ಎದ್ದೇಳುತ್ತಿಲ್ಲ ಏಳು ಉದ್ಯಾನಗಳ ಕಾಮಗಾರಿ: ಅಂಗೈಯಲ್ಲೇ ಆಕಾಶ ತೋರಿಸಿದ ಲಾಲ್‌ಬಾಗ್‌ ಏಜೆನ್ಸಿ


Team Udayavani, Jul 25, 2022, 2:44 PM IST

13work-‘

ಸಿಂಧನೂರು:ಇತಿಹಾಸದಲ್ಲೇ ಮೊದಲ ಬಾರಿಗೆ ನಗರ ಯೋಜನಾ ಪ್ರಾಧಿಕಾರದಿಂದ ನಗರದ 7 ಉದ್ಯಾನಗಳನ್ನು ಅಭಿವೃದ್ಧಿ ಪಡಿಸಲು 1.99 ಕೋಟಿ ರೂ.ಗಳ ಯೋಜನೆ ಕೈಗೊಂಡು ವರ್ಷ ಗತಿಸಿದರೂ ಪ್ರಗತಿ ಸಾಧ್ಯವಾಗಿಲ್ಲ.

90 ದಿನಗಳ ಕಾಲಾವಕಾಶ ಟೆಂಡರ್‌ ಹಂಚಿಕೆಯಾಗಿದ್ದರೂ ಗುತ್ತಿಗೆ ವಹಿಸಿಕೊಂಡ ತೋಟಗಾರಿಕೆ ಇಲಾಖೆಯ ಅಂಗಸಂಸ್ಥೆ ದಿ|ನರ್ಸರಿಮೆನ್‌ ಕೋ ಆಪರೇಟಿವ್‌ ಸೊಸೈಟಿ ಲಿಮಿಟೆಡ್‌ ಲಾಲ್‌ಬಾಗ್‌ ಅಂಗೈನಲ್ಲೇ ಆಕಾಶ ತೋರಿಸಿದೆ. ಬಹುನಿರೀಕ್ಷಿತ ಯೋ ಜನೆಯನ್ನು 2021 ಮಾರ್ಚ್‌ 3ರಂದು ನಿರ್ವಹಿಸಲು ಕಾರ್ಯಾದೇಶ ಕೊಟ್ಟರೂ ಅನುಷ್ಠಾನಕ್ಕೆ ಬಂದಿಲ್ಲ.

ಫಿಪ್ಟಿ ಪರ್ಸೆಂಟ್ಹಣ ಡ್ರಾ: ಯೋಜನೆಗೆ ಸಂಬಂಧಿಸಿ 7 ಉದ್ಯಾನಗಳಿಗೆ ಪ್ರತ್ಯೇಕವಾಗಿ ಅಂದಾಜು ವೆಚ್ಚ ನಿಗದಿಪಡಿಸಲಾಗಿತ್ತು. ಕೆಲಸ ನಿರ್ವಹಿಸಲು ಕಾರ್ಯಾದೇಶ ಕೊಟ್ಟ ದಿನವೇ ಶೇ.50 ಮೊತ್ತ ಎಂದರೆ 98,36,279 ರೂ.ಗಳನ್ನು ಸಂಸ್ಥೆಗೆ ಪಾವತಿಸಲಾಗಿದೆ. ಕೆಲಸ ಆರಂಭಿಸುವುದಕ್ಕೆ ಸಿಕ್ಕ ಅನುದಾನ ಬಳಸಿ ಶೇ.50 ಕೆಲಸ ನಿರ್ವಹಿಸಬೇಕಾದ ಸಂಸ್ಥೆ ಕೈ ಕೊಟ್ಟಿದೆ. ಕೇವಲ 5 ಉದ್ಯಾನಗಳಲ್ಲಿ ಕಾಲಂ ಹಾಕಿ ಪಿಲ್ಲರ್‌ ಎಬ್ಬಿಸಲಾಗಿದೆ. ಕನಿಷ್ಠ ಉದ್ಯಾನದ ಜಾಗ ಕೂಡ ಸಮತಟ್ಟು ಮಾಡಿಲ್ಲ. ಆದರೆ ಮತ್ತೂಮ್ಮೆ ಇದೀಗ ಶೇ.30ಕಾಮಗಾರಿ ಎಂದ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ.

ಯೋಜನೆಗೆ ಭಾರಿ ಮಹತ್ವ: ಲಾಲ್‌ಬಾಗ್‌ ಮೂಲದ ಸಂಸ್ಥೆ ನೀಡಿದ ಅಂದಾಜು ನೀಲನಕ್ಷೆ ಉದ್ಯಾನವೊಂದರ ಸಂಪೂರ್ಣ ಆಕಾರ ರೂಪಿಸುವ ಯೋಜನೆ ಒಳಗೊಂಡಿದೆ. ಮೊದಲು ಉದ್ಯಾನ ಸಮತಟ್ಟು ಮಾಡುವುದು. ನಂತರ ಗೇಟ್‌ ಅಳವಡಿಕೆ, ಸುತ್ತಲೂ ಚೈನ್‌ ಮೆಸ್‌ ಅಳವಡಿಕೆ, ಗಿಡ ಹಾಕುವುದು, ವಾಕಿಂಗ್‌ ಟ್ರ್ಯಾಕ್‌ ನಿರ್ಮಾಣ, ಸೋಲಾರ್‌ ಲೈಟ್‌ ಅಳವಡಿಕೆ, ವಾಯು ವಿಹಾರಿಗಳಿಗೆ ಬೆಂಚ್‌ ಹಾಕುವುದು, ಮಕ್ಕಳಿಗೆ ಆಟಿಕೆ ಸಾಮಗ್ರಿ ಹಾಕುವುದನ್ನು ಈ ಅಂದಾಜು ಪಟ್ಟಿಯಲ್ಲಿ ಸೇರಿಸಲಾಗಿದೆ. ಅಚ್ಚರಿ ಎಂದರೆ ಪಿಲ್ಲರ್‌ ಹಾಕಿದ ವ್ಯಕ್ತಿಗಳು ವಾಪಸ್‌ ತಿರುಗಿಯೂ ನೋಡಿಲ್ಲ.

ನೋಟಿಸ್ಗಳ ಮೊರೆ: 1.99 ಕೋಟಿ ರೂ.ಗಳ ಉದ್ಯಾನ ಅಭಿವೃದ್ಧಿ ಯೋಜನೆ ಕೊಪ್ಪಳ ಸಂಸಧ ಸಂಗಣ್ಣ ಕರಡಿ, ಶಾಸಕ ವೆಂಕಟರಾವ್‌ ನಾಡಗೌಡ ಅವರ ಗಮನಕ್ಕೂ ಇದೆ. ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಇಟ್ಟ ಬಳಿಕ ಪಿಡಬ್ಲ್ಯೂಡಿ ಇಲಾಖೆಯಿಂದ ಆಗಿರುವ ಕೆಲಸದ ಅಂದಾಜು ಪ್ರತಿ ಪಡೆಯಲಾಗಿದೆ. ಎಇಇ ಸಿ.ಎಸ್‌. ಪಾಟೀಲ್‌ ಅವರು ದಾಸ್ತಾನು ಮಾಡಿಟ್ಟಿರುವ ಸಾಮಗ್ರಿ ಒಳಗೊಂಡು ಬಿಡುಗಡೆಯಾದ ಮೊತ್ತದಲ್ಲಿ ಶೇ.30 ಹಣ ಖರ್ಚಾಗಿದೆ ಎಂಬ ವರದಿ ಕೊಟ್ಟಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ನಗರ ಯೋಜನಾ ಪ್ರಾಧಿಕಾರ ಕಾರ್ಯದರ್ಶಿ 2021 ಅಕ್ಟೋಬರ್‌ 1 ರಂದು ಕಾಲಮಿತಿಯಲ್ಲಿ ಕೆಲಸ ಪೂರ್ಣಗೊಳಿಸಿಲ್ಲವೆಂದು ನೋಟಿಸ್‌ ಕೊಟ್ಟಿದ್ದಾರೆ. ನಂತರದಲ್ಲಿ ಪ್ರಾಧಿಕಾರದ ಎರಡು ನೋಟಿಸ್‌ ಜಾರಿಯಾಗಿವೆ. ನೋಟಿಸ್‌ ಮೇಲೆ ನೋಟಿಸ್‌ ಕೊಡುತ್ತಿರುವ ನಗರ ಯೋಜನಾ ಪ್ರಾಧಿಕಾರವೇ ಕಾಗದ ಪತ್ರದಲ್ಲಿ ತನ್ನ ಅಸ್ತಿತ್ವ ತೋರಲು ಆರಂಭಿಸಿದ್ದು, ಅಚ್ಚರಿಗೆ ಕಾರಣವಾಗಿದೆ.

ಕೆಲಸಕ್ಕೂಅನುದಾನಕ್ಕೂ ತಾಳೆಯಿಲ್ಲ

ನಗರ ಯೋಜನಾ ಪ್ರಾಧಿಕಾರದಿಂದ ಅನುದಾನ ಪಡೆದಿರುವ ಏಜೆನ್ಸಿ ಇದುವರೆಗೆ ಶೇ.30 ಹಣ ಖರ್ಚು ಮಾಡಿಲ್ಲ ಎಂದು ಅಂದಾಜಿಸಲಾಗಿದೆ. ಆದರೆ ಶೇ.50 ಹಣ ಕೊಡಲಾಗಿದೆ. ಗುತ್ತಿಗೆ ವಹಿಸಿಕೊಂಡು ಮುಂದಿನ ಕೆಲಸ ಮಾಡಲು ಶೇ.30 ಅಂದರೆ, 59 ಲಕ್ಷ ರೂ. ಅನುದಾನ ಕೊಡುವಂತೆ ಬೇಡಿಕೆ ಮಂಡಿಸಿದೆ. ಪ್ರಾಧಿಕಾರದವರು ಕೆಲಸ ಆಗಿಲ್ಲವೆಂದು ಗೋಳಿಡುತ್ತಿದ್ದರೆ, ಏಜೆನ್ಸಿ ಮಾತ್ರ ಹಣ ಕೊಟ್ಟು ಪುಣ್ಯ ಕಟ್ಟಿಕೊಳ್ಳಿ ಎನ್ನುವ ಮನವಿ ಮಾಡುತ್ತಿದೆ.

ನಗರದಲ್ಲಿ 7 ಉದ್ಯಾನಗಳ ಅಭಿವೃದ್ಧಿಗೆ ಸಂಬಂಧಿಸಿ ನಾನು ಬರುವ ಮುನ್ನವೇ ಒಂದು ನೋಟಿಸ್‌ ಕೊಟ್ಟಿದ್ದಾರೆ. ನಿಯಮದ ಪ್ರಕಾರ ಮತ್ತೆ 2 ನೋಟಿಸ್‌ ಜಾರಿಯಾಗಿವೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಮಧ್ವರಾಜ್ಆಚಾರ್‌, ಅಧ್ಯಕ್ಷರು, ನಗರ ಯೋಜನಾ ಪ್ರಾಧಿಕಾರ, ಸಿಂಧನೂರು

ನನಗೆ ಗೊತ್ತಿರುವ ಹಾಗೆ ನಿಗದಿತ 90 ದಿನಗಳಲ್ಲಿ ಅವರು 7 ಉದ್ಯಾನಗಳನ್ನು ಅಭಿವೃದ್ಧಿ ಪಡಿಸಬೇಕಿತ್ತು. ಒಪ್ಪಂದದ ಪ್ರಕಾರ ನಡೆದುಕೊಳ್ಳದ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದ್ದು, ಇಲಾಖೆ ಸೂಚನೆ ಪ್ರಕಾರ ಮುಂದಿನ ಕ್ರಮ ಅನಿವಾರ್ಯ. ಶರಣಪ್ಪ, ಸದಸ್ಯ ಕಾರ್ಯದರ್ಶಿಗಳು, ನಗರ ಯೋಜನಾ ಪ್ರಾಧಿಕಾರ, ಸಿಂಧನೂರು

-ಯಮನಪ್ಪ ಪವಾರ

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.