ಬೆಚ್ಚಿ ಬೀಳಿಸಿದ ಸರಣಿ ಮನೆಗಳ್ಳತನ


Team Udayavani, May 3, 2022, 5:57 PM IST

21theft

ರಾಯಚೂರು: ನಗರದಲ್ಲಿ ನೇತಾಜಿ ಠಾಣೆ ವ್ಯಾಪ್ತಿಯಲ್ಲಿ ಹಾಡಹಗಲೇ ಮೂರು ಮನೆಗಳ ಸರಣಿ ಕಳ್ಳತನ ನಡೆದಿದ್ದು, ನಗರವಾಸಿಗಳನ್ನು ಬೆಚ್ಚಿ ಬೀಳುವಂತೆ ಮಾಡಿದೆ.

ಬೇಸಿಗೆ ವೇಳೆ ಮನೆಯವರೆಲ್ಲ ಮೇಲೆ ಮಲಗುವುದರಿಂದ ಕಳವು ಪ್ರಕರಣಗಳು ನಡೆಯುವುದು ಸಾಮಾನ್ಯ. ಆದರೆ, ಹಗಲಲ್ಲೇ ಈ ರೀತಿ ನಡೆದಿರುವುದು ಪೊಲೀಸರಿಗೂ ಕಂಗೆಡಿಸಿದೆ.

ವಿವಿಧ ಬಡಾವಣೆಗಳಲ್ಲಿನ ಮನೆಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಗಾಜಗಾರಪೇಟೆ, ನೇತಾಜಿ ನಗರ ವ್ಯಾಪ್ತಿಯಲ್ಲಿ ಬರುವ ಮೂರು ಮನೆಗಳಲ್ಲಿ ಕಳವಾಗಿದೆ. ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿದ ಕಳ್ಳರು, ಬಾಗಿಲು ಮುರಿದು ಅಲಮಾರಿಗಳಲ್ಲಿದ್ದ ಚಿನ್ನಾಭರಣ, ಹಣವನ್ನು ಕದ್ದು ಪರಾರಿಯಾಗಿದ್ದಾರೆ.

ನೇತಾಜಿ ನಗರದ ನಿವಾಸಿ ಗೋಪಾಲಾಚಾರ್ಯ ಅವರ ಮನೆಯಲ್ಲಿಟ್ಟಿದ್ದ 80,000 ರೂ. ನಗದು 4 ತೊಲ ಬಂಗಾರ, 1 ಕೆಜಿ ಬೆಳ್ಳಿ ಕಳುವಾಗಿದೆ. ಅದೇ ರೀತಿ ಗಾಜಗಾರಪೇಟೆಯ ನಿವಾಸಿ ಅಂಬರೀಶ ಮನೆಗೆ ನುಗ್ಗಿರುವ ಕಳ್ಳರು ಬಟ್ಟೆಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಕೈಗೆ ಸಿಕ್ಕ ಚಿನ್ನಾಭರಣ ತೆಗೆದುಕೊಂಡು ಹೊಗಿದ್ದಾರೆ. ಹೀಗೆ ಇತರೆ ಮನೆಗಳಿಗೆ ನುಗ್ಗಿದ ಅಪರಿಚಿತ ಕಳ್ಳರು ಹಾಡುಹಗಲೇ ಕೈ ಚಳಕ ತೋರಿದ್ದಾರೆ.

ಈಚೆಗೆ ತಾಲೂಕಿನ ಗಾರಲದಿನ್ನಿಯಲ್ಲೂ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ನಗರದಲ್ಲಿ ಮೇಲಿಂದ ಮೇಲೆ ಇಂಥ ಘಟನೆಗಳು ನಡೆಯುತ್ತಿರುವುದು, ಅದರಲ್ಲೂ ಹಗಲಲ್ಲೇ ಕಳ್ಳತನ ನಡೆದಿರುವುದು ಸಾಕಷ್ಟು ಆತಂಕ ಸೃಷ್ಟಿಸಿದೆ.

ಒಬ್ಬನೇ ಮಾಡಿರುವ ಶಂಕೆ: ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಪೊಲೀಸರಿಗೆ ಪ್ರಾಥಮಿಕ ಮಾಹಿತಿಯಲ್ಲಿ ಈ ಕಳ್ಳತನಗಳನ್ನು ಒಬ್ಬನೇ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಳ್ಳತನ ನಡೆದ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದು, 25-30 ವರ್ಷದ ಯುವಕ ಅನುಮಾನಾಸ್ಪದವಾಗಿ ದೃಶ್ಯಗಳು ಸೆರೆಯಾಗಿವೆ. ಈ ರೀತಿ ಹಾಡಹಗಲಲ್ಲೇ ಕೃತ್ಯ ಎಸಗಿರುವುದನ್ನು ನೋಡಿದರೆ ಯುವಕ ಹಣದಾಹದಿಂದ ಈ ರೀತಿ ಮಾಡಿರುವ ಸಾಧ್ಯತೆಗಳಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ನೇತಾಜಿ ಠಾಣೆ ಪಿಎಸ್‌ಐ ಬಸವರಾಜ್‌ ನಾಯಕ ತಿಳಿಸಿದ್ದಾರೆ.

ನಗರದಲ್ಲಿ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಿಪೇರಿ ಹೆಸರಿನಲ್ಲಿ ಮನೆಗಳ ಮುಂದೆ ಬರುವ ಜನರಿಂದ ಎಚ್ಚರಿಕೆ ವಹಿಸುವಂತೆ ಪೊಲೀಸ್‌ ಇಲಾಖೆಯು ಜಾಗೃತಿ ಮೂಡಿಸಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.