ಮಗ ಮೃತಪಟ್ಟರೂ ಮತ್ತೂಬ್ಬರ ಬಾಳಿಗೆ ಬೆಳಕಾದ!


Team Udayavani, Jan 29, 2018, 5:02 PM IST

ray-4.jpg

ರಾಯಚೂರು: ಮನೆಗೆ ಆಸರೆಯಾಗಬೇಕಿದ್ದ ಮಗ ದುರಂತದಲ್ಲಿ ಸಾವಿಗೀಡಾದ ದುಃಖದಲ್ಲೂ ಕುಟುಂಬವೊಂದು
ನೇತ್ರದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದೆ. ಕುಟುಂಬ ಸದಸ್ಯರ ಈ ಸಮಯೋಚಿತ ನಿರ್ಧಾರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ತಾಲೂಕಿನ ಕುಕನೂರು ಗ್ರಾಮದ ಮಹೇಂದ್ರ (18) ರವಿವಾರ ಬೆಳಗ್ಗೆ ಅಪಘಾತದಲ್ಲಿ ಮೃತಪಟ್ಟಿದ್ದ.

ಸಮೀಪದ ಯರಮರಸ್‌ ಡಯಟ್‌ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದ. ಇಂಥ ಸಂಕಷ್ಟಮಯ ಸನ್ನಿವೇಶದಲ್ಲೂ ಹೆತ್ತವರು ಆತ್ಮಸ್ಥೈರ್ಯ ಕಳೆದುಕೊಳ್ಳದೆ, ಮಗನ ಕಣ್ಣುಗಳನ್ನು ದಾನ ಮಾಡುವ
ನಿರ್ಧಾರ ಕೈಗೊಂಡಿದ್ದಾರೆ. ಬಡತನದ ಹಿನ್ನೆಲೆಯಲ್ಲೂ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಹೇಂದ್ರ, ತಮ್ಮ
ಹೊಲದಲ್ಲಿ ಬೆಳೆದ ತರಕಾರಿಯನ್ನು ಬೆಳಗ್ಗೆ ಬೈಕ್‌ನಲ್ಲಿ ಮಾರುಕಟ್ಟೆಗೆ ತರುವಾಗ ದುರ್ಘ‌ಟನೆ ಸಂಭವಿಸಿದೆ.

ಡಿಕ್ಕಿ ಹೊಡೆದ ವಾಹನ ಸಮೇತ ಚಾಲಕ  ರಾರಿಯಾಗಿದ್ದಾನೆ. ಮಗನ ಸಾವಿನ ದುಃಖದ ಮಡುವಿನಲ್ಲೂ ಪಾಲಕರು ಧೃತಿಗೆಡದೆ ಇಂಥ ನಿರ್ಧಾರ ಕೈಗೊಂಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ದೇಹವನ್ನು ಶವಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮಗನಂತೂ ಮನೆಗೆ ದಕ್ಕಲಿಲ್ಲ, ಕನಿಷ್ಠ ಪಕ್ಷ ಆತನ ಕಣ್ಣುಗಳಾದರೂ ಬೇರೆಯವರ ಬಾಳಿಗೆ ಬೆಳಕಾಗಲಿ ಎಂದು ಕುಟುಂಬ ಸದಸ್ಯರು ನೇತ್ರದಾನ ಮಾಡುವುದಾಗಿ ತಿಳಿಸಿದ್ದಾರೆ. ನಗರದ ರಿಮ್ಸ್‌ನ ಶವ ಪರೀಕ್ಷೆ ಕೇಂದ್ರಕ್ಕೆ ನವೋದಯ ವೈದ್ಯಕೀಯ ವಿಜ್ಞಾನ ಕೇಂದ್ರದ ವೈದ್ಯರು ಆಗಮಿಸಿ ನೇತ್ರಗಳನ್ನು ಸಂಗ್ರಹಿಸಿದ್ದಾರೆ.

ಕೆಲಸದ ಜತೆಗೆ ಓದು: ಚಿಕ್ಕ ಗ್ರಾಮವಾದ ಕುಕನೂರಿನ ಯುವಕ ಮಹೇಂದ್ರ ಕೆಲಸದ ಜತೆಗೆ ಯರಮರಸ್‌ನ ಆನಂದ
ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ತಂದೆ ಮಲ್ಲಿಕಾರ್ಜುನ ಗ್ರಾಮದಲ್ಲಿ ಚಿಕ್ಕ ಹೋಟೆಲ್‌ ನಡೆಸುತ್ತಿದ್ದರೆ, ತಾಯಿ ನರಸಮ್ಮ ಹೊಲ ಮನೆ ಕೆಲಸ ಮಾಡುತ್ತಿದ್ದರು. ತಾಯಿಗೆ ತರಕಾರಿ ಬೆಳೆಯಲು ನೆರವಾಗುತ್ತಿದ್ದ ಮಹೇಂದ್ರ, ಬೆಳಗಿನ ಜಾವ ಬೈಕ್‌ ನಲ್ಲಿ ಮಾರುಕಟ್ಟೆಗೆ ತರಕಾರಿ ಹಾಕಿ ಬರುತ್ತಿದ್ದ. ಆದರೆ, ಇಂದು ತರಕಾರಿ ಹಾಕಲು ತೆರಳವಾಗ ವಿಧಿ ಯಾಟಕ್ಕೆ ಬಲಿಯಾಗಿದ್ದಾನೆ.

ರಿಮ್ಸ್‌ ಶವ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ನವೋದಯ ವೈದ್ಯ ಸಿಬ್ಬಂದಿ, ಕುಟುಂಬ ಸದಸ್ಯರಿಂದ ನಿಯಮಾನುಸಾರ ನೇತ್ರದಾನಕ್ಕೆ ಒಪ್ಪಿಗೆ ಪಡೆದಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ವೈದ್ಯ ಸಿಬ್ಬಂದಿ ಸಕಾಲಕ್ಕೆ ಮಾಹಿತಿ ನೀಡಿದ್ದರಿಂದ ನೇತ್ರಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಬೆಂಗಳೂರಿನ ನೇತ್ರ ಸಂಗ್ರಹಾಲಯಕ್ಕೆ ನೇತ್ರಗಳನ್ನು ಕಳುಹಿಸಲಾಗುವುದು ಎಂದರು. ಕಷ್ಟದಲ್ಲೂ ಇಂಥ ಔದಾರ್ಯ ಮೆರೆದ ಪಾಲಕರ ಆಕ್ರಂದನ ಮಾತ್ರ ಮುಗಿಲುಮುಟ್ಟಿತ್ತು. ಮಗನ ಸಾವಿನಲ್ಲೂ ಸಾರ್ಥಕತೆ ಕಂಡ ಕುಟುಂಬ ಸದಸ್ಯರು ಎಲ್ಲರಿಗೂ ಮಾದರಿ ಎನಿಸಿದ್ದಾರೆ.

ಮನೆಗೆ ಆಸರೆಯಾಗಬೇಕಿದ್ದ ಮಗನನ್ನು ಕಳೆದುಕೊಂಡಿದ್ದೇವೆ. ಅವನಂತೂ ಮರಳಿ ಬರುವುದಿಲ್ಲ. ಆದರೆ, ಅವನ ಕಣ್ಣುಗಳಾದರೂ ಬೇರೆಯವರ ಬಾಳಿಗೆ ಬೆಳಕು ನೀಡಲಿ ಎಂಬ ಕಾರಣಕ್ಕೆ ಇಂಥ ನಿರ್ಧಾರ ಕೈಗೊಂಡಿದ್ದೇವೆ. ನಾವೇ
ಸ್ವಇಚ್ಛೆಯಿಂದ ನೇತ್ರದಾನಕ್ಕೆ ಒಪ್ಪಿಗೆ ನೀಡಿದ್ದೇವೆ.
 ಶಿವರಾಜ್‌ ಕುಕನೂರು, ಮೃತನ ಸಹೋದರ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.