ಕಸ್ತೂರಬಾ ಗಾಂಧಿ ವಸತಿ ಶಾಲೆ ಅವ್ಯವಸ್ಥೆ


Team Udayavani, Mar 3, 2020, 2:07 PM IST

rc-tdy-1

ದೇವದುರ್ಗ: ತಾಲೂಕಿನ ಆಲ್ಕೋಡ್‌ ಗ್ರಾಮದಲ್ಲಿರುವ ಕಸ್ತೂರಬಾ ಗಾಂಧಿ  ವಸತಿ ಶಾಲೆಯಲ್ಲಿ ಕಾಯಂ ಮುಖ್ಯ ಶಿಕ್ಷಕರ ಕೊರತೆ ಇದೆ. ಇನ್ನು ಶಾಲೆ ಕಟ್ಟಡ ಸುತ್ತ ಜಾಲಿಗಿಡಗಳು, ತಿಪ್ಪೆಗುಂಡಿ ಇದ್ದು, ಮಕ್ಕಳು ವಿಷಜಂತುಗಳ ಭಯದಲ್ಲೇ ಪಾಠ ಕೇಳಬೇಕಿದೆ.

ದಿ| ಶಾಸಕ ಎ. ವೆಂಕಟೇಶ ನಾಯಕ ಅವಧಿಯಲ್ಲಿ 2005ರಲ್ಲಿ ಆಲ್ಕೋಡ್‌ ಗ್ರಾಮಕ್ಕೆ ಕಸ್ತೂರಬಾ ಗಾಂಧಿ ವಸತಿ ಶಾಲೆ ಮಂಜೂರಾಗಿತ್ತು. ಆದರೆ ಆಲ್ಕೋಡ್‌ ಗ್ರಾಮದಲ್ಲಿ ಕಟ್ಟಡ ಸೌಲಭ್ಯ ಇಲ್ಲದ್ದರಿಂದ ತಾತ್ಕಾಲಿಕವಾಗಿ ದೇವದುರ್ಗ ಪಟ್ಟಣದ ಕರ್ನಾಟಕ ಪಬ್ಲಿಕ್‌ ಸರಕಾರಿ ಶಾಲೆಯಲ್ಲಿ ಆರಂಭಿಸಲಾಗಿತ್ತು. ಆಲ್ಕೋಡ್‌ ಗ್ರಾಮದಲ್ಲಿ ಸ್ವಂತ ಕಟ್ಟಡ ನಿರ್ಮಿಸಿದ ನಂತರ ಅಲ್ಲಿಗೆ ಕಸ್ತೂರಬಾ ಗಾಂಧಿ ವಸತಿ ಶಾಲೆ ಸ್ಥಳಾಂತರವಾಗಿ ಸುಮಾರು ವರ್ಷಗಳೇ ಗತಿಸಿದೆ.

ಕಾಯಂ ಮುಖ್ಯ ಶಿಕ್ಷಕರಿಲ್ಲ: ಶಾಲೆಯಲ್ಲಿ ಕಾಯಂ ಮುಖ್ಯ ಶಿಕ್ಷಕರಿಲ್ಲ. ಸರ್ಕಾರಿ ಶಾಲೆಯ ಶಿಕ್ಷಕರನ್ನೇ ಪ್ರಭಾರಿಯಾಗಿ ನೇಮಿಸಲಾಗಿದೆ. ಈ ಹಿಂದೆ ಪಿಲಿಗುಂಡ ಶಾಲೆ ಮುಖ್ಯ ಶಿಕ್ಷಕಿ ವಸತಿ ಶಾಲೆ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಜ.2ರಂದು ಶಿಕ್ಷಕಿ ಲೀಲಾವತಿ ಅವರಿಗೆ ಚಾರ್ಜ್‌ ನೀಡಲಾಗಿದೆ. ಕಾಯಂ ಶಿಕ್ಷಕಿ ಸುರೇಖಾ ಹೆರಿಗೆ ರಜೆಯಲ್ಲಿ ತೆರಳಿದ್ದಾರೆ. ಹಣಕಾಸು ವ್ಯವಹಾರದಲ್ಲಿ ಕಾಯಂ ಶಿಕ್ಷಕಿ, ಮುಖ್ಯ ಶಿಕ್ಷಕಿ ಜಂಟಿ ಬ್ಯಾಂಕ್‌ ಖಾತೆ ತೆಗೆಯಬೇಕಾಗಿದೆ. ರಜೆಯಲ್ಲಿರುವ ಕಾರಣ ಹಣಕಾಸು ವ್ಯವಹಾರ ನಿರ್ವಹಣೆಗೆ ಸಮಸ್ಯೆ ಆಗುತ್ತಿದೆ. ಅಲ್ಲದೇ ಕಾಯಂ ಶಿಕ್ಷಕರ ಕೊರತೆಯಿಂದ ಮಕ್ಕಳ ಕಲಿಕೆಗೆ ಹಿನ್ನಡೆ ಆಗುತ್ತಿದೆ.

ಏಜೆನ್ಸಿ ಮೂಲಕ ನೇಮಕ: ಏಜೆನ್ಸಿ ಮೂಲಕ ವಸತಿ ಮೇಲ್ವಿಚಾರಕಿ, ಕಂಪ್ಯೂಟರ್‌, ಹಿಂದಿ, ದೈಹಿಕ ಶಿಕ್ಷಕರು ಸೇರಿ ಐದು ಜನರನ್ನು ನೇಮಿಸಲಾಗಿದೆ. ಏಜೆನ್ಸಿಯಿಂದಲೇ ಶಿಕ್ಷಕರಿಗೆ ವೇತನ ಪಾವತಿ ಮಾಡಲಾಗುತ್ತಿದೆ.

ಕೋಣೆಗಳ ಸಮಸ್ಯೆ: ಆಲ್ಕೋಡ್‌ ಗ್ರಾಮದಲ್ಲಿರುವ ಕಸ್ತೂರಬಾ ಗಾಂ ಧಿ ವಸತಿ ಶಾಲೆಯಲ್ಲಿ 6ರಿಂದ 8ನೇ ತರಗತಿವರೆಗೆ ನೂರು ವಿದ್ಯಾರ್ಥಿಗಳಿದ್ದು, ಎರಡೇ ಕೋಣೆಗಳಿವೆ. ಈ ಕೋಣೆಯಲ್ಲಿ ಊಟ, ನಿದ್ರೆ ಮಾಡಬೇಕಿದೆ. ಇಕ್ಕಟ್ಟಿನ ಜಾಗೆಯಲ್ಲಿ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ಇನ್ನು ಶಾಲೆಯಲ್ಲಿನ ಶುದ್ಧ ಕುಡಿಯವ ನೀರಿನ ಯಂತ್ರ ದುರಸ್ತಿಯಲ್ಲಿರುವ ಕಾರಣ ಅಶುದ್ಧ ನೀರನ್ನೇ ಮಕ್ಕಳು ಸೇವಿಸಬೇಕಿದೆ.

ಏಜೆನ್ಸಿ ಮೂಲಕ ಆಹಾರ: ಕಸ್ತೂರಬಾ ಗಾಂಧಿ ವಸತಿ ಶಾಲೆಯ ಒಬ್ಬ ವಿದ್ಯಾರ್ಥಿ ಊಟ ಇತರೆ ವೆಚ್ಚಕ್ಕೆ ತಿಂಗಳಿಗೆ 1500 ರೂ. ನಿಗದಿ ಮಾಡಲಾಗಿದೆ. ಕನಕಗಿರಿ ಏಜೆನ್ಸಿಯವರು ಏಜೆನ್ಸಿಯವರು ಅಕ್ಕಿ, ಬೇಳೆ, ತರಕಾರಿ, ಎಣ್ಣೆ, ಮೊಟ್ಟೆ, ಚಿಕನ್‌ ಸೇರಿ ಆಹಾರ ಪದಾರ್ಥ ಪೂರೈಸುತ್ತಾರೆ. ತಿಂಗಳಿಗೆ 1.50 ಲಕ್ಷ ವೆಚ್ಚ ಭರಿಸಲಾಗುತ್ತಿದೆ. ವಸತಿ ಶಾಲೆಯಿಂದಲೇ ಒಬ್ಬ ವಿದ್ಯಾರ್ಥಿಗೆ ತಿಂಗಳ 200 ರೂ. ಶಿಷ್ಯವೇತನ ನೀಡಲಾಗುತ್ತಿದೆ. ನವೆಂಬರ್‌ ತಿಂಗಳಿಂದ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗಿಲ್ಲ ಎನ್ನಲಾಗಿದೆ.

ಶಾಲೆಯಲ್ಲಿನ ಶೌಚಾಲಯಗಳ ಬಾಗಿಲು ಕಿತ್ತು ಹೋಗಿವೆ. ಶಾಲೆ ಕಟ್ಟಡ ಸುತ್ತ ಆವರಣ ಗೋಡೆ ಇಲ್ಲ. ಜಾಲಿಗಿಡಗಳು, ತಿಪ್ಪೆಗುಂಡಿಗಳು ಇರುವುದರಿಂದ ರಾತ್ರಿ ಆಗುತ್ತಿದ್ದಂತೆ ವಿದ್ಯಾರ್ಥಿಗಳು ಹೊರಬರಲು ಭಯಪಡುವಂತಾಗಿದೆ. ಆದ್ದರಿಂದ ಶಾಲೆಯಲ್ಲಿನ ಅವ್ಯವಸ್ಥೆ ಸರಿಪಡಿಸಬೇಕೆಂದು ಎಸ್‌ಎಫ್‌ಐ ಮುಖಂಡ ಶಬ್ಬೀರ ಜಾಲಹಳ್ಳಿ ಆಗ್ರಹಿಸಿದ್ದಾರೆ.

ಕಾಯಂ ಶಿಕ್ಷಕಿ ಹೆರಿಗೆ ರಜೆಯಲ್ಲಿರುವ ಕಾರಣ ಬೇರೆ ಶಾಲೆಯಿಂದ ಎರವಲು ಶಿಕ್ಷಕಿಯನ್ನು ನಿಯೋಜನೆ ಅಥವಾ ಎಸ್‌ ಡಿಎಂಸಿ ರಚನೆ ಮಾಡಿ ಜಂಟಿ ಬ್ಯಾಂಕ್‌ ಖಾತೆ ತೆಗೆಯುವಂತೆ ಸೂಚನೆ ನೀಡಿದ್ದೇನೆ. ಸಮಸ್ಯೆ ಕುರಿತು ಗಮನಕ್ಕೆ ಬಂದಿದೆ. ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ.-ಆರ್‌.ಇಂದಿರಾ, ಕ್ಷೇತ್ರ ಶಿಕ್ಷಣಾಧಿಕಾರಿ

 

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.