ಹಾಲುಮತ ಸಂಸ್ಕೃತಿ ವೈಭವಕ್ಕೆ ಅದ್ಧೂರಿ ಚಾಲನೆ


Team Udayavani, Jan 13, 2018, 3:22 PM IST

ray-3.jpg

ಜಾಲಹಳ್ಳಿ: ತಿಂಥಿಣಿ ಬ್ರಿಜ್‌ ಕಾಗಿನೆಲೆ ಕನಕಗುರು ಪೀಠದಲ್ಲಿ ಮೂರು ದಿನಗಳ ಕಾಲ ನಡೆಯುವ ಹಾಲುಮತ ಸಂಸ್ಕೃತಿ ವೈಭವ-2018 ಕಾರ್ಯಕ್ರಮಕ್ಕೆ ಶುಕ್ರವಾರ ಅದ್ಧೂರಿ ಚಾಲನೆ ನೀಡಲಾಯಿತು. ಮೈಸೂರು ಕೆ.ಆರ್‌.ನಗರದ ಕನಕಗುರು ಪೀಠದ ಶಿವಾನಂದಪುರಿ ಸ್ವಾಮೀಜಿ ಜೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಸ್ತಾವಿಕ ಮಾತನಾಡಿದ ಸಿದ್ದರಾಮಯ್ಯ ಸ್ವಾಮೀಜಿ, ಕಳೆದ ಹನ್ನೊಂದು ವರ್ಷಗಳಿಂದಲೂ ಹಾಲುಮತ ಸಾಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಈ ಸಲ ನಾವು ಯಾರಿಗೂ ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡಿಲ್ಲ. ರಾಜಕಾರಣಿಗಳನ್ನು ಆಹ್ವಾನಿಸಿಲ್ಲ. ಆಹ್ವಾನ ಪತ್ರ ಮುದ್ರಿಸಿಲ್ಲ. ಕೇವಲ ನಮ್ಮ ಸಮಾಜದ ಸಾಧಕರಿಗೆ
ಮಾತ್ರ ಮಾಹಿತಿ ನೀಡಿದ್ದೆವು. ಆದರೂ ಇಷ್ಟೊಂದು ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಸೇರಿರುವುದು ಸಂತೋಷ ಎಂದು ಹೇಳಿದರು.

ಕನಕ ಜ್ಯೋತಿ ಮೆರವಣಿಗೆ: ಬೆಳಗ್ಗೆ ತಿಂಥಿಣಿ ಗ್ರಾಮದ ಮೌನೇಶ್ವರ ದೇವಸ್ಥಾನದಿಂದ ಕನಕಗುರು ಪೀಠದವರೆಗೆ ಕನಕ ಜ್ಯೋತಿ ಮೆರವಣಿಗೆ ನಡೆಸಲಾಯಿತು. ಕುಂಭ ಹೊತ್ತ ನೂರಾರು ಮಹಿಳೆಯರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.  

ಉಚಿತ ಚಿಕಿತ್ಸಾ ಶಿಬಿರ: ಹಾಲುಮತ ಸಂಸ್ಕೃತಿ ವೈಭವ-2018ರ ಅಂಗವಾಗಿ ಕನಕಗುರು ಪೀಠದಲ್ಲಿ ಡಾ| ಮಾಲಕರೆಡ್ಡಿ ಕಾಲೇಜು, ಬಿ.ಕೆ. ಆರ್ಗನೇಶನ್‌ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಉಚಿತ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಡಾ| ವಿಜಯಕುಮಾರ ಪಾಟೀಲ, ಡಾ| ಪ್ರೀತಿ ಪಾಟೀಲ ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ. 

ಸಾಧಕರ ಸನ್ಮಾನ: ವಿವಿಧ ಉನ್ನತ ಸ್ಥಾನಗಳಲ್ಲಿ ಸಾಧನೆ ಮಾಡಿದ ಹಾಲುಮತ ಸಮಾಜದ ಸಾಧಕರಾದ
ವಿಶ್ವನಾಥ ಅಂಗಡಿ, ಈರಪ್ಪ ಆಶಾಪುರು, ಮಂಜುನಾಥ, ಆಶಪ್ಪ, ಶರಣಮ್ಮ, ಕುಮಾರಿ ನಾಗವೇಣಿ ಸೇರಿದಂತೆ ಅನೇಕರನ್ನು ಸನ್ಮಾನಿಸಿ ಗೌರವಿಸಲಾಯಿತು.
 
ಜಾಲಹಳ್ಳಿ: ಜಗತ್ತಿನ ಅರಿವೇ ಇಲ್ಲದೇ ಗುಡ್ಡಗಾಡು, ಅರಣ್ಯ, ಕಾಡಿನಲ್ಲಿ ಜೀವನ ಸಾಗಿಸುತ್ತಿದ್ದ ಹಾಲುಮತ ಸಮಾಜ
ಎಂದು ಯಾರಿಗೂ ಏನು ಕೇಡು ಬಯಸದೆ ಪ್ರಮಾಣಿಕತೆ ಉಳಿಸಿಕೊಂಡು ಬಂದಿದೆ. ಬದಲಾವಣೆ ಎನ್ನುವುದು
ಜಗದ ನಿಯಮ. ನಾವು ಕಾಲಕ್ಕೆ ತಕ್ಕಂತೆ ಬದಲಾಗಬೇಕು ಎಂದು ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ಹೇಳಿದರು.

ಆರ್ಥಿಕ, ಶೈಕ್ಷಣಿಕ, ರಾಜಕೀಯ ಮತ್ತು ಸಾಂಸ್ಕೃತಿಕವಾಗಿ ನಾವು ಮುಂದೆ ಬರಬೇಕಾದರೆ ಮಠಗಳ ಪಾತ್ರ
ಮುಖ್ಯವಾಗಿದೆ.  ಮಠಗಳು ಬೆಳೆದರೆ ಸಮಾಜ ಬೆಳೆಯುತ್ತದೆ. ಮಠಗಳು ಬೆಳೆಯಬೇಕಾದರೆ ಸಮಾಜ ಬೇಕು. ಸಮಾಜ ಬೆಳೆಯಬೇಕಾದರೆ ಮಠಗಳು ಬೇಕು. ಎಲ್ಲರೂ ಮಠಗಳ ಬೆಳವಣಿಗೆಗೆ ಸಹಕಾರ ನೀಡಬೇಕು.

ಹಲವು ವರ್ಷಗಳಿಂದ ನಮ್ಮ ನಾಲ್ಕು ವಿಭಾಗೀಯ ಮಠಗಳು ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುತ್ತಿವೆ. ಹಾಗಾಗಿ
ಸಮಾಜದಲ್ಲಿ ಸ್ವಲ್ಪ ಬದಲಾವಣೆ ಕಾಣಬಹುದಾಗಿದೆ. ಆದರೆ ಇದು ಸಾಲದು. ಇನ್ನು ಬಹಳಷ್ಟು ಬದಲಾವಣೆ
ಆಗಬೇಕಿದೆ. ನಮ್ಮ ಸಮಾಜದಲ್ಲಿ ಹಲವು ಸಾಧಕರನ್ನು ನಾವು ಕಾಣಬಹುದಾಗಿದೆ.

ಸಾಧಕರನ್ನು ಆದರ್ಶವಾಗಿಟ್ಟುಕೊಂಡಾಗ ನಾವು ಸಾಧನೆ ಮಾಡಲು ಸಾಧ್ಯವಿದೆ ಎಂದು ಹೇಳಿದರು. ಕೆ.ಆರ್‌. ನಗರ
ಕನಕಗುರು ಪೀಠದ ಶಿವಾನಂದಪುರಿ ಸ್ವಾಮೀಜಿ, ತಿಂಥಿಣಿಬ್ರಿàಜ್‌ ಕಾಗಿನಲೆ ಕನಕಗುರು ಪೀಠದ ಸಿದ್ದರಾಮನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಕುರುಬ ಸಮಾಜದ ರಾಜ್ಯ ಅಧ್ಯಕ್ಷ ನಿಂಗಣ್ಣ ಚಿಂಚೋಡಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಅಮಾತೆಪ್ಪ ಕಂದಕೂರು,
ಸಂಶೋಧಕ ಚಂದ್ರಕಾಂತ ಸ್ವಾಮೀಜಿ, ಸಮಾಜದ ಮುಖಂಡರಾದ ಸಂಗಣ್ಣ ಬಯ್ನಾಪುರು,ಟ್ರಸ್ಟಿ ತಿಪ್ಪಣ್ಣ, ಬಸವರಾಜ ವಿಭೂತಿ, ಶರಣಪ್ಪ ಇದ್ದರು.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.