ಕಾಂಗ್ರೆಸ್‌ಗೆ ಚಲ್ಲಾಟ; ಸಾರ್ವಜಕರಿಗೆ ಸಂಕಟ!

ಎಲ್ಲರೂ ಕಾರುಗಳನ್ನು ತಂದಿದ್ದರಿಂದ ರಸ್ತೆಯಲ್ಲಿ ಕೆಲಕಾಲ ಓಡಾಡುವುದು ಕಷ್ಟ ಎನ್ನುವಂತಾಗಿತ್ತು.

Team Udayavani, Aug 18, 2021, 6:15 PM IST

Congress

ರಾಯಚೂರು: ನಗರದ ಹೃದಯ ಭಾಗದ ಸಭಾಂಗಣದಲ್ಲಿ ಕಾಂಗ್ರೆಸ್‌ನ ವಿಭಾಗ ಮಟ್ಟದ ಸಮಾವೇಶ ನಡೆಸಿದ್ದರಿಂದ ಕಾಂಗ್ರೆಸ್‌ಗೆ ಚಲ್ಲಾಟ ಸಾರ್ವಜನಿರಕಗೆ ಸಂಕಟ ಎನ್ನುವಂತಾಗಿತ್ತು. ಟ್ರಾμಕ್‌ ಜಾಮ್‌ ಉಂಟಾಗಿ ಪ್ರಯಾಣಿಕರು ಪರದಾಡಿದರೆ; ಕೋವಿಡ್‌ ನಿಯಮಗಳನ್ನು ಲೆಕ್ಕಿಸದೆ ಗುಂಪು ಸೇರಿದ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಬೀಸಬೇಕಾಯಿತು.

ನಗರದ ಗಾಂಧಿ ವೃತ್ತದಲ್ಲಿರುವ ರಾಯಚೂರು ಹಬ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳನ್ನು ಒಳಗೊಂಡಂತೆ ಕಾಂಗ್ರೆಸ್‌ ಪ್ರತಿನಿಧಿಗಳ ಸಭೆ ಆಯೋಜಿಸಲಾಗಿತ್ತು. ಸಭೆಗೆ ಕಾಂಗ್ರೆಸ್‌ ನ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ, ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಸೇರಿದಂತೆ ಅನೇಕ ಮುಖಂಡರು ಆಗಮಿಸಿದ್ದರು. ಮುಖಂಡರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದರಿಂದ ರಸ್ತೆ ಸಂಪೂರ್ಣ ಕೆಲಕಾಲ ಸಂಚಾರಕ್ಕೆ ಅಡಚಣೆಯಾಯಿತು.

ನಗರದ ಮಾರುಕಟ್ಟೆ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸಂಪರ್ಕ ರಸ್ತೆಯಾದ್ದರಿಂದ ಪ್ರಯಾಣಿಕರಿಗೆ ಪರದಾಡುವಂತಾಯಿತು. ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕರಿಗೆ ಕ್ರೇನ್‌ ಮೂಲಕ ಹಾರ ಹಾಕಲು ಮುಂದಾಗಿದ್ದರಿಂದ ಸಾಕಷ್ಟು ಹೊತ್ತು ಟ್ರಾಫಿಕ್‌ ಜಾಮ್‌ ಉಂಟಾಯಿತು. ಪೊಲೀಸರು ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸ ಪಡುವಂತಾಯಿತು. ಸಭೆಗೆ ಶಾಸಕರು, ಸಂಸದರು, ವಿವಿಧ ಜಿಲ್ಲೆಗಳ ಅಧ್ಯಕ್ಷರು ಸೇರಿದಂತೆ 200ಕ್ಕೂ ಅಧಿಕ ಪ್ರತಿನಿಧಿಗಳು ಆಗಮಿಸಿದ್ದರು. ಎಲ್ಲರೂ ಕಾರುಗಳನ್ನು ತಂದಿದ್ದರಿಂದ ರಸ್ತೆಯಲ್ಲಿ ಕೆಲಕಾಲ ಓಡಾಡುವುದು ಕಷ್ಟ ಎನ್ನುವಂತಾಗಿತ್ತು. ಕೊನೆಗೆ ಪೊಲೀಸರು ಕಾರ್ಯಕರ್ತರನ್ನು ಚದುರಿಸಲು ಲಾಠಿ ಬೀಸಬೇಕಾಯಿತು.

ಸಿದ್ದು-ಡಿಕೆಶಿ ಎದುರೇ ಹೈಡ್ರಾಮಾ
ನಗರದಲ್ಲಿ ಹಮ್ಮಿಕೊಂಡ ಕಾಂಗ್ರೆಸ್‌ ವಿಭಾಗೀಯ ಸಭೆಗೆ ಆಗಮಿಸಿದ ಕಾಂಗ್ರೆಸ್‌ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಎದುರೇ ಕಾರ್ಯಕರ್ತರು ಅತಿರೇಕದ ಅಭಿಮಾನ ತೋರುವ ಮೂಲಕ ಮುಖಂಡರಿಗೆ ಮುಜುಗುರ ಉಂಟು ಮಾಡಿದರು. ನಗರದ ಕಾಂಗ್ರೆಸ್‌ ಕಚೇರಿಗೆ ಮುಖಂಡರು ಬರುತ್ತಿದ್ದಂತೆ ಕಾರ್ಯಕರ್ತರು ಕೋವಿಡ್‌ ನಿಯಮಗಳನ್ನು  ಸಂಪೂರ್ಣ ಗಾಳಿಗೆ ನೂಕು ನುಗ್ಗಲು ಮಾಡಿದರು.

ಜೋರಾಗಿ ಘೋಷಣೆ ಕೂಗಿದ್ದಲ್ಲದೇ ಪಕ್ಷದ ಕಚೇರಿಯೊಳಗೆ ಮುಖಂಡರನ್ನು ಮೇಲೆತ್ತಿ ಕುಣಿದು ಕುಪ್ಪಳಿಸಿದರು. ಕೋವಿಡ್‌ 3ನೇ ಅಲೆ ನಿಯಂತ್ರಣದ ಬಗ್ಗೆ ಸರ್ಕಾರದ ವಿರುದ್ಧ ಟೀಕೆ ಮಾಡುವ ಕಾಂಗ್ರೆಸ್‌ ನಾಯಕರು ಮಾತ್ರ ಕೊರೊನಾ ಬಗ್ಗೆ ಕಿಂಚಿತ್ತೂ ಯೋಚಿಸದಿರುವುದು ವಿಪರ್ಯಾಸ. ಬಹುತೇಕ ಕಾರ್ಯಕರ್ತರು ಮಾಸ್ಕ್ ಹಾಕಿರಲಿಲ್ಲ. ಅಲ್ಲದೇ, ಸುಮಾರು 10 ನಿಮಿಷಗಳ ಕಾಲ ಒಂದೇ ಸಮನೆ ಹಾರಾಟ ಚೀರಾಟ ನಡೆಸಿದ್ದು ನೆರೆದವರಲ್ಲಿ ಬೇಸರ ತರಿಸಿತು. ಅಷ್ಟೇ ಅಲ್ಲದೇ ಬೈಕ್‌ಗಳ ಸೈಲೆನ್ಸರ್‌ ತೆಗೆದು ನಗರದಲ್ಲಿ ವಿವಿಧೆಡೆ ಸಾಕಷ್ಟು ಹೊತ್ತು ಬೈಕ್‌ರ್ಯಾಲಿ ನಡೆಸಿದ್ದು ಸಾರ್ವಜನಿಕರಿಗೆ ಕಿರಿಕಿರಿ ಎನಿಸಿತು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.