ಮೂರು ವರ್ಷ ಅಲೆದರೂ ಸಿಕ್ಕಿಲ್ಲ ಬಾಂಡ್‌


Team Udayavani, Nov 12, 2019, 3:00 PM IST

rc-tdy-2

ದೇವದುರ್ಗ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯೋ ವಲಯ ಮೇಲ್ವಿಚಾರಕಿ ಅಂಗನವಾಡಿ ಕಾರ್ಯಕರ್ತೆಯ ನಿರ್ಲಕ್ಷವೋ ಗೊತ್ತಿಲ್ಲ. ಪಟ್ಟಣದ ಫಲಾನುಭವಿಯೊಬ್ಬರು ಕಳೆದ ಮೂರು ವರ್ಷಗಳಿಂದ ಭಾಗ್ಯಲಕ್ಷ್ಮೀ ಬಾಂಡ್‌ ಗಾಗಿ ಕಚೇರಿಗೆ ಅಲೆಯುತ್ತಿದ್ದಾರೆ.

ಪಟ್ಟಣದ ನೇತಾಜಿ ವಾರ್ಡ್‌ನ ನಾಜಿಯಾ ಆಲ್‌ ತಾಫ್‌ ಹುಸೇನ್‌ ಎನ್ನುವವರೇ ಭಾಗ್ಯ ಲಕ್ಷ್ಮೀ ಬಾಂಡ್‌ ಗಾಗಿ ಅಲೆಯುತ್ತಿರುವ ಫಲಾನುಭವಿ. 2016 ಮಾರ್ಚ್‌ ತಿಂಗಳಲ್ಲಿ ವಿಮಾ ಕಂಪನಿಯಿಂದ ಮಂಜೂರಿಯಾಗಿ ಇಲಾಖೆಗೆ ಬಂದಿದೆ. ಪಟ್ಟಣದ ಎ.ವಲಯ ಮೇಲ್ವಿಚಾರಕಿ ಸಂಬಂಧಪಟ್ಟ ಕಾರ್ಯಕರ್ತೆಗೆ ಇಲಾಖೆಯಿಂದ ಭಾಗ್ಯ ಲಕ್ಷ್ಮೀ ಬಾಂಡ್‌ ವಿತರಿಸಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ. ಆದರೆ ಕೈಗೆ ಬಾರದೇ ಹಿನ್ನೆಲೆ ಫಲಾನುಭವಿ ಕಳೆದ ಮೂರು ವರ್ಷಗಳಿಂದ ಕಚೇರಿಗೆ ಅಲೆಯುವುದು ತಪ್ಪಿಲ್ಲ.

ಆರೇಳು ತಿಂಗಳಗೊಮ್ಮೆ ಅಧಿಕಾರಿಗಳು ವರ್ಗಾವಣೆ ಆಗುತ್ತಿರುವುದ್ದರಿಂದ ನೊಂದ ಫಲಾನುಭವಿ ಸಮಸ್ಯೆ ಕೇಳ್ಳೋವವರೇ ಇಲ್ಲದಾಗಿದೆ. ಸರಕಾರ ಸೌಲಭ್ಯ ಪಡೆದ ಭಾಗ್ಯ ಲಕ್ಷ್ಮೀ ಬಾಂಡ್‌ ಯಾವುದೇ ಕಾರಣಕ್ಕೂ ಫಲಾನುಭವಿಗಳು ಕಳೆಯದಂತೆ ನೋಡಿಕೊಳ್ಳಬೇಕು ಎಂದು ಅರ್ಜಿಯಲ್ಲಿ ನಮೂದಿಸಲಾಗಿದೆ. ಆದರೆ ಫಲಾನುಭವಿ ಕೈಗೆ ಸೇರದ ಮೊದಲೇ ಬಾಂಡ್‌ ಕಳೆದು ಹೋಗಿದೆ ಎಂಬುವುದು ಇದೀಗ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಒಬ್ಬರೂ ಒಂದೊಂದು ಹೇಳಿ ಕಳೆದ ಮೂರು ವರ್ಷಗಳಿಂದ ಫಲಾನುಭವಿಯನ್ನು ಕಚೇರಿಗೆ ಅಲೆದಾಡುಸುತ್ತಿದ್ದಾರೆ. ಕೆಲಸ ಕಾರ್ಯ ಬಿಟ್ಟು ನಿತ್ಯ ಕಚೇರಿಗೆ ಅಲೆಯುವ ಫಲಾನುಭವಿಗೆ ಸೂಕ್ತ ಪರಿಹಾರ ಒದಗಿಸಲು ಇಲ್ಲಿನ ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದಾರೆ ಎಂಬ ಆರೋಪಗಳು ಸಹ ಕೇಳಿ ಬಂದಿವೆ.

ಭಾಗ್ಯ ಲಕ್ಷ್ಮೀ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯಲು ನಾಜಿಯಾ ಎಂಬ ಫಲಾನುಭವಿ 13:10:2015ರಲ್ಲೇ ಅರ್ಜಿ ಸಲ್ಲಿಸಿದರು. 2016 ಮಾರ್ಚ್‌ಗಳಲ್ಲಿ ಮಂಜೂರಿಯಾಗಿ ಬ್ಯಾಂಡ್‌ ಇಲಾಖೆಗೆ ಪೂರೈಸಲಾಗಿದೆ. ಆದರೆ ಇಲ್ಲಿವರೆಗೆ ಫಲಾನುಭವಿ ಕೈಗೆ ಭಾಗ್ಯ ಲಕ್ಷ್ಮೀ ಬಾಂಡ್‌ ಬಾರದೇ ಇರುವುದರಿಂದ ಬೇಸತ್ತಿದ್ದಾರೆ. 1:8:2008 ನಂತರ ಜನಿಸಿದ ಹೆಣ್ಣು ಮಗುವಿಗೆ 18 ವರ್ಷದವರೆಗೆ 1ಲಕ್ಷ ರೂ. ನೀಡಲಾಗುತ್ತದೆ. ಅದರಲ್ಲಿ ತಂದೆ ಮೃತ ಪಟ್ಟರೆ ವಿಮಾ ಕಂಪನಿಯಿಂದ ಪರಿಹಾರ ನೀಡಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಬಿಎಸ್‌. ಯಡಿಯೂರಪ್ಪ ಅವರ ಅವಧಿಯಲ್ಲಿ ಇಂತಹ ಯೋಜನೆ ಜಾರಿಗೆ ತರಲಾಗಿತು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಮೇಲ್ವಿಚಾರಕಿ ಹಾಗೂ ಅಂಗನವಾಡಿ ಕಾರ್ಯಕರ್ತೆಯ ಎಡವಟ್ಟಿನಿಂದ ಕಳೆದ ಮೂರು ವರ್ಷಗಳಿಂದ ಭಾಗ್ಯ ಲಕ್ಷ್ಮೀ  ಬಾಂಡ್‌ಗಾಗಿ ಫಲಾನುಭವಿ ನಾಜಿಯಾ ಕಚೇರಿಗೆ ಅಲೆಯುತ್ತಿದ್ದಾರೆ. ಆದರೆ ಇಲ್ಲಿವರೆಗೆ ಅಧಿಕಾರಿಗಳಿಂದ ಯಾವುದೇ ಸ್ಪಷ್ಟತೆ ಉತ್ತರ ಬಾರದೇ ಇರುವುದರಿಂದ ಬೇಸತ್ತಿದ್ದಾರೆ. ತಪ್ಪಿನಿಂದ ಜಾರಿಕೊಳ್ಳಲು ಫಲಾನುಭವಿಗೆ ಅಧಿಕಾರಿಗಳು ದಿನಕ್ಕೊಂದು ನೆಪ ಹೇಳುತ್ತಲೇ ಕಾಲಹರಣ ಮಾಡುತ್ತಿದ್ದಾರೆ. ಹೀಗಾಗಿ ನಾಜಿಯಾ ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳುವಂತೆ ಈಗಾಗಲೇ ಅಧಿಕಾರಿಗಳಿಗೂ ಮನವಿ ಮಾಡಿದ್ದಾರೆ.

ಪಟ್ಟಣ ಸೇರಿ ತಾಲೂಕಿನ್ಯಾದಂತ ಇಂತಹ ಪ್ರಕರಣಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಇಲಾಖೆಯ ಮೇಲಾಧಿಕಾರಿಗಳು ಸೂಕ್ತ ರೀತಿಯಲ್ಲಿ ತನಿಖೆ ಕೈಗೊಂಡಾಗ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮೂರು ವರ್ಷಗಳಿಂದ ಸತಾಯಿಸುತ್ತಿರುವ ಮೇಲ್ವಿಚಾರಕಿ ಅಂಗನವಾಡಿ ಕಾರ್ಯಕರ್ತೆ ವಿರುದ್ಧ ಕ್ರಮಕೈಗೊಳ್ಳಬೇಕು. ನೊಂದ ಫಲಾನುಭವಿಗೆ ಭಾಗ್ಯ ಲಕ್ಷ್ಮೀ ಬಾಂಡ್‌ ನೀಡಬೇಕು ಎಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಎಂ.ಡಿ. ಅಯೂಬ್‌ ಆಗ್ರಹಿಸಿದ್ದಾರೆ.

ಭಾಗ್ಯ ಲಕ್ಷ್ಮೀ ಬಾಂಡ್‌ಗಾಗಿ ಕಳೆದ ಮೂರು ವರ್ಷಗಳಿಂದ ಕಚೇರಿಗೆ ಅಲೆದು ಬೇಸತ್ತಿದ್ದೇನೆ. ಅವರ ವಿರುದ್ಧ ಕ್ರಮಕೈಗೊಳ್ಳಲು ಅಧಿಕಾರಿಗೆ ಮನವಿ ನೀಡಲಾಗಿದೆ. ಬಾಂಡ್‌ ಕಳೆದು ಹೋಗಿದೆ ಎಂದು ಹೇಳಲಾಗುತ್ತಿದೆ.-ನಾಜಿಯಾ, ನೊಂದ ಫಲಾನುಭವಿ

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.