ಕೃಷಿ ಜಾತ್ರೆಗೆ ಹರಿದು ಬಂತು ಜನಸಾಗರ


Team Udayavani, Dec 11, 2017, 3:49 PM IST

ray-1.jpg

ರಾಯಚೂರು: ಇಲ್ಲಿನ ಕೃಷಿ ವಿವಿಯಲ್ಲಿ ಡಿ.8 ರಿಂದ ನಡೆಯುತ್ತಿರುವ ನಾಲ್ಕು ದಿನಗಳ ಕೃಷಿ ಮೇಳಕ್ಕೆ ರವಿವಾರ ಜನಸಾಗರವೇ ಹರಿದು ಬಂದಿತ್ತು. ಆದರೆ, ಅದರಲ್ಲಿ ಕೃಷಿಕರಲ್ಲದವರೇ ಹೆಚ್ಚಾಗಿದ್ದು, ಸಂತೆಯಂತೆ ಭಾಸವಾಯಿತು.

ಮೂರನೇ ದಿನ ರವಿವಾರದ್ದರಿಂದ ನಿರೀಕ್ಷೆಯಂತೆ ಜನಸಾಗರವೇ ಹರಿದು ಬಂದಿತ್ತು. ಬೆಳಗ್ಗೆಯಿಂದಲೇ ಮೇಳದತ್ತ ಜನ ಆಗಮಿಸುತ್ತಿದ್ದರು. ಮಾಹಿತಿ ಪ್ರಕಾರ ರವಿವಾರ ಒಂದೇ ದಿನ ಒಂದೂವರೆ ಲಕ್ಷಕ್ಕೂ ಅಧಿಕ ಜನ ಭೇಟಿ ನೀಡಿದ್ದಾರೆ. ಕೃಷಿಗೆ ಸಂಬಂಧಿ ಸಿದ ಮಳಿಗೆಗಳಿಗೆ ಜನ ಭೇಟಿ ನೀಡಿ ವೀಕ್ಷಿಸಿದರೂ, ಭರ್ಜರಿ ವ್ಯಾಪಾರ ನಡೆಸಿದ್ದು ಮಾತ್ರ ದಿನಬಳಕೆ ವಸ್ತುಗಳ ವ್ಯಾಪಾರಿಗಳು. ಇದರಿಂದ ಸಿರಿಧಾನ್ಯಗಳ ಉತ್ತೇಜಿಸುವ ಉದ್ದೇಶಕ್ಕೆ ಆಯೋಜಿಸಿದ್ದ ಕೃಷಿ ಮೇಳದಲ್ಲಿ ಸಿರಿಧಾನ್ಯಗಳ ವ್ಯಾಪಾರಿಗಳು ಮಂಕಾಗಿದ್ದಾರೆ. ಕೃಷಿ ವಿವಿಯಿಂದ ಆಯೋಜಿಸಿದ್ದ ಮಳಿಗೆಗಳಿಗಿಂತ ಖಾಸಗಿ ಮಳಿಗೆಗಳೇ ಹೆಚ್ಚು ಕಂಡುಬರುತ್ತಿದ್ದವು. ಇದರಿಂದ ಎಲ್ಲರ ಚಿತ್ತ ಆ ಕಡೆ ಹರಿಯುತ್ತಿತ್ತು.

ಅನಧಿಕೃತ ಮಳಿಗೆಗಳೇ ಹೆಚ್ಚು: ಕೃಷಿ ವಿವಿಯಲ್ಲಿ ಅಧಿಕೃತವಾಗಿ 218 ಮಳಿಗೆಗಳನ್ನು ಅಳವಡಿಸಲಾಗಿತ್ತು. ಬೇರೆ ಬೇರೆ ಅಳತೆಯ, ಬೇರೆ ಮಾದರಿಯ ಮಳಿಗೆಗಳನ್ನು ಅಳವಡಿಸಲಾಗಿತ್ತು. ಅದಕ್ಕಾಗಿ ಮುಂಗಡ ಹಣ ಪಡೆಯಲಾಗಿತ್ತು. ಪ್ರವೇಶ ದ್ವಾರ ಶುರುವಾಗುತ್ತಿದ್ದಂತೆ ಅನಧಿಕೃತ ಮಳಿಗೆಗಳನ್ನು ಹಾಕಿಕೊಂಡಿದ್ದು, ರಸ್ತೆ ಬದಿಯಲ್ಲೇ ತಿಂಡಿಗಳು, ಬಟ್ಟೆ, ಸ್ಟೇಶನರಿ, ಜ್ಯೂಸ್‌ ಸೆಂಟರ್‌, ಮಿರ್ಚಿಭಜಿ, ಗೋಬಿ ಮಂಚೂರಿ ಹೀಗೆ ತರಹೇವಾರಿ ಅಂಗಡಿಗಳನ್ನು ಹಾಕಲಾಗಿದೆ. ಇದರಿಂದ ಬಹುತೇಕ ಜನ ಒಳಗೆ ತೆರಳದೆ ಅಲ್ಲಿಯೇ ತಮ್ಮ ವ್ಯಾಪಾರ ವಹಿವಾಟು ನಡೆಸಿದ್ದರಿಂದ, ಬಾಡಿಗೆ ಪಾವತಿಸಿ ಮಳಿಗೆ ಹಾಕಿದ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಯಿತು.

ರೈತರಿಗಿಲ್ಲ ಬಿಡುವು: ವಿಪರ್ಯಾಸವೆಂದರೆ ಕೃಷಿ ಮೇಳ ರೈತರಿಗಾಗಿಯಾದರೂ ನಿಜವಾದ ರೈತಾಪಿ ವರ್ಗ ಕೃಷಿ ಚಟುವಟಿಕೆಯಲ್ಲಿ ಮಗ್ನವಾಗಿದೆ. ಈಗ ಎಲ್ಲೆಡೆ ಹತ್ತಿ ಬಿಡಿಸುತ್ತಿದ್ದರೆ, ಮತ್ತೂಂದೆಡೆ ಭತ್ತ ಕಟಾವು ಕಾರ್ಯ ಜೋರಾಗಿದೆ. ಅಲ್ಲದೇ, ಕೂಲಿಗಳು ಸಿಗದೆ ರೈತರು ನಾನಾ ಪಡಿಪಾಟಲು ಎದುರಿಸುತ್ತಿದ್ದಾರೆ. ಇಂಥ ಹೊತ್ತಲ್ಲಿ ಮೇಳಕ್ಕೆ ಹೋಗಲು ಪುರುಸೊತ್ತೆಲ್ಲಿ ಎಂದು ಪ್ರಶ್ನಿಸುತ್ತಾರೆ ಗ್ರಾಮೀಣ ಭಾಗದ ಜನ.

ಒಟ್ಟಾರೆ ಮೇಳ ಈ ಭಾಗದ ಜನರಿಗೆ ಮುದ ನೀಡುತ್ತಿದೆ ಎನ್ನುವುದು ಸತ್ಯವಾದರೂ ಉದ್ದೇಶಿತ ಗುರಿ ತಲುಪಲು ಸಾಧ್ಯವಾಗಿದೆಯಾ ಎನ್ನುವ ಪ್ರಶ್ನೆಯೂ ಸಹಜವಾಗಿ ಮೂಡುತ್ತಿದೆ. 

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.