ಮಳೆಗೆ ಗೋಡೆ ಕುಸಿದು ಮೂವರಿಗೆ ಗಾಯ
Team Udayavani, Aug 28, 2017, 12:59 PM IST
ರಾಯಚೂರು: ಜಿಲ್ಲೆಯ ವಿವಿಧೆಡೆ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಸಂತಸ ಮೂಡಿದರೆ ಕೆಲವೆಡೆ ಅನಾಹುತ ಸಂಭವಿಸಿವೆ. ನಗರದ ಸಿಯಾತಲಾಬ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರಿಗೆ ಗಾಯಗಳಾಗಿವೆ. ಪಕ್ಕದ ಮನೆಯ ಗೋಡೆ ಟಿನ್ ಶೆಡ್ ಗುಡಿಸಲಿನ ಮೇಲೆ ಬಿದ್ದಿದ್ದು, ಗುಡಿಸಲಿನಲ್ಲಿದ್ದ ಸೈದಾರೆಡ್ಡಿ (34), ನಾಗವೇಣಿ (26) ಹಾಗೂ ಸಂಸ್ಕೃತಿ (3) ಎಂಬ ಬಾಲಕಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ರಿಮ್ಸ್ಗೆ ದಾಖಲಿಸಲಾಗಿದೆ. ಗುಡಿಸಲಿನಲ್ಲಿ 10 ಜನ ಮಲಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಎರಡು ದಿನಗಳಿಂದ ಸುರಿದ ಜೋರು ಮಳೆ ರೈತರಲ್ಲಿ ತುಸು ನೆಮ್ಮದಿ ಮೂಡಿಸಿದೆ. ನಗರ ಸೇರಿ ಮಾನವಿ, ಸಿಂಧನೂರು, ದೇವದುರ್ಗ, ಲಿಂಗಸುಗೂರು ತಾಲೂಕಿನ ಹಲವೆಡೆ ಶುಕ್ರವಾರ, ಶನಿವಾರ ರಾತ್ರಿ ಜೋರು ಮಳೆಯಾಗಿದೆ. ನಗರದಲ್ಲಿ ಅತೀ ಹೆಚ್ಚು 53 ಮಿ.ಮೀ. ಮಳೆ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!