ಕಾನೂನು ಅನ್ಯಾಯಕ್ಕೊಳಗಾದವರ ಅಸ್ತ್ರ


Team Udayavani, Sep 18, 2021, 3:51 PM IST

Udayavani Kannada Newspaper

ವಾಡಿ: ಕಾನೂನಿನ ಅರಿವಿನ ಕೊರತೆಯಿಂದಾಗಿ ಸಮಾಜದಲ್ಲಿ ಅನೇಕರು ವಿವಿಧ ರೀತಿಯ ದೌರ್ಜನ್ಯಗಳಿಗೆ ಬಲಿಯಾಗಿ ಶೋಷಣೆಗೆ ಒಳಗಾಗುತ್ತಿದ್ದಾರೆ. ಕಾನೂನು ಅರಿವು ಎನ್ನುವುದು ಅನ್ಯಾಯಕ್ಕೊಳಗಾದ ಸಂತ್ರಸ್ತರ ಕೈಗಳಿಗೆ ಅಸ್ತ್ರವಿದ್ದಂತೆ. ಬದುಕಿನಲ್ಲಿ ನ್ಯಾಯ ಸ್ಥಾಪಿಸಲು ಪ್ರತಿಯೊಬ್ಬರೂ ಕಾನೂನು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಚಿತ್ತಾಪುರ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಸುಭಾಶ್ಚಂದ್ರ
ರಾಠೊಡ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವದ 75ನೇ ಅಮೃತ ಮಹೋತ್ಸವ ನಿಮಿತ್ತ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಪೊಲೀಸ್‌ ಇಲಾಖೆ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಪಟ್ಟಣದ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಏರ್ಪಡಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನಿನ ತಿಳಿವಳಿಕೆ ಇದ್ದರೆ ಲಂಚ ಮತ್ತು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲು ಧೈರ್ಯ ಬರುತ್ತದೆ. ಅನಗತ್ಯವಾಗಿ ದಾಖಲಾಗುವ ಎಫ್‌ಐಆರ್‌ ಪ್ರಶ್ನಿಸಲು ಶಕ್ತಿ ನೀಡುತ್ತದೆ. ಪೊಲೀಸರು ನಮ್ಮ ವೈರಿಗಳಲ್ಲ. ಅವರಿಗೆ ಹೆದರಬೇಕಾದ ಅವಶ್ಯಕತೆಯೂ ಇಲ್ಲ. ಏಕಾಏಕಿ ಯಾರನ್ನೂ ಅವರು ಬಂ ಧಿಸುವಂತಿಲ್ಲ. ಕಾನೂನಿಗೂ ನಮಗೂ ಸಂಬಂಧವೇ ಇಲ್ಲದಂತೆ ಇರುವುದರಿಂದ ಸಮಾಜದಲ್ಲಿ ಅಪರಾಧಗಳು ಹೆಚ್ಚಾಗುತ್ತಿವೆ ಎಂದರು.

ಗಂಡು, ಹೆಣ್ಣು ಮಗು ಎನ್ನುವ ತಾರತಮ್ಯದ ಮನಸ್ಥಿತಿಯಿಂದ ಹೊರಬರಬೇಕು ಎನ್ನುವ ಕಾರಣಕ್ಕೆ ಕಾನೂನಿನಲ್ಲಿ ಸಮಾನತೆ ಬೋಧಿ ಸಲಾಗಿದೆ. 6ರಿಂದ 14 ವರ್ಷ ವಯಸ್ಸಿನೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವ ಹಕ್ಕು ನೀಡಲಾಗಿದೆ. ಅಪ್ರಾಪ್ತರನ್ನು ದುಡಿಸಿಕೊಳ್ಳುವುದಾಗಲಿ ಅಥವಾ ಮದುವೆ ಮಾಡುವುದಾಗಲಿ ಮಾಡಿದರೆ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ. ಶಿಕ್ಷಣದಿಂದ ವಂಚಿತವಾಗುವ ಮಗು ಸಮಾಜವನ್ನು ಅರ್ಥ ಮಾಡಿಕೊಳ್ಳುವಲ್ಲಿ
ವಿಫಲವಾಗುತ್ತದೆ. ಅಂಥಹ ಮಕ್ಕಳು ದೌರ್ಜನ್ಯ, ದಬ್ಟಾಳಿಕೆ, ಶೋಷಣೆ ಹಾಗೂ ಅಸಮಾನತೆಗೆ ತುತ್ತಾಗುತ್ತಾರೆ ಎಂದರು.

ಆಸ್ತಿಗಾಗಿ ಕುಟುಂಬ ಕಲಹ ಹೆಚ್ಚಾಗುತ್ತಿರುವುದನ್ನು ಕಾಣುತ್ತಿದ್ದೇವೆ. ವಿಶೇಷವಾಗಿ ಮಹಿಳೆಯರು ಪೋಷಕರ ಆಸ್ತಿ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಪುರುಷರು ನಮಗೆ ಅಕ್ಕ ತಂಗಿಯರಿಲ್ಲ ಎಂದು ಸುಳ್ಳು ಮಾಹಿತಿ ನೀಡಿ ಸಂಪೂರ್ಣ ಆಸ್ತಿ ಕಬಳಿಸುತ್ತಿದ್ದಾರೆ. ಆದ್ದರಿಂದ ನೀವು ಸತ್ತನಂತರವೂ ಮಕ್ಕಳು ಖುಷಿಯಾಗಿರಬೇಕು ಎಂದಾದರೆ ಬದುಕಿರುವಾಗಲೇ ವ್ಹಿಲ್‌ ಬರೆದಿಡಿ ಎಂದು ಹೇಳಿದರು.

ವಕೀಲರಾದ ಸುಜಾತಾ ಎಸ್‌.ಮೊಸಲಗಿ ಮಾತನಾಡಿ,ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ಹಕ್ಕುಗಳ ಅರಿವು ಮೂಡುವಂತಾಗಬೇಕು ಎಂಬುದು ಡಾ|ಬಾಬಾಸಾಹೇಬ ಅಂಬೇಡ್ಕರ್‌ ಅವರ ಕನಸಾಗಿತ್ತು ಎಂದರು. ನ್ಯಾಯವಾದಿ ಪಿ.ಎಂ.ಗಾಯಕವಾಡ ನೋಟರಿ ಕಾಯ್ದೆ ಕುರಿತು ಮಾಹಿತಿ ನೀಡಿದರು. ಸಿಪಿಐ ಕೃಷ್ಣಪ್ಪ ಕಲ್ಲೆದೇವರು ಹಾಗೂ ಪುರಸಭೆ ಗ್ರೇಡ್‌-1 ಮುಖ್ಯಾಧಿಕಾರಿ ಡಾ| ಚಿದಾನಂದಸ್ವಾಮಿ ಸಾಮಾಜಿಕ ಅಪರಾಧ ಮತ್ತು ಮೋಟಾರು ವಾಹನ ಕಾಯ್ದೆಗಳ ಮೇಲೆ ಬೆಳಕು ಚೆಲ್ಲಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಮಹೆಮೂದ್‌ ಸಾಹೇಬ, ಬಿಜೆಪಿ ಎಸ್‌ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ, ಪುರಸಭೆ ವಿರೋಧ ಪಕ್ಷದ ನಾಯಕ ಭೀಮಶಾ ಜಿರೊಳ್ಳಿ, ಮುಖಂಡರಾದ ಬಸವರಾಜ ಪಂಚಾಳ, ಫಿರೋಜ್‌ ಖಾನ್‌, ಬಾಬುಮಿಯ್ನಾ, ಗಿರಿಮಲ್ಲಪ್ಪ ಕಟ್ಟಿಮನಿ, ಶರಣಬಸು ಸಿರೂರಕರ, ಅಂಬಾದಾಸ ಜಾಧವ ಮತ್ತಿತರರು ಇದ್ದರು. ನ್ಯಾಯವಾದಿ ಶ್ರವಣಕುಮಾರ ಮೊಸಲಗಿ ಸ್ವಾಗತಿಸಿದರು. ಕಾನೂನು ಸಲಹಾ ಸಮಿತಿ ಸದಸ್ಯ ಗಂಗಣ್ಣ ನಿರೂಪಿಸಿದರು. ಪಿಎಸ್‌ಐ ವಿಜಯಕುಮಾರ ಭಾವಗಿ ವಂದಿಸಿದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.