ಮಾಡದ ಕೆಲಸಕ್ಕೆ ಪೋಸು ಸರಿಯಲ್ಲ


Team Udayavani, Sep 3, 2022, 5:47 PM IST

16-problem

ಮಸ್ಕಿ: ವೆಂಕಟಾಪುರ ಮಾರ್ಗದ ಸೇತುವೆ ಕುಸಿದ ವೇಳೆ ಗ್ರಾಮಸ್ಥರೆಲ್ಲ ಸೇರಿಕೊಂಡು ತಾತ್ಕಾಲಿಕ ದುರಸ್ತಿ ಮಾಡಿದ್ದೇವೆ. ಆದರೆ, ಶಾಸಕರ ಸಹೋದರ ಆರ್‌.ಸಿದ್ದನಗೌಡ ತುರುವಿಹಾಳ ಈ ಕೆಲಸ ತಾವೇ ಮಾಡಿರುವುದಾಗಿ ಪೋಜು ಕೊಡುತ್ತಿದ್ದಾರೆ ಎಂದು ತಾಪಂ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ ಆರೋಪಿಸಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸತತ ಮಳೆಯಿಂದಾಗಿ ಇತ್ತೀಚೆಗೆ ವೆಂಕಟಾಪುರ ರಸ್ತೆ ಸೇತುವೆ ಸಂಪೂರ್ಣ ಕಿತ್ತುಹೋಗಿತ್ತು. ಗ್ರಾಮಸ್ಥರೆಲ್ಲರೂ ಬೆಳಗ್ಗೆ 6ಗಂಟೆಯಿಂದಲೇ ಸ್ಥಳದಲ್ಲಿ ಮೊಕ್ಕಂ ಹೂಡಿ ಸಾರ್ವಜನಿಕರು, ಮಕ್ಕಳನ್ನು ಹರಿವ ಹಳ್ಳದಲ್ಲಿಯೇ ದಾಟಿಸಿದ್ದೇವೆ. ವಿಷಯ ಗೊತ್ತಾದರೂ ಶಾಸಕ ಬಸನಗೌಡ ತುರುವಿಹಾಳ ಸ್ಥಳಕ್ಕೆ ಬಂದು ಸಮಸ್ಯೆ ಕೇಳುವ ಸೌಜನ್ಯ ತೋರಲಿಲ್ಲ. ಅವರ ಸಹೋದರ ಸಿದ್ದನಗೌಡ ಶಾಸಕರ ಕಚೇರಿಗೆ ಬಂದು ದೂರು ನೀಡಿದರೆ ಸಮಸ್ಯೆ ಪರಿಹರಿಸುತ್ತಿದ್ದೇವು. ಅದರ ಬದಲಾಗಿ ನೀವೇ ರಿಪೇರಿ ಏಕೆ ಮಾಡಿಕೊಂಡಿರಿ? ಎಂದು ಗೂಂಡಾ ವರ್ತನೆ ಪ್ರದರ್ಶನ ಮಾಡುತ್ತಿದ್ದಾರೆ. ಗ್ರಾಮಸ್ಥರು ಮಾಡಿದ ಕೆಲಸವನ್ನು ತಾವೇ ಸ್ವಂತ ಖರ್ಚಿನಲ್ಲಿ ಮಾಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ, ವಿಡಿಯೋ ಬಿಟ್ಟು ಪ್ರಚಾರ ಪಡೆಯುತ್ತಿದ್ದಾರೆ. ಇದನ್ನು ಪ್ರಶ್ನಿಸಿದವರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದರು.

ಅಣ್ಣ ಮೌನ, ತಮ್ಮ ದೌರ್ಜನ್ಯ: ಮೊದಲು ಆರ್‌. ಬಸನಗೌಡ ತುರುವಿಹಾಳ ಯಾರು? ಎನ್ನುವುದು ಕ್ಷೇತ್ರದ ಜನರಿಗೆ ಗೊತ್ತಿರಲಿಲ್ಲ. ನಾನು ಸೇರಿ ಕೆಲವು ನಿಷ್ಠಾವಂತ ಕಾರ್ಯಕರ್ತರು ಅವರನ್ನು ಕ್ಷೇತ್ರಕ್ಕೆ ಪರಿಚಯ ಮಾಡಿಸಿದೆವು. ಬಿಜೆಪಿಯಲ್ಲಿ ಇರುವಾಗ 2018ರ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಎಲ್ಲ ಹಂತದ ಲೀಡರ್‌ಗಳ ಕಾಲು ಮುಗಿದು ಟಿಕೆಟ್‌ ಕೊಡಿಸಿದೆವು. ಮಸ್ಕಿಯಲ್ಲಿ ಕೂಡಲು ಜಾಗವಿಲ್ಲದಾಗ ಹೂವಿನಬಾವಿ ವಿಜಯಣ್ಣ ಅವರ ಅಂಗಡಿಯಲ್ಲೇ ಕೂಡಿಸಿ, ಕಾರ್ಯಕರ್ತರನ್ನು ಸಂಘಟಿಸಿದ್ದೇವೆ. ಉಪಚುನಾವಣೆಯಲ್ಲಿ ಅವರಿವರ ಕಾಲು ಬಿದ್ದು ವೋಟ್‌ ಹಾಕಿ ಗೆಲ್ಲಿಸಿದ್ದೇವೆ. ಆದರೆ ಈಗ ಗೆದ್ದ ಬಳಿಕ ಸರ್ವಾಧಿಕಾರಿಗಳಾಗಿದ್ದಾರೆ. ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ ಎಂದು ಶಿವಣ್ಣ ನಾಯಕ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.