ಸಿರವಾರ: ಬಸ್ ನಿಲ್ದಾಣದ ಛಾವಣಿ ಕುಸಿದು ಕಾರ್ಮಿಕ ಸಾವು
Team Udayavani, May 27, 2022, 4:28 PM IST
ಸಿರವಾರ (ರಾಯಚೂರು): ನೂತನ ಬಸ್ ನಿಲ್ದಾಣಕ್ಕಾಗಿ ಹಳೆ ಬಸ್ ನಿಲ್ದಾಣದ ಕಟ್ಟಡ ಬೀಳಿಸುವಾಗ ಛಾವಣಿ, ಗೋಡೆ ಕುಸಿದು ಕಾರ್ಮಿಕ ಸಾವನ್ನಪಿದ ಘಟನೆ ಶುಕ್ರವಾರ ಜರುಗಿದೆ.
ಪಟ್ಟಣದ ಬೆಳಗಾವಿ- ಹೈದರಾಬಾದ್ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ಬಸ್ ನಿಲ್ದಾಣ ಸುಮಾರು 50 ವರ್ಷಗಳ ಹಳೆಯ ಕಟ್ಟಡವಾಗಿದೆ. ಮೂರು ಕೋಟಿ ವೆಚ್ಚದಲ್ಲಿ ನೂತನವಾಗಿ ನಿಲ್ದಾಣ ಕಟ್ಟಡ ನಿರ್ಮಾಣ ಕಾಮಗಾರಿ ಚಾಲನೆ ನೀಡಲಾಗಿತ್ತು.
ಹಳೆಯ ಕಟ್ಟಡವನ್ನು ನೆಲಸಮಗೊಳಿಸಲು ಟೆಂಡರ್ ನೀಡಲಾಗಿತ್ತು. ಕಳೆದೊಂದು ವಾರದಿಂದ ಕಾಮಗಾರಿ ಪ್ರಾರಂಭವಾಗಿದ್ದು, ಇಂದು ಕಾಮಗಾರಿ ಮಾಡುವಾಗ ಕಾರ್ಮಿಕ ಬಾಬು (36) ಎನ್ನುವವರ ಮೇಲೆ ಛಾವಣಿ ಹಾಗೂ ಗೋಡೆ ಕುಸಿತವಾಗಿರುವದರಿಂದ ಸ್ಥಳದಲ್ಲಿಯೇ ವ್ಯಕ್ತಿ ಅಸುನೀಗಿದ್ದಾನೆ.
ಗುತ್ತಿಗೆದಾರರ ನಿರ್ಲಕ್ಷ:- ಹಳೆ ಕಟ್ಟಡವಾಗಿರುವ ಕಾರಣ ಜೆಸಿಬಿ ಯಂತ್ರದಿಂದ ಕಟ್ಟಡವನ್ನು ನೆಲಸಮ ಮಾಡಬೇಕಾಗಿತ್ತು. ಆದರೆ ಕಾರ್ಮಿಕರ ಮೂಲಕ ಕಾಮಗಾರಿ ಮಾಡಿಸಿರುವುದು ಗುತ್ತಿಗೆದಾರರ ನಿರ್ಲಕ್ಷ್ಯವಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ : ರಾಮಲಿಂಗಾ ರೆಡ್ಡಿ
ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ
ಕೆಲಸಕಿದ್ದ ಮನೆಯಲ್ಲಿ ನಗನಾಣ್ಯ ಕದ್ದ ತಾಯಿ-ಮಗಳು
ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಿದ್ದತೆ ಮುಖ್ಯವೆಂದ ಡಿಕೆಶಿ
ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್ ಗೆ 19 ಕೋ ರೂ ಲಾಭ : ತೇಲ್ಕೂರ