ಅವೈಜ್ಞಾನಿಕ ಕಾಮಗಾರಿ; ರೈತರಿಗೆ ಕಿರಿಕಿರಿ

ಇನ್ನೂ ಮೇಲ್ಭಾಗದಲ್ಲಿ ಚರಂಡಿಗಳ ಮೇಲೆಲ್ಲ ಕಟ್ಟಡ ನಿರ್ಮಿಸಿದ್ದರಿಂದ ನಿರ್ವಹಣೆಗೆ ಸಮಸ್ಯೆಯಾಗುತ್ತಿದೆ.

Team Udayavani, Jul 7, 2021, 6:57 PM IST

ಅವೈಜ್ಞಾನಿಕ ಕಾಮಗಾರಿ; ರೈತರಿಗೆ ಕಿರಿಕಿರಿ

ರಾಯಚೂರು: ಸಕಾಲಕ್ಕೆ ಮಳೆ ಬಾರದಿದ್ದರೆ ಪೇಚಾಡುವ ರೈತರು, ಎಪಿಎಂಸಿ ಧಾನ್ಯ ತಂದಾಗ ಮಳೆ ಬಾರದಿರಲಿ ಎಂದು ಬೇಡುವಂತಾಗಿದೆ. ಜೋರು ಮಳೆ ಬಂದರೆ ನೀರೆಲ್ಲ ನುಗ್ಗಿ ಧಾನ್ಯಕ್ಕೆ ಕುತ್ತುಂಟಾಗುವ ಸ್ಥಿತಿ ಪ್ರತಿ ವರ್ಷ ಎದುರಾಗುತ್ತಿದೆ.

ಪ್ರತಿ ವರ್ಷ ಈ ಸಮಸ್ಯೆ ಎದುರಾಗುತ್ತಿದ್ದರೂ ಎಪಿಎಂಸಿ ಆಡಳಿತ ಮಂಡಳಿ ಮಾತ್ರ ಮೌನಕ್ಕೆ ಶರಣಾದಂತಿದೆ. ಮಳೆ ನೀರು ಹೀಗೆ ನುಗ್ಗಲು ಇಲ್ಲಿ ನಿರ್ವಹಣೆಗೊಂಡ ಚರಂಡಿಯ ಅವೈಜ್ಞಾನಿಕ ಕಾಮಗಾರಿ ಒಂದೆಡೆಯಾದರೆ; ಇನ್ನೂ ಅನೇಕ ಕಾರಣಗಳಿವೆ ಎಂದು ಎಪಿಎಂಸಿ ಅಧಿಕಾರಿಗಳೇ ಒಪ್ಪಿಕೊಳ್ಳುತ್ತಿದ್ದಾರೆ. ಸೋಮವಾರ ಕೂಡ ಮಳೆ ನೀರು ನುಗ್ಗಿದ ಪರಿಣಾಮ ಸಾಕಷ್ಟು ಭತ್ತ, ಈರುಳ್ಳಿ ಸೇರಿ ವಿವಿಧ ಬೆಳೆಗೆ ಆತಂಕ ಎದುರಾಗಿತ್ತು. ಕಳೆದ ವರ್ಷ ಕೂಡ ಇಂತಹದ್ದೇ ಸನ್ನಿವೇಶ ಏರ್ಪಟ್ಟಾಗ, ಸಮಜಾಯಿಷಿ ನೀಡಿದ್ದ ಅಧಿಕಾರಿಗಳು ಶೀಘ್ರದಲ್ಲೇ ಸಮಸ್ಯೆ ಪರಿಹರಿಸುವ ಮಾತನ್ನಾಡಿದ್ದರು.

ಹಲವು ಕಾರಣಗಳು: ಈ ರೀತಿ ಸಮಸ್ಯೆ ಎದುರಾಗಲು ಕೇವಲ ಚರಂಡಿಯೊಂದೇ ಕಾರಣವಲ್ಲ. ಮೇಲೆ ನಿರ್ಮಿಸಿದ ಶೆಡ್‌ಗಳು ಕೂಡ ಅಲ್ಲಲ್ಲಿ ರಂಧ್ರ ಬಿದ್ದಿದ್ದು, ನೀರು ಸೋರಿಯಾಗುತ್ತಿದೆ. ಇದರಿಂದ ಧಾನ್ಯಗಳಿಗೆ ಸಮಸ್ಯೆ ಎದುರಾಗುತ್ತಿದೆ. ಇನ್ನೂ ಎಪಿಎಂಸಿ ಮೇಲ್ಭಾಗದಲ್ಲಿ ಸಾಕಷ್ಟು ಕಡೆ ಸ್ಥಳ ಒತ್ತುವರಿಯಾಗಿದ್ದು, ಚರಂಡಿಗಳ ಮೇಲೆಲ್ಲ ಕಟ್ಟಡಗಳನ್ನು ನಿರ್ಮಿಸಿಕೊಳ್ಳಲಾಗಿದೆ. ಇದರಿಂದ ಚರಂಡಿಗಳ ಸಮರ್ಪಕ ನಿರ್ವಹಣೆ ಕೂಡ ಆಗುತ್ತಿಲ್ಲ. ಇನ್ನೂ ಚರಂಡಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಸರಿಯಾಗಿಲ್ಲ. ಇದರಿಂದ ಮಳೆ ಬಂದಾಗ ನೀರು ಶೇಖರಣೆಯಾಗಿ ಎಪಿಎಂಸಿಗೆ ನುಗ್ಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗುತ್ತಿದೆ.

ಅಭಿವೃದ್ಧಿಗೆ ಹಣಾಭಾವ: ಎಪಿಎಂಸಿಗೆ ಮುಖ್ಯವಾಗಿ ಬರುತ್ತಿದ್ದ ಆದಾಯ ನಿಂತು ಹೋಗಿದೆ. ಎಪಿಎಂಸಿ ಖಾಸಗೀಕರಣ ಮಸೂದೆ  ಜಾರಿಯಾದಾಗಿನಿಂದ ಸಾಕಷ್ಟು ಪ್ರಮಾಣದ ಆದಾಯ ನಿಂತು ಹೋಗಿದೆ. ಈಗಿರುವ ಪರಿಸ್ಥಿತಿಯಲ್ಲಿ ಸಿಬ್ಬಂದಿಗೆ ವೇತನ, ಮೂಲ ಸೌಲಭ್ಯಗಳಿಗೆ ಅನುದಾನ ಸಾಲದಾಗಿದೆ. ಇನ್ನೂ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಕೊರತೆ ಇದೆ ಎನ್ನುವುದು ಮೂಲಗಳ ವಿವರಣೆ. ಆದರೆ, ರೈತರ ಸಮಸ್ಯೆ ವಿಚಾರಕ್ಕೆ ಬಂದಾಗ ಜಿಲ್ಲಾಡಳಿತ ಇಲ್ಲವೇ ನಗರಾಡಳಿತ ಕೂಡಲೇ ಈ ಸಮಸ್ಯೆ ಪರಿಷ್ಕಾರ ಕಂಡುಕೊಳ್ಳಬೇಕು ಎಂಬುದು ರೈತ ಮುಖಂಡರ ಒತ್ತಾಸೆ.

ಎಪಿಎಂಸಿಯಲ್ಲಿ ಮಳೆ ಬಂದರೆ ಈ ರೀತಿ ಸಮಸ್ಯೆ ಎದುರಾಗುವ ವಿಚಾರ ನನ್ನ ಗಮನಕ್ಕಿರಲಿಲ್ಲ. ನಮ್ಮ ಸಿಬ್ಬಂದಿ ಮಾಹಿತಿ ನೀಡಿದ್ದರೆ ಏನಾದರೂ ಕ್ರಮ ವಹಿಸುತ್ತಿದ್ದೆ. ಮುಖ್ಯವಾಗಿ ಚರಂಡಿಯದ್ದೇ ಸಮಸ್ಯೆ ಇದೆ. ಅದರ ಜತೆಗೆ ಮೇಲೆ ಅಳವಡಿಸಿರುವ ಶೆಡ್‌ಗಳು ಕೂಡ ಸೋರಿಕೆಯಾಗುತ್ತಿವೆ. ಅಲ್ಲಿ ಬಿದ್ದಿರುವ ರಂಧ್ರಗಳನ್ನು ಮುಚ್ಚಿಸಲು ಕ್ರಮ ವಹಿಸಲಾಗುವುದು. ಇನ್ನೂ ಮೇಲ್ಭಾಗದಲ್ಲಿ ಚರಂಡಿಗಳ ಮೇಲೆಲ್ಲ ಕಟ್ಟಡ ನಿರ್ಮಿಸಿದ್ದರಿಂದ ನಿರ್ವಹಣೆಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸಮಗ್ರ ಮಾಹಿತಿ ಪಡೆದು ಕ್ರಮ ವಹಿಸಲಾಗುವುದು.
ಬಿ.ಎಂ.ಶ್ರೀನಿವಾಸ, ಎಪಿಎಂಸಿ ಕಾರ್ಯದರ್ಶಿ

ಪ್ರತಿ ವರ್ಷ ಇದೇ ಸಮಸ್ಯೆಯಾಗಿದೆ. ಬೆಳೆ ಹೊಲದಲ್ಲಿದ್ದಾಗ ಮಳೆ ಬರದೆ ಪರದಾಡಬೇಕು. ಬೆಳೆ ಎಪಿಎಂಸಿಗೆ ತೆಗೆದುಕೊಂಡ ಬಂದರೆ ಮಳೆ ಬಂದರೆ ಗೊಳಾಡಬೇಕು. ಅ ಧಿಕಾರಿಗಳಿಗೆ ಪದೇಪದೇ ಹೇಳುವುದಕ್ಕೆ ಆಗುವುದಿಲ್ಲ. ರೈತರ ಪರಿಸ್ಥಿತಿಯನ್ನು ಅವರೇ ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ಚರಂಡಿ ವ್ಯವಸ್ಥೆ ಸರಿ ಮಾಡಿ ಸಮಸ್ಯೆ ಬಗೆ ಹರಿಸಲಿ.
ಲಕ್ಷ್ಮಣಗೌಡ ಕಡಗಂದೊಡ್ಡಿ, ರೈತ ಮುಖಂಡ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.