ಆಧಾರ್‌ ನೋಂದಣಿಗೆ ಪರದಾಟ


Team Udayavani, Feb 18, 2020, 1:34 PM IST

rc-tdy-2

ಸಾಂದರ್ಭಿಕ ಚಿತ್ರ

ದೇವದುರ್ಗ: ಪಟ್ಟಣದ ಸಾರ್ವಜನಿಕ ಕ್ಲಬ್‌ ಆವರಣದ ಪಕ್ಕದ ಬಿಎಸ್‌ಎನ್‌ ಎಲ್‌ ಗ್ರಾಹಕರ ಸೇವಾ ಕೇಂದ್ರದಲ್ಲಿ ಆಧಾರ್‌ ನೋಂದಣಿ, ತಿದ್ದುಪಡಿಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಅಧಿಕಾರಿ ರಜೆ, ಬಿಎಸ್ಸೆನ್ನೆಲ್‌ ಕೆಲಸ-ಕಾರ್ಯ ನಿಮಿತ್ತ ತೆರಳಿದಾಗ ಸಾರ್ವಜನಿಕರು ಸೇವಾ ಕೇಂದ್ರಕ್ಕೆ ಬಂದು ಬರಿಗೈಲಿ ವಾಪಸ್‌ ಹೋಗುವಂತಾಗಿದೆ.

ಆಧಾರ್‌ ಕಾರ್ಡ್‌ ಹೊಣೆ: ಮೊಬೈಲ್‌ ಬಳಸುವವರ ಸಂಖ್ಯೆ ಹೆಚ್ಚಿದಂತೆ ಸ್ಥಿರ ದೂರವಾಣಿ ಸಂಪರ್ಕಗಳು ಕಡಿಮೆ ಆಗಿವೆ. ಈ ಕಾರಣಕ್ಕಾಗಿ ಕೇಂದ್ರ ಸರ್ಕಾರ ಗ್ರಾಹಕರ ಸೇವಾ ಕೇಂದ್ರದಲ್ಲಿ ಆಧಾರ್‌ ನೋಂದಣಿಗೆ ವ್ಯವಸ್ಥೆ ಮಾಡಿದೆ. ಇಲ್ಲಿರುವ ಅಧಿಕಾರಿ ಬಿಎಸ್ಸೆನ್ನೆಲ್‌ ಕೆಲಸ ಕಾರ್ಯದ ಜೊತೆಗೆ ಹೆಚ್ಚುವರಿಯಾಗಿ ಆಧಾರ್‌ ತಿದ್ದುಪಡಿ, ನೋಂದಣಿ ಕರ್ತವ್ಯ ನಿರ್ವಹಿಸಬೇಕಿದೆ.

ಅಧಿಕಾರಿ ರಜೆ, ಬಿಎಸ್ಸೆನ್ನೆಲ್‌ ಕಚೇರಿ ಮಿಟಿಂಗ್‌, ದೂರವಾಣಿ ಸಂಪರ್ಕಗಳಲ್ಲಿ ವ್ಯತ್ಯಯವಾದಾಗ ದುರಸ್ತಿ ಇತರೆ ಕಾರ್ಯಕ್ಕೆ ಹೋದಾಗ ಇಲ್ಲಿ ಆಧಾರ್‌ ನೋಂದಣಿ ಸ್ಥಗಿತಗೊಳ್ಳುತ್ತದೆ. ಹೀಗಾಗಿ ಕೆಲವೊಮ್ಮೆ ಸಾರ್ವಜನಿಕರು ಗ್ರಾಹಕರ ಸೇವಾ ಕೇಂದ್ರಕ್ಕೆ ಆಗಮಿಸಿ ತಾಸುಗಟ್ಟಲೇ ನಿಂತು ಕೆಲಸವಾಗದೇ ವಾಪಸ್‌ ಹೋಗುವಂತಾಗಿದೆ.

ಹುದ್ದೆ ಖಾಲಿ: ಬಿಎಸ್‌ಎನ್‌ಎಲ್‌ ಗ್ರಾಹಕರ ಸೇವಾ ಕೇಂದ್ರದಲ್ಲಿ ಬಹುತೇಕ ಹುದ್ದೆಗಳು ಖಾಲಿ ಇವೆ. ಜ್ಯೂನಿಯರ್‌ ಟೆಲಿಕಾಂ ಅಧಿಕಾರಿಯೇ ಎಲ್ಲವನ್ನು ನಿರ್ವಹಿಸಬೇಕಿದೆ. ಕ್ಲರ್ಕ್‌, ಟಿಟಿಎ, ಲೇಬರ್‌ ಸೇರಿ 4 ಜನ ಫೋನ್‌ ಮೆಕ್ಯಾನಿಕ್‌ ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ಖಾಲಿ ಹುದ್ದೆ ಭರ್ತಿಗೆ ಮುಂದಾಗುತ್ತಿಲ್ಲ. ಹೀಗಾಗಿ ಇರುವ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಿದೆ.

ಎಲ್ಲೆಲ್ಲಿ ದೂರವಾಣಿ ಸಂಪರ್ಕ: ಪಟ್ಟಣ ಸೇರಿ ತಾಲೂಕಿನಾದ್ಯಂತ ಅರಕೇರಾ, ಗಬ್ಬೂರು, ಜಾಲಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ದೂರವಾಣಿ ಮತ್ತು ಡಾಟಾ ಸಂಪರ್ಕ ಇವೆ. ಅರಕೇರಾದಲ್ಲಿ 20, ಗಬ್ಬೂರು 20, ಜಾಲಹಳ್ಳಿ ಗ್ರಾಮದಲ್ಲಿ 35 ದೂರವಾಣಿ ಸೌಲಭ್ಯ ಕಲ್ಪಿಸಲಾಗಿದೆ. ಇಲ್ಲಿ ದೂರವಾಣಿ ಸೇವೆಯಲ್ಲಿ ವ್ಯತ್ಯಯವಾದಾಗ ಗ್ರಾಹಕರ ಸೇವಾ ಕೇಂದ್ರದಲ್ಲಿನ ಅಧಿಕಾರಿಯೇ ಸ್ಥಳಕ್ಕೆ ತೆರಳಿ ಸರಿಪಡಿಸಬೇಕಿದೆ. ಇನ್ನು ಬಿ.ಗಣೇಕಲ್‌, ಹಿರೇಬೂದೂರು, ಕೊಪ್ಪರ ಸೇರಿ ಇತರೆಡೆ ಬಿಎಸ್‌ಎನ್‌ಎಲ್‌ ಟವರ್‌ ಅಳವಡಿಸಲಾಗಿದೆ. ಇಲ್ಲೂ ತಾಂತ್ರಿಕ ಸಮಸ್ಯೆ ಎದುರಾದರೆ ಅವರೇ ನಿರ್ವಹಣೆ ಮಾಡಬೇಕಿದೆ.

ಕಟ್ಟಡ ಶಿಥಿಲ: ಇನ್ನು ಬಿಎಸ್ಸೆನ್ನೆಲ್‌ ಗ್ರಾಹಕರ ಸೇವಾ ಕೇಂದ್ರ ನಿರ್ವಹಣೆ ಕೊರತೆಯಿಂದಾಗಿ ಎಲ್ಲೆಂದರಲ್ಲಿ ಬಿರುಕು ಬಿಟ್ಟು ಶಿಥಿಲಗೊಂಡಿದೆ. ಸುಮಾರು 30 ವರ್ಷದ ಹಿಂದೆ ಈ ಕಟ್ಟಡ ನಿರ್ಮಿಸಲಾಗಿದೆ.

ವೇತನವಿಲ್ಲ: ಬಿಎಸ್‌ಎನ್‌ಎಲ್‌ ಗ್ರಾಹಕರ ಸೇವಾ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ದಿನಗೂಲಿ ಸಿಬ್ಬಂದಿಗೆ ವರ್ಷದಿಂದ ವೇತನವಾಗಿಲ್ಲ. ಕುಟುಂಬ ನಿರ್ವಹಣೆಗೆ ಸಂಕಷ್ಟ ಎದುರಿಸುವಂತಾಗಿದೆ ಎಂದು ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.

ಬಿಎಸ್ಸೆನ್ನೆಲ್‌ ಕಚೇರಿಯಲ್ಲಿ ಹುದ್ದೆಗಳು ಖಾಲಿ ಇವೆ. ಕೆಲಸ ಕಾರ್ಯಗಳಿಗೆ ಸ್ವಲ್ಪ ತೊಂದರೆ ಆಗುತ್ತಿದೆ. ಆಧಾರ್‌ ಕಾರ್ಡ್‌ ನೋಂದಣಿ, ತಿದ್ದುಪಡಿ ಜವಾಬ್ದಾರಿ ವಹಿಸಲಾಗಿದೆ. ಕೇಬಲ್‌ ಸಮಸ್ಯೆ ಬಂದಾಗ ದುರಸ್ತಿಗೆ ಹೋಗಬೇಕಿರುವುದರಿಂದ ಜನರಿಗೆ ಆಧಾರ್‌ ಸೇವಾ ಸೌಲಭ್ಯ ನೀಡಲು ಆಗುತ್ತಿಲ್ಲ. -ಕಾಂತಿಭೂಷಣ, ಜ್ಯೂನಿಯರ್‌ ಟೆಲಿಕಾಂ ಅಧಿಕಾರಿ

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.