ಕಾಮಗಾರಿ ಬಿಲ್ ಪಾವತಿ ವಿಳಂಬ ಬೇಡ
ಇದೇ ಸ್ಥಿತಿ ಮುಂದುವರಿದಲ್ಲಿ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಬೇಕು.
Team Udayavani, Jan 18, 2021, 6:44 PM IST
ರಾಯಚೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಜಿಲ್ಲೆಯಲ್ಲಿ ಕೈಗೊಂಡ 122 ಕಾಮಗಾರಿಗಳು ಮುಗಿದಿದ್ದರೂ ಅವುಗಳ ಆರ್ಥಿಕ ಪ್ರಗತಿ ಸಾ ಧಿಸಿರುವುದಿಲ್ಲ. ಕೂಡಲೇ ಬಿಲ್ ಪಾವತಿಗೆ ಕ್ರಮ ವಹಿಸುವಂತೆ ಜಿಲ್ಲಾ ಧಿಕಾರಿ ಆರ್. ವೆಂಕಟೇಶಕುಮಾರ್ ಸೂಚಿಸಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳ ವ್ಯಾಪ್ತಿಯಡಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿ ಯೊಳಗೆ ಮುಗಿಸುವುದಲ್ಲದೇ ಭೌತಿಕ ಹಾಗೂ ಆರ್ಥಿಕ ಪ್ರಗತಿ ಮಾಹಿತಿ ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು. ಕಾಮಗಾರಿ ಮುಗಿದ ಕೂಡಲೇ ವಿಳಂಬ ಮಾಡದೇ ಬಿಲ್ ಪಾವತಿಸಿ ಸಂಬಂ ಧಿಸಿದವರಿಗೆ ಕಾಮಗಾರಿ ಹಸ್ತಾಂತರಿಸಬೇಕು ಎಂದರು.
ಕೆಕೆಆರ್ಡಿಬಿ ಅನುದಾನದಡಿ ಈವರೆಗೆ ಜಿಲ್ಲೆಯಲ್ಲಿ ಆಗಿರುವ ಕಾಮಗಾರಿಗಳ ಪ್ರಗತಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಲಬುರಗಿ ಪ್ರಾದೇಶಿಕ ಆಯುಕ್ತರು ಪರಿಶೀಲನೆ ನಡೆಸಿ, ಕಾಮಗಾರಿಗಳ ನಿಗಾ ವಹಿಸುವರು. ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕೆಕೆಆರ್ಡಿಬಿಯಡಿ ಅನುದಾನದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾಮಗಾರಿ ನಿರ್ವಹಿಸುತ್ತಿರುವುದು ಲೋಕೋಪಯೋಗಿ ಇಲಾಖೆ, ಕಳೆದೆರಡು ತಿಂಗಳಿಂದ ಕಾಮಗಾರಿಗಳು ಕುಂಠಿತವಾಗಿವೆ. ಕೂಡಲೇ ಅವುಗಳನ್ನು ಮುಗಿಸಬೇಕು ಎಂದರು.
ಮಾನವಿ ತಾಲೂಕಿನಲ್ಲಿ ಕಾಮಗಾರಿಗಳು ತೀರ ಕುಂಠಿತಗೊಂಡಿವೆ. ಅಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉತ್ತಮವಾಗಿ ಕೆಲಸ ಮಾಡುತ್ತಿಲ್ಲ. ಇದೇ ಸ್ಥಿತಿ ಮುಂದುವರಿದಲ್ಲಿ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಬೇಕು. ಜಿಲ್ಲೆಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ 2020-21ನೇ ಸಾಲಿನಲ್ಲಿ ಅನುಷ್ಠಾನಗೊಳಿಸಬೇಕಾದ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋ ದನೆ ನೀಡಿದ್ದು, ಆಡಳಿತಾತ್ಮಕ ಮಂಜೂರಾತಿಗಾಗಿ ಜಿಲ್ಲಾ ಧಿಕಾರಿಗಳು ಹಾಗೂ ಜಿಪಂ ಸಿಇಒ ಅವರಿಗೆ ಸಲ್ಲಿಸುವಂತೆ ಇಇ ಗಣಪತಿ ಸಾಕರೆ ಅವರಿಗೆ ತಿಳಿಸಿದರು.
ಕಳೆದೆರಡು ತಿಂಗಳಿಂದ ಕೆಆರ್ಐಡಿಎಲ್ ಯಿಂದ ನಿರ್ವಹಿಸುವ ಕಾಮಗಾರಿಗಳ ಪ್ರಗತಿ ಕಡಿಮೆಯಾಗಿದ್ದು, ಕೂಡಲೇ ಅದನ್ನು ಕೈಗೊಳ್ಳಬೇಕು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ವಹಣೆ ಕಾರ್ಯ ಮುಗಿಸಿ, ಅನುದಾನ ಖರ್ಚು ಮಾಡುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ ತ್ಯಾಗಿ ತುಕಾರಾಂ ಅವರಿಗೆ ಹೇಳಿದರು.
ಕ್ಯಾಷುಟೆಕ್ನಿಂದ ಪ್ರಗತಿ ಸಾಧಿ ಸಲಾಗುತ್ತಿದೆ. ಕಳೆದ ಡಿಸೆಂಬರ್ನಲ್ಲಿ ಅಲ್ಪ ಕುಸಿದಿದ್ದು, ಅದನ್ನು ಈ ತಿಂಗಳಲ್ಲಿ ಸರಿದೂಗಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿ ಶರಣಪ್ಪ ಪಟ್ಟೇದ್ ಅವರಿಗೆ ತಿಳಿಸಿದರು. ಈ ವೇಳೆ ಎಡಿಸಿ ಕೆ.ಎಚ್. ದುರುಗೇಶ್, ಜಿಪಂ ಮುಖ್ಯ ಯೋಜನಾಧಿಕಾರಿ ಡಾ| ಟಿ. ರೋಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ರಾಮಕೃಷ್ಣ, ರಿಮ್ಸ್ ನಿರ್ದೇಶಕ ಡಾ| ಬಸವರಾಜ ಪೀರಾಪುರೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ