ರಾಜ್ಯ ಸರ್ಕಾರಿ ಶಾಲೆ ಮಕ್ಕಳ “ದಿನಚರಿ’ ಬದಲು 


Team Udayavani, Oct 27, 2018, 6:00 AM IST

3.jpg

ರಾಯಚೂರು: ಪ್ರತಿ ಹಂತದಲ್ಲೂ ಖಾಸಗಿ ಶಾಲೆಗಳಿಂದ ಪೈಪೋಟಿ ಎದುರಿಸುತ್ತಿರುವ ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸರ್ಕಾರ ಮತ್ತೂಂದು ಯೋಜನೆ ಪರಿಚಯಿಸಿದೆ. 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಡೈರಿ ವಿತರಿಸಲು ಮುಂದಾಗುವ ಮೂಲಕ ಕಲಿಕಾ ಪ್ರಗತಿಗೆ ಶ್ರಮಿಸುತ್ತಿದೆ. ಈಗಾಗಲೇ ಆಯಾ ಜಿಲ್ಲೆಗಳಿಗೆ ಡೈರಿಗಳನ್ನು ಸರಬರಾಜು ಮಾಡಿದ್ದು, ಇನ್ನೇನು ವಿದ್ಯಾರ್ಥಿಗಳಿಗೆ ವಿತರಿಸಬೇಕಿದೆ. ಖಾಸಗಿ ಶಾಲೆಗಳಲ್ಲಿ ಇಂಥ ಪದ್ಧಯಿತ್ತು. ಈಗ ಅದನ್ನು ಸರ್ಕಾರಿ ಶಾಲೆಗಳು ಅನುಸರಿಸುತ್ತಿವೆ. ಇದೊಂದು ಆಲ್‌ ಇನ್‌ ಒನ್‌ ಎನ್ನುವ ರೀತಿಯ ಡೈರಿಯಾಗಿದ್ದು, ಮಕ್ಕಳ ಜ್ಞಾನಾರ್ಜನೆಗೆ ಪೂರಕವಾದ ಡೈರಿ ಎನ್ನುತ್ತಾರೆ ಅಧಿಕಾರಿಗಳು.

ಏನಿದು ಯೋಜನೆ?: ವಿದ್ಯಾರ್ಥಿ ವಿವರದ ಜತೆಗೆ ಸಮಗ್ರ ಮಾಹಿತಿ ಒಳಗೊಂಡ 152 ಪುಟಗಳ ಡೈರಿ ಇದಾಗಿದೆ. ಮೊದಲ ಪುಟದಲ್ಲಿ ಶಾಲಾ ವೇಳಾಪಟ್ಟಿ, ವಿದ್ಯಾರ್ಥಿ ಹೆಸರು, ತಂದೆ ಹೆಸರು, ವಿದ್ಯಾರ್ಥಿ ವಿಳಾಸ, ರಕ್ತದ ಗುಂಪು, ಜಾತಿ, ಆಧಾರ್‌ ಸಂಖ್ಯೆ ಇರಲಿದೆ. ಡೈರಿ ನೋಡಿದರೆ ಆ ವಿದ್ಯಾರ್ಥಿಯ ಸಂಪೂರ್ಣ ವಿಳಾಸ ಗೊತ್ತಾಗುತ್ತದೆ. ಅದರ ಜತೆಗೆ ಶೈಕ್ಷಣಿಕ ವರ್ಷದಲ್ಲಿ ಕೈಗೊಂಡ ಚಟುವಟಿಕೆಗಳ ವಿವರ, ಆಯಾ ತಿಂಗಳಲ್ಲಿ ಬರುವ ಸರ್ಕಾರಿ ಆಚರಣೆಗಳು, ಜಯಂತಿಗಳ ವಿವರ ಇರಲಿದೆ. ಇನ್ನು ವಿದ್ಯಾರ್ಥಿಗಳಿಗೆ 
ಸರ್ಕಾರದಿಂದ ಸಿಗುವ ಸೌಲಭ್ಯಗಳೇನು, ಶಾಲೆ ಶಿಕ್ಷಕರ ಮಾಹಿತಿ, ಜತೆ ಅವರ ದೂರವಾಣಿ ಸಂಖ್ಯೆಗಳು ಉಲ್ಲೇಖವಾಗಿರುತ್ತದೆ. ಪರೀಕ್ಷಾ ವೇಳಾಪಟ್ಟಿ, ಪ್ರಾಜೆಕ್ಟ್ಗಳ ವಿವರಣೆ ಕೂಡ ಇರುತ್ತದೆ. 

ನೋಟಿಸ್‌ ಕೂಡ ಇಲ್ಲೇ: ಇಷ್ಟು ದಿನ ಪಾಲಕರಿಗೆ ಯಾವುದಾದರೂ ಮಾಹಿತಿ ನೀಡಬೇಕಾದರೆ ದೂರವಾಣಿ ಕರೆ ಮಾಡಿ ತಿಳಿಸಬೇಕಿತ್ತು. ಆದರೆ, ಇನ್ನು ಮುಂದೆ ಸೂಚನೆಗಳನ್ನು ಈ ಡೈರಿಯಲ್ಲೇ ಬರೆದು ಕಳುಹಿಸಲಾಗುತ್ತದೆ. ಅದಕ್ಕೆ ಪಾಲಕರು
ಉತ್ತರವನ್ನು ಕೂಡ ಡೈರಿಯಲ್ಲಿಯೇ ನೀಡಲು ಕಾಲಂ ನೀಡಲಾಗಿದೆ. ಮಗು ಶಾಲೆಗೆ ಗೈರಾದರೆ ಪಾಲಕರಿಂದ ಕಾರಣ ಉಲ್ಲೇಖೀಸಿ ಸಹಿ ಮಾಡಿ ಕಳುಹಿಸಬೇಕು. ಜ್ಞಾನಾರ್ಜನೆ ಆಗುವಂಥ ಅನೇಕ ವಿಚಾರಗಳಿವೆ. ಶಿಕ್ಷಣಕ್ಕೆ ಸಂಬಂಧಿಸಿದ ಹಲವು ನಾಣ್ಣುಡಿಗಳು, ಆರೋಗ್ಯ ಇಲಾಖೆ ಮಾತ್ರೆಗಳ ವಿವರ ಸೇರಿ ಸಾಕಷ್ಟು ವಿಚಾರಗಳಿವೆ. ಅದರ ಜತೆಗೆ ನನ್ನ ಮೇಲೆ ಪ್ರಭಾವ ಬೀರಿದ ವ್ಯಕ್ತಿ ಎಂಬ
ಅಂಕಣವಿದ್ದು, ಅದನ್ನು ವಿದ್ಯಾರ್ಥಿಗಳೇ ಭರ್ತಿ ಮಾಡಬೇಕಿದೆ. ಪ್ರತಿ ಹಳ್ಳಿಯಲ್ಲೂ ಖಾಸಗಿ ಶಾಲೆ ಹುಟ್ಟಿಕೊಂಡಿದ್ದು, ಸರ್ಕಾರಿ ಶಾಲೆಗಳ ಅಸ್ತಿತ್ವಕ್ಕೆ ಕುತ್ತು ತರುತ್ತಿದೆ. ಇಂಥ ವೇಳೆ ಖಾಸಗಿ ಶಾಲೆಗಳಿಗೆ ಎಲ್ಲ ವಿಧದಲ್ಲೂ ಪೈಪೋಟಿ ನೀಡುವ ಅನಿವಾರ್ಯತೆ ಮನಗಂಡ ಸರ್ಕಾರ ಖಾಸಗಿ ಶಾಲೆಗಳಲ್ಲಿ ಚಾಲ್ತಿಯಲ್ಲಿದ್ದ ಡೈರಿ ಪದ್ಧತಿ ಪರಿಚಯಿಸುತ್ತಿದೆ.

ಶಾಲೆಗಳ ಬಲವರ್ಧನೆ: ಸರ್ಕಾರಿ ಶಾಲೆಗಳಲ್ಲಿ ಎರಡು ಜತೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಬಿಸಿಯೂಟ, ಶೂ, ಹಾಲು, ವಿದ್ಯಾರ್ಥಿ ವೇತನ, ಪ್ರತಿಭಾವಂತರಿಗೆ ಲ್ಯಾಪ್‌ಟಾಪ್‌ ವಿತರಣೆ ಹೀಗೆ ಸಾಕಷ್ಟು ಸೌಲಭ್ಯ ನೀಡಲಾಗುತ್ತಿದೆ. ಆದರೂ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಲ್ಲಿ ಹಿಂದುಳಿಯುತ್ತಿವೆ. ಅದಕ್ಕೆ ಶಿಕ್ಷಕರ ಕೊರತೆ, ಕಟ್ಟಡಗಳ ಸಮಸ್ಯೆ ಸೇರಿ ಅನೇಕ ಕಾರಣಗಳಿವೆ. ಇಂಥ ಯೋಜನೆಗಳಿಂದಾದರೂ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕರೆ ತರುವ ಯತ್ನ ಮಾಡಲಾಗುತ್ತಿದೆ.

ಖಾಸಗಿ ಶಾಲೆಗಳಲ್ಲಿ ಈಗಾಗಲೇ ಪ್ರಚಲಿತದಲ್ಲಿದ್ದ ಯೋಜನೆಯನ್ನು ಸರ್ಕಾರಿ ಶಾಲೆಗಳಿಗೂ ವಿಸ್ತರಿಸಲಾಗಿದೆ. ಮಗುವಿನ ಕಲಿಕಾ ಪ್ರಗತಿ, ಜ್ಞಾನಾರ್ಜನೆ ಹಾಗೂ ಪಾರದರ್ಶಕ ಕಲಿಕೆಗೆ ಇದು ಸಹಕಾರಿ. ಡೈರಿಯಲ್ಲಿ ಸಾಕಷ್ಟು ಉತ್ತಮ ಅಂಶಗಳಿಗೆ. ಈಗಾಗಲೇ  ಅಗತ್ಯದಷ್ಟು ಡೈರಿ ಬಂದಿದ್ದು, ಶೀಘ್ರದಲ್ಲೇ ಶಾಲೆಗಳಿಗೆ ಕಳುಹಿಸಲಾಗುವುದು.
● ಚಂದ್ರಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ, ರಾಯಚೂರು

ಸಿದ್ದಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.