ಪರಭಾಷಿಕರು ಕನ್ನಡ ಕಲಿತರೆ ಭಾಷೆ ಉಳಿವು


Team Udayavani, Mar 4, 2018, 4:09 PM IST

ray-3.jpg

ರಾಯಚೂರು: ಬೇರೆ ರಾಜ್ಯಗಳಿಂದ ಬಂದು ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬರು ಕನ್ನಡ ಕಲಿತಾಗ ಮಾತ್ರ ಕನ್ನಡ ಭಾಷೆ ಬೆಳೆಯಲು ಸಾಧ್ಯ ಎಂದು ನಾಲ್ಕನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಆಂಜನೇಯ ಜಾಲಿಬೆಂಚಿ ಅಭಿಪ್ರಾಯಪಟ್ಟರು.

ತಾಲೂಕಿನ ಮಟಮಾರಿಯ ಮಹಾಂತೇಶ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಪಂಚದಲ್ಲಿ ನಾಲ್ಕು ಸಾವಿರ ಭಾಷೆಗಳಿದ್ದು, ಅದರಲ್ಲಿ ಕನ್ನಡವೂ ಒಂದು. ಅದನ್ನು ನಮ್ಮ ಹಿರಿಯರು ಕಸ್ತೂರಿ ಎಂದು ಬಣ್ಣಿಸಿದ್ದಾರೆ ಆದರೆ, ಬೇರೆ ಬೇರೆ ರಾಜ್ಯಗಳಿಂದ ಸಾಕಷ್ಟು ಜನ ರಾಜ್ಯಕ್ಕೆ ಉದ್ಯೋಗವರಸಿ ಬರುತ್ತಾರೆ. ಬರುವವರಿಗೆ ಯಾವುದೇ ಆಕ್ಷೇಪವಿಲ್ಲ. ಅದಕ್ಕೆ ಸಂವಿಧಾನವೇ ಅವಕಾಶ ನೀಡಿದೆ. ಆದರೆ, ಇಲ್ಲಿದ್ದ ಮೇಲೆ ಕನ್ನಡ ಭಾಷೆಯಲ್ಲಿ ಸಂವಹನ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು.

ಬಂಡಾಯ ಸಾಹಿತ್ಯ ಮತ್ತು ಸಂಘಟನೆಯಲ್ಲಿ ದಲಿತರ ಹೋರಾಟಗಳು ಸಾಕಷ್ಟು ಪಾತ್ರ ವಹಿಸಿವೆ. ಹೋರಾಟದ ಹಾಡುಗಳು ಬಂಡಾಯ ಸಾಹಿತ್ಯಕ್ಕೆ ಪ್ರೇರಣೆಯಾಗಿದೆ. 80ರ ದಶಕದಲ್ಲಿ ಬಂಡಾಯ ಸಾಹಿತ್ಯ ಹುಟ್ಟಿಗೆ ಕಾರಣರಾದ ರಾಯಚೂರು, ಉರ್ದು ಸಾಹಿತ್ಯದ ಜೀವಾಳವಾದ ಗಜಲ್‌ ಕಾವ್ಯವನ್ನೂ ಕನ್ನಡದಲ್ಲಿ ರಚಿಸಲು ವೇದಿಕೆಯಾಯಿತು ಎಂದರು. 

ಕಲೆಯಲ್ಲೂ ಜಿಲ್ಲೆಗೆ ದೊಡ್ಡ ಹೆಸರಿದೆ. ಚಿತ್ರಕಲಾವಿದರಾದ ಶಂಕರರಾವ್‌, ಶಂಕರಗೌಡ ಬೆಟ್ಟದೂರು, ಹೀರಾಲಾಲ್‌, ಸುರೇಶ ವೈದ್ಯ,ಎಚ್‌.ಎಚ್‌.ಮ್ಯಾದಾರ,  ಚ್‌.ಎನ್‌.ಚಿತ್ರಗಾರ, ರಾಘವೇಂದ್ರ ಮಲ್ಕಾರಿ ಸೇರಿ ಅನೇಕ ಕಾಲಾವಿದರು ತಮ್ಮ ಸಾಧನೆ ಮೆರೆದಿದ್ದಾರೆ ಎಂದರು.  ದೇಶಕ್ಕೆ ಅನ್ನ ನೀಡುವ ರೈತ ಸಂಕಷ್ಟದಲ್ಲಿದ್ದಾನೆ. ಅವರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಸರ್ಕಾರಗಳು ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.

 ಮೆರವಣಿಗೆ: ಸಮ್ಮೇಳನ ಉದ್ಘಾಟನೆಗೂ ಮುನ್ನ ನಾಲ್ಕನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಯನ್ನು ಅದ್ಧೂರಿಯಾಗಿ ನೆರವೇರಿಸಲಾಯಿತು.

ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಿಂದ ಸಮ್ಮೇಳನದ ವೇದಿಕೆವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಿತು. ತಾಪಂ ಇಒ ಪ್ರಾಣೇಶರಾವ್‌ ಮೆರವಣಿಗೆ ಉದ್ಘಾಟಿಸಿದರು.

ಸಮ್ಮೇಳನಾಧ್ಯಕ್ಷ ಆಂಜನೇಯ ಜಾಲಿಬೆಂಚಿ ಅವರಿಗೆ ತಾಲೂಕು ಕಸಾಪ ಅಧ್ಯಕ್ಷೆ ಗಿರಿಜಾ ಸಾಥ್‌ ನೀಡಿದರು. ಟ್ರ್ಯಾಕ್ಟರ್‌ ಟ್ರಾಲಿಯಲ್ಲಿ ಮಹಾರಾಜ್‌ ಕುರ್ಚಿ ಹಾಕಲಾಗಿತ್ತು. ಆದರೆ, ಮೆರವಣಿಗೆಯಲ್ಲಿ ಸಾರ್ವಜನಿಕರಿಗಿಂತ ಶಾಲಾ ಮಕ್ಕಳೇ ಹೆಚ್ಚಾಗಿ ಕಂಡುಬಂದರು. ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಅದಕ್ಕೂ ಮುಂಚೆ ಬೆಳಗ್ಗೆ ಶಾಲಾ ಆವರಣದಲ್ಲಿ ಕಸಾಪ ಧ್ವಜಾರೋಹಣ ನೆರವೇರಿಸಲಾಯಿತು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.