧ. ಮನವಿ ಸಲ್ಲಿಸಿದರೆ ಅನುದಾನ ಬಿಡುಗಡೆ ಮಾಡುವೆ ಎಂದು ಭರವಸೆ ನೀಡಿದರು.

ವಿಶ್ವಕರ್ಮ ಸಮಾಜ ರಾಜ್ಯಾಧ್ಯಕ್ಷ‌ ಈಶ್ವರ ಹೊಸಕೋಟಿ ಮಾತನಾಡಿ, ವಿಶ್ವಕರ್ಮರು ಪಂಚ ವೃತ್ತಿ ಕುಲ ಕಸುಬುಗಳಿಂದ ಪ್ರಪಂಚದ ಪಂಚಭೂತಗಳ ಕಾರಣಿಕರ್ತರು ಆಗಿದ್ದಾರೆ. ವೇದ ಉಪನಿಷತ್ತುಗಳಲ್ಲಿ ದೇವಾನುದೇವತೆಗಳ ಸೃಷ್ಟಿಕರ್ತ, ನಿರ್ಮಾಪನಾಗಿ ವಿರಾಟ ಪುರುಷನೆಂದು ಖ್ಯಾತಿಯಾದ ಭಗವಂತನೇ ವಿಶ್ವಕರ್ಮರು ಎಂದರು.

ಶಿಲ್ಪ ಕಲಾಕೃತಿಗಳಿಂದ ಸಿರಿತನ ಪಡೆದ ಬೇಲೂರು, ಹಳೆಬೀಡು, ಬಾದಾಮಿ, ಪಟ್ಟದಕಲ್ಲು, ಐಹೊಳಿ, ಹಂಪಿಯಲ್ಲಿ ಶಿಲ್ಪಕಲೆಗಳ ಚಿತ್ರಣವನ್ನು ಸವಿಯಲು ದೇಶ, ವಿದೇಶದ ಪ್ರವಾಸಿಗರು ಆಗಮಿಸುತ್ತಾರೆ. ಇದು ನಮ್ಮ ಸಮಾಜದ ಹಿರಿಯರ ಕಲಾವೈಭವಕ್ಕೆ ಸಾಕ್ಷಿಯಾಗಿದೆ ಎಂದರು.

ಮಾಜಿ ಸಂಸದ ಕೆ. ವಿರೂಪಾಕ್ಷ‌ಪ್ಪ ಮಾತನಾಡಿ, ಹಿಂದುಳಿದ ಸಮುದಾಯಗಳಿಗೆ ಸರಕಾರದ ಸಹಾಯ ಹಸ್ತ ಅವಶ್ಯಕವಾಗಿದೆ. ಸಮುದಾಯ ಮುಂದಿನ ಗುರಿ ಇರಿಸಿಕೊಂಡು ಸಾಗಿದಾಗ ಮಾತ್ರ ಎತ್ತರವಾಗಿ ಬೆಳೆಯಲು ಸಾಧ್ಯ ಎಂದರು.

ವಿಶ್ವಕರ್ಮ ಸಮುದಾಯದ ಸ್ವಾಮೀಜಿ ದೇವದುರ್ಗ ಸಂಸ್ಕೃತಿ ಸಂಸ್ಥಾನ ಪೀಠದ ಮೌನೇಶ್ವರ ಸ್ವಾಮೀಜಿ, ಅಜೇಂದ್ರ ಸ್ವಾಮೀಜಿ, ಯಾದಗಿರಿಯ ಶ್ರೀನಿವಾಸ ಸ್ವಾಮೀಜಿ, ತುಮಕೂರಿನ ನೀಲಕಂಠಾಚಾರ್ಯ ಸ್ವಾಮೀಜಿ, ಗುಲ್ಬರ್ಗದ ದುಡ್ಡಂದ್ರೆ ಸ್ವಾಮೀಜಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಸಮಾಜದ ಹಿರಿಯ ಮುಖಂಡ ಶ್ರೀಶೈಲ ಪತ್ತಾರ, ನಿರುಪಾದೆಪ್ಪ ಗುಡಿಹಾಳ ಮಾತನಾಡಿದರು

ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಕೆಪಿಸಿಸಿ ಕಾರ್ಯದರ್ಶಿ ಕೆ. ಕರಿಯಪ್ಪ, ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ‌ ಬಸನಗೌಡ ಬಾದರ್ಲಿ, ರಾಯಚೂರು ವಿಶ್ವಕರ್ಮ ಸಮಾಜ ಜಿÇ್ಲಾಧ್ಯಕ್ಷ‌ ಗುರು ವಿಶ್ವಕರ್ಮ, ವಿಶ್ವಕರ್ಮ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ‌ ಕಾಳಾಚಾರ ವಿಶ್ವಕರ್ಮ, ಸಿ. ಪಂಚಾಳ ವಿಶ್ವಕರ್ಮ, ಸಮಾಜದ ತಾಲೂಕು ಅಧ್ಯಕ್ಷ‌ ವೀರಭದ್ರಪ್ಪ ವಿಶ್ವಕರ್ಮ ಹಂಚಿನಾಳ, ಗೌರವಾಧ್ಯಕ್ಷ‌ ವೀರೇಶ ದೇವರಗುಡಿ, ಜಿÇ್ಲಾ ಸದಸ್ಯ ಸೋಮಣ್ಣ ಸುಕಾಲಪೇಟೆ, ಯುವ ಘಟಕ ಅಧ್ಯಕ್ಷ‌ ನಾಗರಾಜ, ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್‌ ಅಧ್ಯಕ್ಷ‌ ಗಣೇಶ ಸೇರಿ ವಿವಿಧ ತಾಲೂಕು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಶ್ವಕರ್ಮ ಸಮುದಾಯದ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.