ರಾಯಚೂರು: ಕಪ್ಪು ಹುಡುಗ ಬೇಡ ಎಂದಿದ್ದಕ್ಕೆ ತಂಗಿ ಕೊಲೆಗೈದ ಅಣ್ಣ
Team Udayavani, Jul 11, 2021, 1:34 PM IST
ರಾಯಚೂರು: ತಾನು ಮದುವೆ ಆಗುವ ಹುಡುಗ ಕಪ್ಪು ಎಂದು ವಿವಾಹ ನಿರಾಕರಿಸಿದ ತಂಗಿಯನ್ನು ಅಣ್ಣ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಘಟನೆ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ.
ಜು.13ರಂದೇ ಮದುವೆ ನಿಶ್ಚಯವಾಗಿತ್ತು. ಆದರೆ, ಮದುವೆ ಬೇಡ ಎಂದು ಯುವತಿ ಹಠ ಹಿಡಿದ ಕಾರಣ ಕೋಪಗೊಂಡ ಅಣ್ಣ ಈ ಕೃತ್ಯ ಎಸಗಿದ್ದಾನೆ.
ಇದನ್ನೂ ಓದಿ: ಪದ್ಮ ಪ್ರಶಸ್ತಿಗಾಗಿ ಸಾಧಕರನ್ನು ನಾಮನಿರ್ದೇಶನ ಮಾಡಿ: ನಾಗರಿಕರಿಗೆ ಪ್ರಧಾನಿ ಮೋದಿ ವಿನಂತಿ
ಚಂದ್ರಕಲಾ ( 22) ಕೊಲೆಯಾದ ಯುವತಿ. ಅಣ್ಣ ಶ್ಯಾಮಸುಂದರ ಕೊಲೆಗೈದ ಯುವಕ. ಮನೆಯವರು ಮದುವೆಗೆ ಲಗ್ನ ಪತ್ರಿಕೆ ಸಹ ಹಂಚಿಕೆ ಮಾಡಿದ್ದು, ಇಲ್ಲಿಗಾಗಲೇ ಸಾಕಷ್ಟು ಖರ್ಚು ಮಾಡಿದ್ದರು.
ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ