ನೆರಳು ಪರದೆ ಸಾಮಗ್ರಿಗಳು ಗುಜರಿ ಅಂಗಡಿಗೆ!


Team Udayavani, Feb 21, 2018, 3:17 PM IST

vij-5.jpg

ಲಿಂಗಸುಗೂರು: ರೈತರಿಗೆ ಅನುಕೂಲವಾಗಲೆಂದು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದರೆ ಕೆಲ ರೈತರೇ ದುರುಪಯೋಗ ಮಾಡುತ್ತಿದ್ದಾರೆಂಂಬುದಕ್ಕೆ ಪಟ್ಟಣದ ಗುಜರಿ ಅಂಗಡಿಯಲ್ಲಿ ಕಾಣುವ ನೆರಳು ಪರದೆ ಸಾಮಾಗ್ರಿಗಳೇ ಸಾಕ್ಷಿಯಾಗಿವೆ.

ಕೃಷಿ ಭಾಗ್ಯ ಯೋಜನೆಯನ್ನು ತೋಟಗಾರಿಕೆ ಇಲಾಖೆಗೂ ವಿಸ್ತರಿಸಲಾಗಿದೆ. ಪಾಲಿಹೌಸ್‌ ಮತ್ತು ನೆರಳು ಪರದೆ ಘಟಕ
ನಿರ್ಮಿಸಿಕೊಳ್ಳಲು ರೈತರಿಗೆ ಸಹಾಯಧನ ನೀಡುತ್ತಿದೆ. ಈ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ.

ಒಂದು ಎಕರೆ ಜಮೀನಿನಲ್ಲಿ ಪಾಲಿಮನೆ ನಿರ್ಮಿಸಿಕೊಳ್ಳಲು ಸಾಮಾನ್ಯ ವರ್ಗದ ರೈತರಿಗೆ 15.66 ಲಕ್ಷ ರೂ., ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ 28.18 ಲಕ್ಷ ರೂ., ಅದೇ ರೀತಿ ನೆರಳು ಪರದೆ ಘಟಕ ನಿರ್ಮಿಸಿಕೊಳ್ಳಲು ಸಾಮಾನ್ಯ ವರ್ಗದ ರೈತರಿಗೆ 7.68 ಲಕ್ಷ ರೂ., ಎಸ್‌ಸಿ ಮತ್ತು ಎಸ್‌ಟಿ ರೈತರಿಗೆ 13.82 ಲಕ್ಷ ರೂ., ಸಹಾಯಧನ ನೀಡಲಾಗುತ್ತಿದೆ.

ಸರ್ಕಾರದ ಸಹಾಯಧನ ಪಡೆದು ನಿರ್ಮಿಸಿಕೊಂಡ ನೆರಳು ಪರದೆ ಘಟಕ ಅಥವಾ ಪಾಲಿಹೌಸ್‌ನ್ನು ರೈತರು ಕನಿಷ್ಠ ಮೂರು ವರ್ಷಗಳವರೆಗೆ ನಿರ್ವಹಣೆ ಮಾಡಿ ಪ್ರತಿ ವರ್ಷ ಬೆಳೆ ಬೆಳೆಯುವುದು ಕಡ್ಡಾಯವಾಗಿದೆ. ಆದರೆ ಕೆಲ ರೈತರು ಸಹಾಯಧನ ಪಡೆಯಲು ಕಾಟಾಚಾರಕ್ಕೆ ಎಂಬಂತೆ ಘಟಕವನ್ನು ನಿರ್ಮಿಸಿಕೊಂಡು ಒಂದು ವರ್ಷ ಬೆಳೆ ಬೆಳೆದು ನಂತರ ಘಟಕವನ್ನು ತೆಗೆದು ಅದರ ಪೈಪ್‌ಗ್ಳನ್ನು 15 ರೂ.ಗೆ ಕೆಜಿಯಂತೆ ಪಟ್ಟಣದಲ್ಲಿರುವ ಗುಜರಿ ಅಂಗಡಿಗಳಿಗೆ ಮಾರುತ್ತಿದ್ದಾರೆ.

ಗುಜರಿ ಅಂಗಡಿಯವರು ರೈತರಿಂದ ಖರೀದಿಸಿದ ಸಾಮಾಗ್ರಿಗಳನ್ನು 65 ರೂ.ಗೆ ಕೆಜಿಯಂತೆ ಪುನಃ ಅಗತ್ಯವಿರುವ ರೈತರಿಗೆ ಮಾರುತ್ತಿದ್ದಾರೆ. ಪಾಲಿಮನೆ ಮತ್ತು ನೆರಳು ಪರದೆ ಘಟಕದ ಸಾಮಾಗ್ರಿಗಳು ಗುಜರಿ ಅಂಗಡಿಯಲ್ಲಿ ರಾಶಿ ರಾಶಿ ಕಾಣಬಹುದಾಗಿದೆ. ಸರ್ಕಾರದ ಯೋಜನೆಗಳ ಸಾಮಾಗ್ರಿಗಳನ್ನು ಮಾರಾಟ ಅಥವಾ ಖರೀದಿ
ಮಾಡಬಾರದು ಎಂಬ ನಿಯಮವಿದ್ದರೂ ಈ ನಿಯಮಗಳನ್ನು ಗಾಳಿಗೆ ತೋರಿ ಗುಜರಿ ಅಂಗಡಿಯವರು ರಾಜಾರೋಷವಾಗಿ ಮಾರಾಟ ಮತ್ತು ಖರೀದಿ ವ್ಯವಹಾರ ಮಾಡುತ್ತಿದ್ದಾರೆ.

ಗುಜರಿಯಲ್ಲಿ ಘಟಕದ ಸಾಮಾಗ್ರಿಗಳನ್ನು ಖರೀದಿಸಿ ಹೊಸ ಘಟಕಕ್ಕೆ ಬಳಕೆ ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಸಹಾಯಧನ ಪಡೆದು ನಿರ್ಮಿಸುವ ಪಾಲಿಮನೆ ಮತ್ತು ನೆರಳುಪರದೆ ಘಟಕಗಳಿಗೆ ತೋಟಗಾರಿಕೆ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ತಾಂತ್ರಿಕ ಸಲಹೆ ನೀಡಿ ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ನೀಡಬೇಕೆಂಬ ನಿಯಮ ಇದೆ. ಆದರೂ ಸಹ ಇಂತಹ ಯೋಜನೆಗಳ ದುರುಪಯೋಗವಾಗುತ್ತಿದೆ. ಇದರಲ್ಲಿ ಅಧಿಕಾರಿಗಳು, ಖಾಸಗಿ ಕಂಪನಿಗಳು ಶಾಮೀಲಾಗಿರುವ ಆರೋಪಗಳು ಕೇಳಿಬರುತ್ತಿವೆ.

ತನಿಖೆ ನಡೆಸಲಿ: ಪ್ರಾಮಾಣಿಕ ರೈತರಿಗೆ ಈ ಯೋಜನೆ ಸೌಲಭ್ಯ ಸಿಗುವುದಿಲ್ಲ ಎಂಬ ಕೂಗು ಕೇಳಿಬರುತ್ತಿರುವ ನಡುವೆ ಇಂತಹ ದುರುಪಯೋಗ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿಸ್ಥತರು ಹಾಗೂ ಸರಕಾರ ಯೋಜನೆಗಳ ಸಾಮಗ್ರಿಗಳನ್ನು ಖರೀದಿಸಿದ ಗುಜರಿ ಅಂಗಡಿ ಮಾಲಿಕರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಯೋಜನೆ ಉದ್ದೇಶ ಏನು?
ರೈತರು ಮಳೆ ನೀರನ್ನು ಪರಿಣಾಮಕಾರಿಯಾಗಿ ಕೊಯ್ಲು ಮತ್ತು ಶೇಖರಣೆಗೆ ಕೃಷಿ ಹೊಂಡ ನಿರ್ಮಿಸಿ ಸಂಗ್ರಹವಾದ
ನೀರನ್ನು ಉಪಯೋಗಿಸುವುದು, ಪಾಲಿಮನೆ ಮತ್ತು ನೆರಳು ಪರದೆ ಘಟಕ ನಿರ್ಮಿಸಿ ಅದರಲ್ಲಿ ತರಕಾರಿ, ಹೂ,
ಸೇರಿ ತೋಟಗಾರಿಕೆ ಬೆಳೆ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುವುದು. ಸುಸ್ಥಿರ ಒಣಭೂಮಿ ತೋಟಗಾರಿಕೆಗೆ ಉತ್ತೇಜನ ನೀಡಿ ಎಲ್ಲ ಋತುಮಾನಗಳಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದು, ರೈತರ ಆದಾಯವನ್ನು ಹೆಚ್ಚಿಸುವುದು ಯೋಜನೆ ಉದ್ದೇಶವಾಗಿದೆ.

ಸರಕಾರ ಒಳ್ಳೆಯ ಉದ್ದೇಶಕ್ಕಾಗಿ ನೆರಳುಪರದೆ-ಪಾಲಿಮನೆ ನಿರ್ಮಿಸಲು ಸಹಾಯಧನ ನೀಡುತ್ತಿದೆ. ಆದರೆ ರೈತರ
ಸೋಗಿನಲ್ಲಿರುವ ಕೆಲವರು ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದರಲ್ಲಿ ತೋಟಗಾರಿಕೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. 
 ಮೌನೇಶ ರೆಡ್ಡಿ, ರೈತ

ಪಾಲಿಮನೆ ಮತ್ತು ನೆರಳುಪರದೆ ಘಟಕದ ಸಾಮಾಗ್ರಿಗಳನ್ನು ಗುಜರಿ ಅಂಗಡಿಯಲ್ಲಿ ಮಾರಾಟ ಮಾಡುತ್ತಿರುವುದು ನನ್ನ ಗಮನಕ್ಕಿಲ್ಲ. ಈ ಬಗ್ಗೆ ಪರಿಶೀಲಿಸಿ ಸಂಬಂಧಿ ಸಿದವರಿಗೆ ನೋಟಿಸ್‌ ನೀಡಲಾಗುವುದು. 
 ಸುರೇಶ, ಹಿರಿಯ ನಿರ್ದೇಶಕರು ತೋಟಗಾರಿಕೆ ಇಲಾಖೆ

ಶಿವರಾಜ ಕೆಂಭಾವಿ

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.