ಕಳಪೆ ಕಾಮಗಾರಿ ತನಿಖೆಗೆ ಆಗ್ರಹ
Team Udayavani, Jul 19, 2017, 3:04 PM IST
ಸಿಂಧನೂರು: ನಗರದಲ್ಲಿ ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಒಳಚರಂಡಿ, ಕುಡಿಯುವ ನೀರು ಮತ್ತು ನಗರೋತ್ಥಾನ ಯೋಜನೆಯಡಿ ರಸ್ತೆಗಳು ಕಳಪೆ ಆಗಿದ್ದು, ಈ ಎಲ್ಲ ಕಾಮಗಾರಿಗಳ ತನಿಖೆಗೆ ಆಗ್ರಹಿಸಿ ನಗರಾಭಿವೃದ್ಧಿ ಹೋರಾಟ ಸಮಿತಿ ಕಾರ್ಯಕರ್ತರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಬೃಹತ್ ಪ್ರತಿಭಟನಾ ಮೆರವಣಿಗೆ ಹಳೆ ಬಜಾರ್ ಮುಖಾಂತರ ನಗರಸಭೆ ತಲುಪಿತು. ಇದಕ್ಕೂ ಮುನ್ನ ಮಹಾತ್ಮಗಾಂಧಿ ವೃತ್ತದಲ್ಲಿ ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪ್ರತಿಭಟನಾಕಾರರು ನಗರಸಭೆ ಮುತ್ತಿಗೆ ಹಾಕಲು ಯತ್ನಿಸಿದರು, ಆದರೆ ಪೊಲೀಸರು ಇವರನ್ನು ತಡೆದರು. ನಗರಾಭಿವೃದ್ಧಿ ಹೋರಾಟ ಸಮಿತಿ ಸಮಿತಿ ಸಂಚಾಲಕ ಎಸ್.ದೇವೇಂದ್ರಗೌಡ ಮಾತನಾಡಿ, ಕಾಮಗಾರಿಗಳು ಪ್ರಾರಂಭವಾದಾಗಿನಿಂದ ಗುಣಮಟ್ಟದ ಕೆಲಸ ಮಾಡುವಂತೆ ನಗರಾಭಿವೃದ್ಧಿ ಹೋರಾಟ ಸಮಿತಿಯಿಂದ ಒತ್ತಾಯಿಸುತ್ತಾ ಬಂದಿದ್ದರೂ ಇಲಾಖೆಗಳು ಮತ್ತು ಗುತ್ತಿಗೆದಾರರು ಗಮನಕ್ಕೆ ತೆಗೆದುಕೊಳ್ಳದೆ ಯಥಾಸ್ಥಿತಿ ತಮ್ಮ ಅವ್ಯವಹಾರ ಮುಂದುವರೆಸಿದ್ದಾರೆ. ಕಾಮಗಾರಿಗಳ ಮೇಲ್ವಿಚಾರಣೆ
ಮಾಡುವ ನಗರಸಭೆ ಆಡಳಿತ ಮಂಡಳಿ ಸಹ ನಿರ್ಲಕ್ಷ ತಾಳಿದೆ. ಕಳೆದ ಎರಡು ದಿನದ ಹಿಂದೆ ಒಳಚರಂಡಿ, ಕುಡಿಯುವ ನೀರು ಮತ್ತು ನಗರೋತ್ಥಾನ ಯೋಜನೆಯ ಅಧಿಕಾರಿಗಳು ನಗರಾಭಿವೃದ್ಧಿ ಹೋರಾಟ ಸಮಿತಿಯೊಂದಿಗೆ ನಡೆಸಿದ ಚರ್ಚೆಯಲ್ಲಿ ಸಮರ್ಪಕ ಉತ್ತರ ನೀಡದೆ ನುಸುಳಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಿತಿ ಸಂಚಾಲಕ ಡಿ.ಎಚ್.ಕಂಬಳಿ ಮಾತನಾಡಿ, ಸಿಂಧನೂರಿನ ಮಹತ್ವಾಕಾಂಕ್ಷೆಯ ಈ ಯೋಜನೆಗಳ ಕಳಪೆ ಕಾಮಗಾರಿ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಇಲಾಖೆಗೆ ಸಂಬಂಧವಿರದ ತಂತ್ರಜ್ಞರನ್ನು ತನಿಖಾ ಸಮಿತಿಗೆ ನೇಮಿಸಬೇಕು. ಪ್ರತಿ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಯೋಜನೆ ಕುರಿತಾದ ಮಾಹಿತಿ ಫಲಕ ಅಳವಡಿಸಬೇಕು. ನಗರದ ಜನರಿಗೆ ಸಮರ್ಪಕ ಶುದ್ಧ ಕುಡಿಯುವ ನೀರು ಪೂರೈಸಬೇಕು. ಇಲ್ಲದಿದ್ದರೆ ಮುತ್ತಿಗೆ ಚಳವಳಿಯನ್ನು ಮುಂದುವರಿಸುವುದಾಗಿ ಎಚ್ಚರಿಸಿದರು. ಪ್ರತಿಭಟನಾ ನಿರತರು ಪೌರಾಯುಕ್ತರ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾಧಿ ಕಾರಿಗಳು ಸ್ಥಳಕ್ಕೆ ಬರುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು. ನಂತರ ತಹಶೀಲ್ದಾರ ಶಂಶಾಲಂ, ಸಿಪಿಐ ನಾಗರಾಜ ನೇತೃತ್ವದಲ್ಲಿ ಸಹಾಯಕ ಆಯುಕ್ತರಿಗೆ ದೂರವಾಣಿಯಲ್ಲಿ ಕರೆ ಮಾಡಿಸಿ ಜು.19ರಂದು ಸಭೆ ನಡೆಸಿ, ತನಿಖಾ ಸಮಿತಿ ರಚನೆ ಮಾಡುವುದಾಗಿ ಹೇಳಿಕೆ ನೀಡಲಾಯಿತು. ಸಮಿತಿಯ ಸಂಚಾಲಕ ಚಂದ್ರಶೇಖರ ಗೊರೇಬಾಳ, ಮುಖಂಡರಾದ ಖಾನ್ಸಾಬ, ವೆಂಕನಗೌಡ ಗದ್ರಟಗಿ, ನಾರಾಯಣ ಬೆಳಗುರ್ಕಿ, ಡಾ| ತಾಹೇರ್ಅಲಿ, ಬಸವರಾಜ ಬಾದರ್ಲಿ, ಗುಂಡಪ್ಪ ಬಳಿಗಾರ, ಯಾಕೂಬ್ಅಲಿ, ಗಂಗಣ್ಣ ಡಿಶ್, ದಾವಲಸಾಬ ದೊಡ್ಮನಿ, ಕರೇಗೌಡ ಕುರಕುಂದಿ, ಶಂಕರ ಗುರಿಕಾರ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ
ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ