ಕೊತದೊಡ್ಡಿ ಗ್ರಾಮಕ್ಕೆ ಪಿಡಿಒ ಇಲ್ಲ; ಪ್ರಗತಿ ಕುಂಠಿತ
Team Udayavani, Sep 9, 2022, 6:09 PM IST
ದೇವದುರ್ಗ: ಕಳೆದ ಎರಡು ತಿಂಗಳಿಂದ ಕೊತ್ತದೊಡ್ಡಿ ಗ್ರಾಪಂಗೆ ಅಭಿವೃದ್ಧಿ ಅಧಿಕಾರಿ ಇಲ್ಲದ ಕಾರಣ ಹಲವು ಸಮಸ್ಯೆಗಳು ಉಲ್ಬಣಗೊಂಡಿವೆ. ತಾಪಂ, ಗ್ರಾಪಂ ಅಧಿಕಾರಿಗಳ ಮಧ್ಯೆಯೇ ಸಮನ್ವಯ ಕೊರತೆ ಹಿನ್ನೆಲೆ ಹಳ್ಳಿಗಳ ಗ್ರಾಮಸ್ಥರು ಸಮಸ್ಯೆ ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ.
ಕೊತ್ತದೊಡ್ಡಿ ಗ್ರಾಪಂಗೆ ಹನ್ನೇರಡಕ್ಕೂ ಅಧಿಕ ಹಳ್ಳಿಗಳ ಬರುತ್ತಿವೆ. ಒಂದೊಂದು ಹಳ್ಳಿಗಳಲ್ಲಿ ಒಂದೊಂದು ಸಮಸ್ಯೆ ಇವೆ. ಹೆಚ್ಚು ಮಳೆಯಿಂದ ಸೊಳ್ಳೆಗಳ ಕಾಟ ವಿಪರೀತಗೊಂಡಿದೆ. ಫಾಗಿಂಗ್ ವ್ಯವಸ್ಥೆ ಮಾಡಿಲ್ಲ. ಅಧಿಕಾರಿಗಳು ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುವಂತಾಗಿದೆ. ಸಾಂಕ್ರಮಿಕ ರೋಗಗಳ ಭೀತಿಯಿಂದ ಜನರು ತತ್ತರಿಸಿದ್ದಾರೆ.
ಕೊತ್ತದೊಡ್ಡಿ ಸೇರಿ ಇತರೆ ಹಳ್ಳಿಗಳಲ್ಲಿ ಚರಂಡಿ ನೀರು ರಸ್ತೆಗೆ ಹರಿಯುತ್ತಿರುವ ಹಿನ್ನೆಲೆ ಗ್ರಾಮಸ್ಥರ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ಕೆಲ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಕಾಮಗಾರಿ ಪ್ರಗತಿಯಲ್ಲಿದೆ.
ಹೊನ್ನಕಾಟಮಳ್ಳಿ, ಹೇಮನೂರು, ಮಲ್ಲಿನಾಯಕದೊಡ್ಡಿ, ಕರಡೋಣ ಮಲಕಂದಿನ್ನಿ, ಯಲದೊಡ್ಡಿ, ಲಿಂಗನದೊಡ್ಡಿ, ಖಾಚಪುರ ಸೇರಿ ಇತರೆ ಗ್ರಾಮಗಳು ಕಳೆದ ಎರಡು ತಿಂಗಳಿಂದ ಹಲವು ಸಮಸ್ಯೆಗಳು ಎದುರಿಸುತ್ತಿವೆ. ಗ್ರಾಪಂ 13 ಮತ್ತು 14ನೇ ಹಣಕಾಸು ಯೋಜನೆಯಡಿ ಹಲವು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಯೋಜನೆಯೂ ಆಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ