ಆರ್ಟಿಇ ಕಾಯ್ದೆ ತಿದ್ದುಪಡಿಗೆ ಚಿಂತನೆ: ಸಚಿವ ತನ್ವೀರ್ ಸೇಠ್
Team Udayavani, Sep 18, 2017, 7:35 AM IST
ರಾಯಚೂರು: “ಆರ್ಟಿಇ ಕಾಯ್ದೆಯಿಂದ ಸರ್ಕಾರಕ್ಕೆ ಸಾಕಷ್ಟು ಹೊರೆಯಾಗುತ್ತಿದ್ದು, ಕಾಯ್ದೆಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ’ ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಆರ್ಟಿಇ ಅಡಿ ಪ್ರವೇಶಾತಿ ಕಲ್ಪಿಸಲಾಗಿತ್ತು. ನಾವು ಖಾಸಗಿ ಶಾಲೆಗಳಿಗೆ ಹೆಚ್ಚು ಒತ್ತು ನೀಡಿದ್ದೆವು. ಆದರೆ, ಇಂಥ ಶಾಲೆಗಳ ಸಂಖ್ಯೆ 5 ಸಾವಿರ ದಾಟಿದ್ದು, ಸರ್ಕಾರಕ್ಕೆ ಹೊರೆ ಹೆಚ್ಚಾಗಿದೆ. ನಾವೇ ಹಣ ನೀಡಿ ಖಾಸಗಿ ಶಾಲೆಗಳ ಬಲವರ್ಧನೆ ಮಾಡುವಂತಾಗಿದೆ.
ಇದರಿಂದ ಸರ್ಕಾರಿ, ಅನುದಾನಿತ ಶಾಲೆಗಳು ಸಮಸ್ಯೆ ಎದುರಿಸುತ್ತಿವೆ’ ಎಂದರು. “ಸರ್ಕಾರಿ ಶಾಲೆಗಳ ಸಬಲೀಕರಣದ ಉದ್ದೇಶದಿಂದ ಆರ್ಟಿಇ ಕಾಯ್ದೆ ತಿದ್ದುಪಡಿಗೆ ಚಿಂತನೆ ನಡೆಸಲಾಗುತ್ತಿದೆ. ಆರ್ಟಿಇ ಅಡಿ ಖಾಸಗಿ ಶಾಲೆಗಳಿಗೆ ಪ್ರವೇಶಾತಿ ಪಡೆದ ಮಕ್ಕಳಿಂದ ಹೆಚ್ಚುವರಿ ಶುಲ್ಕ ಪಡೆಯುವುದು, ಮಕ್ಕಳಲ್ಲಿ ತಾರತಮ್ಯ ಮಾಡುವಂಥ ಸಂಗತಿಗಳು ಗಮನಕ್ಕೆ ಬಂದಿವೆ. ಕೆಲವೆಡೆ ಆರ್ಟಿಇ ಸೀಟು ಹೆಚ್ಚಿಸಬೇಕೆಂಬ ಒತ್ತಾಯ ಬಂದರೆ, ಕೆಲವೆಡೆ ಈ ಪದ್ಧತಿ ನಿಷೇ ಧಿಸುವಂತೆ ಒತ್ತಾಯ ಕೇಳಿ ಬಂದಿದೆ. ಈ ನಿಟ್ಟಿನಲ್ಲಿ ಮರುಚಿಂತನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ